AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
| Edited By: |

Updated on: May 20, 2021 | 5:25 PM

Share

ಭಾರತದ ಹಲವು ರಾಜ್ಯಗಳು ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಭಾರೀ ತೊಂದರೆ ಅನುಭವಿಸಿವೆ. ಆರಂಭದಲ್ಲಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಬ್ಬರ ತೋರಿದ್ದ ಈ ಚಂಡಮಾರುತ ನಂತರ ಮಹಾರಾಷ್ಟ್ರದತ್ತ ತಿರುಗಿತ್ತು. ಅಲ್ಲಿ ಈ ಚಂಡಮಾರುತ ಸಾಕಷ್ಟು ಹಾನಿ ಉಂಟು ಮಾಡಿದೆ. ಈ ವೇಳೆ ಸಲ್ಮಾನ್​ ಖಾನ್​ ನಟನೆಯ ಟೈಗರ್ 3 ಸಿನಿಮಾ ಸೆಟ್​ ಕೂಡ ಹಾನಿಗೆ ಒಳಗಾಗಿದೆ.

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ಅನೇಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ. ಟೈಗರ್​-3 ಸೆಟ್​ ಕೂಡ ಈ ಚಂಡಮಾರುತದ ಅಬ್ಬರಕ್ಕೆ ಸಿಲುಕಿದೆ.

ಗೋರೆಗಾಂವ್​ನಲ್ಲಿರುವ ಸ್ಟುಡಿಯೋದಲ್ಲಿ ದುಬೈ ಮಾರುಕಟ್ಟೆಯ ಸೆಟ್​ ಒಂದನ್ನು ಹಾಕಲಾಗಿತ್ತು. ಕೆಲವು ದೃಶ್ಯಗಳನ್ನು ಇಲ್ಲಿ ಶೂಟ್​ ಕೂಡ ಮಾಡಲಾಗಿತ್ತು. ಆದರೆ, ಕೊವಿಡ್​ನಿಂದಾಗಿ ಶೂಟಿಂಗ್​ ಅರ್ಧಕ್ಕೆ ನಿಂತಿದೆ. ಆದರೆ, ಈಗ ಚಂಡಮಾರುತದ ಅಬ್ಬರಕ್ಕೆ ಸೆಟ್​ ಕುಸಿದಿದೆ. ಈ ವೇಳೆ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

ಅಜಯ್​ ದೇವಗನ್​ ನಟನೆಯ ಮೈದಾನ್​ ಸಿನಿಮಾದ ಸೆಟ್​ ಮುಂಬೈನ ಹೊರಭಾಗದಲ್ಲಿ ನಿರ್ಮಾಣ ಮಾಡಲಾಗಿತ್ತು. ಇದು ಕೂಡ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಕ್ಕು ನಾಶವಾಗಿದೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಸೆಟ್​ ಸ್ವಲ್ಪವೇ ಹಾನಿಗೆ ಒಳಗಾಗಿದೆ. ಚಿತ್ರದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಕಳೆದ ವರ್ಷ ಸೆಟ್​ ಅನ್ನು ಸಂಪೂರ್ಣವಾಗಿ ಮುಚ್ಚಿದ್ದರು. ಈ ಮೂಲಕ ಚಂಡಮಾರುತದಂತೆ ಸಮಸ್ಯೆ ಎದುರಾದರೆ ಅದನ್ನು ರಕ್ಷಿಸಬಹುದು ಎಂಬುದು ಅವರ ಪ್ಲ್ಯಾನ್​ ಆಗಿತ್ತು.

ಕೊವಿಡ್​ ಕಾರಣದಿಂದ ಮಹಾರಾಷ್ಟ್ರದಲ್ಲಿ ಶೂಟಿಂಗ್​ ಸಂಪೂರ್ಣವಾಗಿ ನಿಂತಿದೆ. ಜೂನ್​ ವೇಳೆಗೆ ಮತ್ತೆ ಶೂಟಿಂಗ್​ ಆರಂಭಿಸುವ ಆಲೋಚನೆ ಚಿತ್ರತಂಡದ್ದಾಗಿತ್ತು. ಆದರೆ, ಈಗ ಸೈಕ್ಲೋನ್​ ಕಾರಣದಿಂದ ಸಾಕಷ್ಟು ಸೆಟ್​ಗಳು ಹಾನಿಗೆ ಒಳಗಾಗಿದ್ದು, ಶೂಟಿಂಗ್​ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

Radhe: ಸಲ್ಮಾನ್ ಖಾನ್​ ಬಾಡಿ ಡಬಲ್ ಕಲಾವಿದನ ಫೋಟೋ ವೈರಲ್; ಫ್ಯಾನ್ಸ್​​ಗೆ ಅಚ್ಚರಿಯೋ ಅಚ್ಚರಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ