AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತತ ಒಂದು ತಿಂಗಳ ಚಿಕಿತ್ಸೆ ವಿಫಲ; ಕೊವಿಡ್​ಗೆ ಬಲಿಯಾದ ಖ್ಯಾತ ಗಾಯಕಿ

ತಪು ಅವರಿಗೆ ಕಳೆದ ತಿಂಗಳ ಹಿಂದೆ ಕೊವಿಡ್​ ಕಾಣಿಸಿಕೊಂಡಿತ್ತು. ಸಣ್ಣ ಪ್ರಮಾಣದಲ್ಲಿ ಜ್ವರ ಇದ್ದಿದ್ದರಿಂದ ಅವರು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ದಿನ ಕಳೆದಂತೆ ಗಂಭೀರವಾಗುತ್ತಾ ಬಂದಿತ್ತು.

ಸತತ ಒಂದು ತಿಂಗಳ ಚಿಕಿತ್ಸೆ ವಿಫಲ; ಕೊವಿಡ್​ಗೆ ಬಲಿಯಾದ ಖ್ಯಾತ ಗಾಯಕಿ
ತಪು ಮಿಶ್ರಾ
ರಾಜೇಶ್ ದುಗ್ಗುಮನೆ
| Edited By: |

Updated on: Jun 20, 2021 | 3:11 PM

Share

ಸೆಲೆಬ್ರಿಟಿಗಳ ವಲಯಕ್ಕೆ ಕೊವಿಡ್​ ದುಸ್ವಪ್ನವಾಗಿ ಕಾಡುತ್ತಿದೆ. ಈಗಾಗಲೇ ಸಾಕಷ್ಟು, ಕಲಾವಿದರು, ನಿರ್ದೇಶಕರು ಹಾಗೂ ನಿರ್ಮಾಪಕರು ಕೊವಿಡ್​ನಿಂದ ನಿಧನ ಹೊಂದಿದ್ದಾರೆ. ಈಗ ಒಡಿಶಾದ ಖ್ಯಾತ ಗಾಯಕಿ ತಪು ಮಿಶ್ರಾ ಕೊವಿಡ್​ನಿಂದ ನಿಧನ ಹೊಂದಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಸಾಕಷ್ಟು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ತಪು ಅವರಿಗೆ ಕಳೆದ ತಿಂಗಳು ಕೊವಿಡ್​ ಕಾಣಿಸಿಕೊಂಡಿತ್ತು. ಸಣ್ಣ ಪ್ರಮಾಣದಲ್ಲಿ ಜ್ವರ ಇದ್ದಿದ್ದರಿಂದ ಅವರು ಮನೆಯಲ್ಲೇ ಕ್ವಾರಂಟೈನ್​ ಆಗಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ದಿನ ಕಳೆದಂತೆ ಗಂಭೀರವಾಗುತ್ತಾ ಬಂದಿತ್ತು. ಹೀಗಾಗಿ, ಮೇ 19ರಂದು ಅವರನ್ನು ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈಗ ಸತತ ಒಂದು ತಿಂಗಳ ಚಿಕಿತ್ಸೆ ಪಡೆದ ನಂತರದಲ್ಲಿ ಅವರು ಮೃತಪಟ್ಟಿದ್ದಾರೆ.

ಕೊವಿಡ್​ ಕಾಣಿಸಿಕೊಂಡ ನಂತರದಲ್ಲಿ ತಪು ಅವರ ಶ್ವಾಸಕೋಶಕ್ಕೆ ತೀವ್ರ ಹಾನಿ ಉಂಟಾಗಿತ್ತು. ಕಳೆದ ಎರಡು ದಿನಗಳಿಂದ ಅವರ ದೇಹ ಚಿಕಿತ್ಸೆಗೆ ಸ್ಪಂದಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಿತ್ತು. ಈಗ ಅವರು ಮೃತಪಟ್ಟಿರುವುದು ಸಂಗೀತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ತಪು ಮಿಶ್ರಾ ಅವರು ಸಂಬಾಲ್​ಪುರ್​ನಲ್ಲಿ ಜನಿಸಿ ಅಲ್ಲಿಯೇ ಶಿಕ್ಷಣ ಮುಗಿಸಿದರು. ಸಣ್ಣ ವಯಸ್ಸಿಗೇ ಸಂಗೀತ ಲೋಕಕ್ಕೆ ಕಾಲಿಟ್ಟರು. ಗಾಯಕಿಯಾಗಿ ಸುಮಾರು 500ಕ್ಕೂ ಹೆಚ್ಚು ಹಾಡುಗಳನ್ನು ಅವರು ಹಾಡಿದ್ದರು. ಒಡಿಶಾ ಭಾಷೆಯಲ್ಲಿ ಮಾತ್ರವಲ್ಲದೆ ಬೆಂಗಾಲಿ ಹಾಗೂ ಹಿಂದಿಯಲ್ಲೂ ತಪು ಸಾಕಷ್ಟು ಹಾಡಿಗೆ ಧ್ವನಿಯಾಗಿದ್ದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್​ ಅವರು ತಪು ಸಾವಿಗೆ ಸಂಪಾತ ಸೂಚಿಸಿದ್ದಾರೆ. ‘ತಪು ಸಾವಿನ ಸುದ್ದಿ ಕೇಳಿ ಬೇಸರವಾಯಿತು. ಅವರ ಕುಟುಂಬದವರಿಗೆ ಈ ನೋವನ್ನು ಭರಿಸುವ ಶಕ್ತಿ ದೇವರು ನೀಡಲಿ’ ಎಂದಿದ್ದಾರೆ. ನಟ ಹಾಗೂ ಸಂಸದ ಅನುಭವ್​ ಕೂಡ ತಪು ಸಾವಿಗೆ ಸಂಪಾತ ಸೂಚಿಸಿದ್ದಾರೆ.

ಇದನ್ನೂ ಓದಿ: ಖ್ಯಾತ ಕಾಲಿವುಡ್​ ನಿರ್ದೇಶಕ ಜಿಎನ್​ ರಂಗರಾಜನ್​ ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್