AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
| Edited By: |

Updated on: May 20, 2021 | 5:25 PM

Share

ಭಾರತದ ಹಲವು ರಾಜ್ಯಗಳು ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಭಾರೀ ತೊಂದರೆ ಅನುಭವಿಸಿವೆ. ಆರಂಭದಲ್ಲಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಬ್ಬರ ತೋರಿದ್ದ ಈ ಚಂಡಮಾರುತ ನಂತರ ಮಹಾರಾಷ್ಟ್ರದತ್ತ ತಿರುಗಿತ್ತು. ಅಲ್ಲಿ ಈ ಚಂಡಮಾರುತ ಸಾಕಷ್ಟು ಹಾನಿ ಉಂಟು ಮಾಡಿದೆ. ಈ ವೇಳೆ ಸಲ್ಮಾನ್​ ಖಾನ್​ ನಟನೆಯ ಟೈಗರ್ 3 ಸಿನಿಮಾ ಸೆಟ್​ ಕೂಡ ಹಾನಿಗೆ ಒಳಗಾಗಿದೆ.

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ಅನೇಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ. ಟೈಗರ್​-3 ಸೆಟ್​ ಕೂಡ ಈ ಚಂಡಮಾರುತದ ಅಬ್ಬರಕ್ಕೆ ಸಿಲುಕಿದೆ.

ಗೋರೆಗಾಂವ್​ನಲ್ಲಿರುವ ಸ್ಟುಡಿಯೋದಲ್ಲಿ ದುಬೈ ಮಾರುಕಟ್ಟೆಯ ಸೆಟ್​ ಒಂದನ್ನು ಹಾಕಲಾಗಿತ್ತು. ಕೆಲವು ದೃಶ್ಯಗಳನ್ನು ಇಲ್ಲಿ ಶೂಟ್​ ಕೂಡ ಮಾಡಲಾಗಿತ್ತು. ಆದರೆ, ಕೊವಿಡ್​ನಿಂದಾಗಿ ಶೂಟಿಂಗ್​ ಅರ್ಧಕ್ಕೆ ನಿಂತಿದೆ. ಆದರೆ, ಈಗ ಚಂಡಮಾರುತದ ಅಬ್ಬರಕ್ಕೆ ಸೆಟ್​ ಕುಸಿದಿದೆ. ಈ ವೇಳೆ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

ಅಜಯ್​ ದೇವಗನ್​ ನಟನೆಯ ಮೈದಾನ್​ ಸಿನಿಮಾದ ಸೆಟ್​ ಮುಂಬೈನ ಹೊರಭಾಗದಲ್ಲಿ ನಿರ್ಮಾಣ ಮಾಡಲಾಗಿತ್ತು. ಇದು ಕೂಡ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಕ್ಕು ನಾಶವಾಗಿದೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಸೆಟ್​ ಸ್ವಲ್ಪವೇ ಹಾನಿಗೆ ಒಳಗಾಗಿದೆ. ಚಿತ್ರದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಕಳೆದ ವರ್ಷ ಸೆಟ್​ ಅನ್ನು ಸಂಪೂರ್ಣವಾಗಿ ಮುಚ್ಚಿದ್ದರು. ಈ ಮೂಲಕ ಚಂಡಮಾರುತದಂತೆ ಸಮಸ್ಯೆ ಎದುರಾದರೆ ಅದನ್ನು ರಕ್ಷಿಸಬಹುದು ಎಂಬುದು ಅವರ ಪ್ಲ್ಯಾನ್​ ಆಗಿತ್ತು.

ಕೊವಿಡ್​ ಕಾರಣದಿಂದ ಮಹಾರಾಷ್ಟ್ರದಲ್ಲಿ ಶೂಟಿಂಗ್​ ಸಂಪೂರ್ಣವಾಗಿ ನಿಂತಿದೆ. ಜೂನ್​ ವೇಳೆಗೆ ಮತ್ತೆ ಶೂಟಿಂಗ್​ ಆರಂಭಿಸುವ ಆಲೋಚನೆ ಚಿತ್ರತಂಡದ್ದಾಗಿತ್ತು. ಆದರೆ, ಈಗ ಸೈಕ್ಲೋನ್​ ಕಾರಣದಿಂದ ಸಾಕಷ್ಟು ಸೆಟ್​ಗಳು ಹಾನಿಗೆ ಒಳಗಾಗಿದ್ದು, ಶೂಟಿಂಗ್​ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

Radhe: ಸಲ್ಮಾನ್ ಖಾನ್​ ಬಾಡಿ ಡಬಲ್ ಕಲಾವಿದನ ಫೋಟೋ ವೈರಲ್; ಫ್ಯಾನ್ಸ್​​ಗೆ ಅಚ್ಚರಿಯೋ ಅಚ್ಚರಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್