AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಒಂದು ತಿಂಗಳ ಚಿಕಿತ್ಸೆ ವಿಫಲ; ಕೊವಿಡ್​ಗೆ ಬಲಿಯಾದ ಖ್ಯಾತ ಗಾಯಕಿ

ತಪು ಅವರಿಗೆ ಕಳೆದ ತಿಂಗಳ ಹಿಂದೆ ಕೊವಿಡ್​ ಕಾಣಿಸಿಕೊಂಡಿತ್ತು. ಸಣ್ಣ ಪ್ರಮಾಣದಲ್ಲಿ ಜ್ವರ ಇದ್ದಿದ್ದರಿಂದ ಅವರು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ದಿನ ಕಳೆದಂತೆ ಗಂಭೀರವಾಗುತ್ತಾ ಬಂದಿತ್ತು.

ಸತತ ಒಂದು ತಿಂಗಳ ಚಿಕಿತ್ಸೆ ವಿಫಲ; ಕೊವಿಡ್​ಗೆ ಬಲಿಯಾದ ಖ್ಯಾತ ಗಾಯಕಿ
ತಪು ಮಿಶ್ರಾ
ರಾಜೇಶ್ ದುಗ್ಗುಮನೆ
| Edited By: |

Updated on: Jun 20, 2021 | 3:11 PM

Share

ಸೆಲೆಬ್ರಿಟಿಗಳ ವಲಯಕ್ಕೆ ಕೊವಿಡ್​ ದುಸ್ವಪ್ನವಾಗಿ ಕಾಡುತ್ತಿದೆ. ಈಗಾಗಲೇ ಸಾಕಷ್ಟು, ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರು ಕೊವಿಡ್​ನಿಂದ ನಿಧನ ಹೊಂದಿದ್ದಾರೆ. ಈಗ ಒಡಿಶಾದ ಖ್ಯಾತ ಗಾಯಕಿ ತಪು ಮಿಶ್ರಾ ಕೊವಿಡ್​ನಿಂದ ನಿಧನ ಹೊಂದಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಸಾಕಷ್ಟು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ತಪು ಅವರಿಗೆ ಕಳೆದ ತಿಂಗಳು ಕೊವಿಡ್​ ಕಾಣಿಸಿಕೊಂಡಿತ್ತು. ಸಣ್ಣ ಪ್ರಮಾಣದಲ್ಲಿ ಜ್ವರ ಇದ್ದಿದ್ದರಿಂದ ಅವರು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ದಿನ ಕಳೆದಂತೆ ಗಂಭೀರವಾಗುತ್ತಾ ಬಂದಿತ್ತು. ಹೀಗಾಗಿ, ಮೇ 19ರಂದು ಅವರನ್ನು ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಸತತ ಒಂದು ತಿಂಗಳ ಚಿಕಿತ್ಸೆ ಪಡೆದ ನಂತರದಲ್ಲಿ ಅವರು ಮೃತಪಟ್ಟಿದ್ದಾರೆ.

ಕೊವಿಡ್​ ಕಾಣಿಸಿಕೊಂಡ ನಂತರದಲ್ಲಿ ತಪು ಅವರ ಶ್ವಾಸಕೋಶಕ್ಕೆ ತೀವ್ರ ಹಾನಿ ಉಂಟಾಗಿತ್ತು. ಕಳೆದ ಎರಡು ದಿನಗಳಿಂದ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿತ್ತು. ಈಗ ಅವರು ಮೃತಪಟ್ಟಿರುವುದು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ತಪು ಮಿಶ್ರಾ ಅವರು ಸಂಬಾಲ್​ಪುರ್​ನಲ್ಲಿ ಜನಿಸಿ ಅಲ್ಲಿಯೇ ಶಿಕ್ಷಣ ಮುಗಿಸಿದರು. ಸಣ್ಣ ವಯಸ್ಸಿಗೇ ಸಂಗೀತ ಲೋಕಕ್ಕೆ ಕಾಲಿಟ್ಟರು. ಗಾಯಕಿಯಾಗಿ ಸುಮಾರು 500ಕ್ಕೂ ಹೆಚ್ಚು ಹಾಡುಗಳನ್ನು ಅವರು ಹಾಡಿದ್ದರು. ಒಡಿಶಾ ಭಾಷೆಯಲ್ಲಿ ಮಾತ್ರವಲ್ಲದೆ ಬೆಂಗಾಲಿ ಹಾಗೂ ಹಿಂದಿಯಲ್ಲೂ ತಪು ಸಾಕಷ್ಟು ಹಾಡಿಗೆ ಧ್ವನಿಯಾಗಿದ್ದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಅವರು ತಪು ಸಾವಿಗೆ ಸಂಪಾತ ಸೂಚಿಸಿದ್ದಾರೆ. ‘ತಪು ಸಾವಿನ ಸುದ್ದಿ ಕೇಳಿ ಬೇಸರವಾಯಿತು. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ’ ಎಂದಿದ್ದಾರೆ. ನಟ ಹಾಗೂ ಸಂಸದ ಅನುಭವ್​ ಕೂಡ ತಪು ಸಾವಿಗೆ ಸಂಪಾತ ಸೂಚಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!