AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: May 20, 2021 | 5:25 PM

Share

ಭಾರತದ ಹಲವು ರಾಜ್ಯಗಳು ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಭಾರೀ ತೊಂದರೆ ಅನುಭವಿಸಿವೆ. ಆರಂಭದಲ್ಲಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಬ್ಬರ ತೋರಿದ್ದ ಈ ಚಂಡಮಾರುತ ನಂತರ ಮಹಾರಾಷ್ಟ್ರದತ್ತ ತಿರುಗಿತ್ತು. ಅಲ್ಲಿ ಈ ಚಂಡಮಾರುತ ಸಾಕಷ್ಟು ಹಾನಿ ಉಂಟು ಮಾಡಿದೆ. ಈ ವೇಳೆ ಸಲ್ಮಾನ್​ ಖಾನ್​ ನಟನೆಯ ಟೈಗರ್ 3 ಸಿನಿಮಾ ಸೆಟ್​ ಕೂಡ ಹಾನಿಗೆ ಒಳಗಾಗಿದೆ.

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ಅನೇಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ. ಟೈಗರ್​-3 ಸೆಟ್​ ಕೂಡ ಈ ಚಂಡಮಾರುತದ ಅಬ್ಬರಕ್ಕೆ ಸಿಲುಕಿದೆ.

ಗೋರೆಗಾಂವ್​ನಲ್ಲಿರುವ ಸ್ಟುಡಿಯೋದಲ್ಲಿ ದುಬೈ ಮಾರುಕಟ್ಟೆಯ ಸೆಟ್​ ಒಂದನ್ನು ಹಾಕಲಾಗಿತ್ತು. ಕೆಲವು ದೃಶ್ಯಗಳನ್ನು ಇಲ್ಲಿ ಶೂಟ್​ ಕೂಡ ಮಾಡಲಾಗಿತ್ತು. ಆದರೆ, ಕೊವಿಡ್​ನಿಂದಾಗಿ ಶೂಟಿಂಗ್​ ಅರ್ಧಕ್ಕೆ ನಿಂತಿದೆ. ಆದರೆ, ಈಗ ಚಂಡಮಾರುತದ ಅಬ್ಬರಕ್ಕೆ ಸೆಟ್​ ಕುಸಿದಿದೆ. ಈ ವೇಳೆ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

ಅಜಯ್​ ದೇವಗನ್​ ನಟನೆಯ ಮೈದಾನ್​ ಸಿನಿಮಾದ ಸೆಟ್​ ಮುಂಬೈನ ಹೊರಭಾಗದಲ್ಲಿ ನಿರ್ಮಾಣ ಮಾಡಲಾಗಿತ್ತು. ಇದು ಕೂಡ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಕ್ಕು ನಾಶವಾಗಿದೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಸೆಟ್​ ಸ್ವಲ್ಪವೇ ಹಾನಿಗೆ ಒಳಗಾಗಿದೆ. ಚಿತ್ರದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಕಳೆದ ವರ್ಷ ಸೆಟ್​ ಅನ್ನು ಸಂಪೂರ್ಣವಾಗಿ ಮುಚ್ಚಿದ್ದರು. ಈ ಮೂಲಕ ಚಂಡಮಾರುತದಂತೆ ಸಮಸ್ಯೆ ಎದುರಾದರೆ ಅದನ್ನು ರಕ್ಷಿಸಬಹುದು ಎಂಬುದು ಅವರ ಪ್ಲ್ಯಾನ್​ ಆಗಿತ್ತು.

ಕೊವಿಡ್​ ಕಾರಣದಿಂದ ಮಹಾರಾಷ್ಟ್ರದಲ್ಲಿ ಶೂಟಿಂಗ್​ ಸಂಪೂರ್ಣವಾಗಿ ನಿಂತಿದೆ. ಜೂನ್​ ವೇಳೆಗೆ ಮತ್ತೆ ಶೂಟಿಂಗ್​ ಆರಂಭಿಸುವ ಆಲೋಚನೆ ಚಿತ್ರತಂಡದ್ದಾಗಿತ್ತು. ಆದರೆ, ಈಗ ಸೈಕ್ಲೋನ್​ ಕಾರಣದಿಂದ ಸಾಕಷ್ಟು ಸೆಟ್​ಗಳು ಹಾನಿಗೆ ಒಳಗಾಗಿದ್ದು, ಶೂಟಿಂಗ್​ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

Radhe: ಸಲ್ಮಾನ್ ಖಾನ್​ ಬಾಡಿ ಡಬಲ್ ಕಲಾವಿದನ ಫೋಟೋ ವೈರಲ್; ಫ್ಯಾನ್ಸ್​​ಗೆ ಅಚ್ಚರಿಯೋ ಅಚ್ಚರಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ