ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ
ಸಲ್ಮಾನ್ ಖಾನ್
Edited By:

Updated on: May 20, 2021 | 5:25 PM

ಭಾರತದ ಹಲವು ರಾಜ್ಯಗಳು ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಭಾರೀ ತೊಂದರೆ ಅನುಭವಿಸಿವೆ. ಆರಂಭದಲ್ಲಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಬ್ಬರ ತೋರಿದ್ದ ಈ ಚಂಡಮಾರುತ ನಂತರ ಮಹಾರಾಷ್ಟ್ರದತ್ತ ತಿರುಗಿತ್ತು. ಅಲ್ಲಿ ಈ ಚಂಡಮಾರುತ ಸಾಕಷ್ಟು ಹಾನಿ ಉಂಟು ಮಾಡಿದೆ. ಈ ವೇಳೆ ಸಲ್ಮಾನ್​ ಖಾನ್​ ನಟನೆಯ ಟೈಗರ್ 3 ಸಿನಿಮಾ ಸೆಟ್​ ಕೂಡ ಹಾನಿಗೆ ಒಳಗಾಗಿದೆ.

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ಅನೇಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ. ಟೈಗರ್​-3 ಸೆಟ್​ ಕೂಡ ಈ ಚಂಡಮಾರುತದ ಅಬ್ಬರಕ್ಕೆ ಸಿಲುಕಿದೆ.

ಗೋರೆಗಾಂವ್​ನಲ್ಲಿರುವ ಸ್ಟುಡಿಯೋದಲ್ಲಿ ದುಬೈ ಮಾರುಕಟ್ಟೆಯ ಸೆಟ್​ ಒಂದನ್ನು ಹಾಕಲಾಗಿತ್ತು. ಕೆಲವು ದೃಶ್ಯಗಳನ್ನು ಇಲ್ಲಿ ಶೂಟ್​ ಕೂಡ ಮಾಡಲಾಗಿತ್ತು. ಆದರೆ, ಕೊವಿಡ್​ನಿಂದಾಗಿ ಶೂಟಿಂಗ್​ ಅರ್ಧಕ್ಕೆ ನಿಂತಿದೆ. ಆದರೆ, ಈಗ ಚಂಡಮಾರುತದ ಅಬ್ಬರಕ್ಕೆ ಸೆಟ್​ ಕುಸಿದಿದೆ. ಈ ವೇಳೆ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

ಅಜಯ್​ ದೇವಗನ್​ ನಟನೆಯ ಮೈದಾನ್​ ಸಿನಿಮಾದ ಸೆಟ್​ ಮುಂಬೈನ ಹೊರಭಾಗದಲ್ಲಿ ನಿರ್ಮಾಣ ಮಾಡಲಾಗಿತ್ತು. ಇದು ಕೂಡ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಕ್ಕು ನಾಶವಾಗಿದೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಸೆಟ್​ ಸ್ವಲ್ಪವೇ ಹಾನಿಗೆ ಒಳಗಾಗಿದೆ. ಚಿತ್ರದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಕಳೆದ ವರ್ಷ ಸೆಟ್​ ಅನ್ನು ಸಂಪೂರ್ಣವಾಗಿ ಮುಚ್ಚಿದ್ದರು. ಈ ಮೂಲಕ ಚಂಡಮಾರುತದಂತೆ ಸಮಸ್ಯೆ ಎದುರಾದರೆ ಅದನ್ನು ರಕ್ಷಿಸಬಹುದು ಎಂಬುದು ಅವರ ಪ್ಲ್ಯಾನ್​ ಆಗಿತ್ತು.

ಕೊವಿಡ್​ ಕಾರಣದಿಂದ ಮಹಾರಾಷ್ಟ್ರದಲ್ಲಿ ಶೂಟಿಂಗ್​ ಸಂಪೂರ್ಣವಾಗಿ ನಿಂತಿದೆ. ಜೂನ್​ ವೇಳೆಗೆ ಮತ್ತೆ ಶೂಟಿಂಗ್​ ಆರಂಭಿಸುವ ಆಲೋಚನೆ ಚಿತ್ರತಂಡದ್ದಾಗಿತ್ತು. ಆದರೆ, ಈಗ ಸೈಕ್ಲೋನ್​ ಕಾರಣದಿಂದ ಸಾಕಷ್ಟು ಸೆಟ್​ಗಳು ಹಾನಿಗೆ ಒಳಗಾಗಿದ್ದು, ಶೂಟಿಂಗ್​ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

Radhe: ಸಲ್ಮಾನ್ ಖಾನ್​ ಬಾಡಿ ಡಬಲ್ ಕಲಾವಿದನ ಫೋಟೋ ವೈರಲ್; ಫ್ಯಾನ್ಸ್​​ಗೆ ಅಚ್ಚರಿಯೋ ಅಚ್ಚರಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us