ರಾಮ್ ಗೋಪಾಲ್ ವರ್ಮಾ ಕಚೇರಿ ಮುಂದೆ ಗಲಾಟೆ, ‘ವ್ಯೂಹಂ’ ಪೋಸ್ಟರ್​ಗೆ ಬೆಂಕಿ

Ram Gopal Varma: ತೆಲುಗು ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕಚೇರಿ ಮುಂದೆ ಟಿಡಿಪಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ರಾಮ್ ಗೋಪಾಲ್ ವರ್ಮಾ ಕಚೇರಿ ಮುಂದೆ ಗಲಾಟೆ, ‘ವ್ಯೂಹಂ’ ಪೋಸ್ಟರ್​ಗೆ ಬೆಂಕಿ
ವ್ಯೂಹಂ
Follow us
|

Updated on: Dec 26, 2023 | 3:45 PM

ನಿರ್ದೇಶಕ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರ ಹೈದರಾಬಾದ್ ಕಚೇರಿ ‘ಡೆನ್’ ಎದುರು ಟಿಡಿಪಿ ಕಾರ್ಯಕರ್ತರು ಹಾಗೂ ಎನ್​ಟಿಆರ್ ಕುಟುಂಬದ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ರಾಮ್ ಗೋಪಾಲ್ ವರ್ಮಾ ನಿರ್ದೇಶನ ಮಾಡಿರುವ ‘ವ್ಯೂಹಂ’ ಸಿನಿಮಾದ ಪೋಸ್ಟರ್​ಗೆ ಬೆಂಕಿ ಹಚ್ಚಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ, ಪ್ರತಿಭಟನಾಕಾರರನ್ನು ಸ್ಥಳದಿಂದ ನಿರ್ಗಮಿಸುವಂತೆ ಮಾಡಿದ್ದಾರೆ.

ಒಂದು ಕಾಲದ ಭಾರತದ ಟಾಪ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಕಳೆದ ಕೆಲವು ವರ್ಷಗಳಿಂದ ವಿವಾದಗಳನ್ನು ಹುಟ್ಟುಹಾಕಲೆಂದೇ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಮಿಯಾ ಮಾಲ್ಕೊವಾ ಜೊತೆಗೆ ಪೋರ್ನ್ ಸಿನಿಮಾ ಮಾಡಿದ್ದ ವರ್ಮಾ, ಅದಾದ ಬಳಿಕವೂ ಮಹಿಳೆಯರ ಅಂದವನ್ನೇ ಬಂಡವಾಳವಾಗಿಸಿಕೊಂಡು ಕೆಲವು ಕಳಪೆ ಸಿನಿಮಾಗಳನ್ನು ಮಾಡಿ ತಮ್ಮದೇ ವೆಬ್​ಸೈಟ್​ನಲ್ಲಿ ಬಿಡುಗಡೆ ಮಾಡಿದ್ದರು. ಅದಾದ ಬಳಿಕ ಎನ್​ಟಿಆರ್ ಹಾಗೂ ಚಿರಂಜೀವಿ ಕುಟುಂಬವನ್ನು ಗುರಿಯಾಗಿಸಿಕೊಂಡು ಅವರ ವಿರುದ್ಧ ಜನಾಭಿಪ್ರಾಯ ರೂಪಿಸುವಂತೆ ಸಿನಿಮಾಗಳನ್ನು ಮಾಡಲು ಪ್ರಾರಂಭಿಸಿದರು.

ಇದೀಗ ಅದೇ ಮಾದರಿಯ ‘ವ್ಯೂಹಂ’ ಹೆಸರಿನ ಸಿನಿಮಾವನ್ನು ವರ್ಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿ ಹಾಗೂ ನಟ, ರಾಜಕಾರಣಿ ಪವನ್ ಕಲ್ಯಾಣ್ ಅವರನ್ನು ಕಮಿಡಿಯನ್ ರೀತಿ ಬಿಂಬಿಸಲಾಗಿದೆ. ಆಂಧ್ರದ ಪ್ರಸ್ತುತ ಸಿಎಂ ಜಗನ್ ಅನ್ನು ಹೀರೋ ರೀತಿ ತೋರಿಸಲಾಗಿದೆ. ರಾಜಶೇಖರ ರೆಡ್ಡಿ ಸಾವಿಗೆ ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಕಾರಣ ಎಂಬರ್ಥ ಮೂಡುವಂಥಹಾ ದೃಶ್ಯಗಳು ಸಹ ಈ ಸಿನಿಮಾದಲ್ಲಿವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: RGV: ‘ಗರುಡ ಗಮನ ವೃಷಭ ವಾಹನ’ ನೋಡಿ ಫಿದಾ ಆದ ರಾಮ್ ಗೋಪಾಲ್ ವರ್ಮಾ; ನಿರ್ದೇಶಕ ರಾಜ್ ಬಿ ಶೆಟ್ಟಿಗೆ ಹೇಳಿದ್ದೇನು?

ಇತ್ತೀಚೆಗಷ್ಟೆ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್, ನ್ಯಾಯಾಲಯಕ್ಕೆ ಮೊರೆ ಹೋಗಿ ಈ ಸಿನಿಮಾದ ಬಿಡುಗಡೆ ವಿರುದ್ಧ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಸಿನಿಮಾವನ್ನು ಬೆಂಗಳೂರಿನಲ್ಲಿ ವಿಶೇಷ ಸೆನ್ಸಾರ್ ಕಮಿಟಿ ಮುಂದೆ ಪ್ರಸ್ತುತ ಪಡಿಸಲಾಯ್ತು, ಸಿನಿಮಾ ವೀಕ್ಷಿಸಿದ ಸಮಿತಿಯು ಸಿನಿಮಾಕ್ಕೆ ಮತ್ತೆ ‘ಯು’ ಪ್ರಮಾಣ ಪತ್ರ ನೀಡಿದ್ದು, ಈ ನಿರ್ಣಯ ಟಿಡಿಪಿ ಸದಸ್ಯರು ರೊಚ್ಚಿಗೇಳುವಂತೆ ಮಾಡಿದೆ.

ಆರ್​ಜಿವಿ, ‘ವ್ಯೂಹಂ’ ಸಿನಿಮಾವನ್ನು ಬಿಡುಗಡೆ ಮಾಡಿಯೇ ಸಿದ್ಧ ಎಂದು ಪಟ್ಟು ಹಿಡಿದಿದ್ದಾರೆ. ‘ವ್ಯೂಹಂ’ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡುವುದಾಗಿಯೂ ವರ್ಮಾ ಹೇಳಿದ್ದಾರೆ. ಒಂದು ಸಿನಿಮಾ ಈಗಲೂ ಮತ್ತೊಂದು ಸಿನಿಮಾವನ್ನು ಆಂಧ್ರ ಚುನಾವಣೆ ಘೋಷಣೆ ಆದ ಬಳಿಕ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ