AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನಿಯರ್ ಎನ್​ಟಿಆರ್ ‘ವಾರ್ 2’ ಬ್ಯಾನ್ ಮಾಡಿ ಎಂದ ಶಾಸಕನಿಗೆ ಈಗ ನಡುಕ; ಬಹಿರಂಗ ಕ್ಷಮೆ

ಟಿಡಿಪಿ ಶಾಸಕ ದಗ್ಗುಬಾಟಿ ವೆಂಕಟೇಶ್ವರ ಪ್ರಸಾದ್ ಅವರು ಜೂನಿಯರ್ ಎನ್ಟಿಆರ್ ಅಭಿನಯದ ‘ವಾರ್ 2’ ಚಿತ್ರವನ್ನು ಬಹಿಷ್ಕರಿಸುವಂತೆ ತಮ್ಮ ಬೆಂಬಲಿಗರಿಗೆ ಹೇಳಿದ್ದಾರೆ ಎಂಬ ಆಡಿಯೋ ಕ್ಲಿಪ್ ವೈರಲ್ ಆಗಿದೆ. ಇದರಿಂದ ಕೋಪಗೊಂಡ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದು, ಶಾಸಕರು ಕ್ಷಮೆ ಕೇಳಿದ್ದಾರೆ. ಆಡಿಯೋ ನಕಲಿ ಎಂದು ಅವರು ಹೇಳಿದ್ದಾರೆ. ಆದರೆ ಈ ವಿವಾದ ರಾಜಕೀಯ ತಿರುವು ಪಡೆದುಕೊಂಡಿದೆ.

ಜೂನಿಯರ್ ಎನ್​ಟಿಆರ್ ‘ವಾರ್ 2’ ಬ್ಯಾನ್ ಮಾಡಿ ಎಂದ ಶಾಸಕನಿಗೆ ಈಗ ನಡುಕ; ಬಹಿರಂಗ ಕ್ಷಮೆ
ಜೂ.ಎನ್​ಟಿಆರ್​-ಶಾಸಕ
ರಾಜೇಶ್ ದುಗ್ಗುಮನೆ
|

Updated on: Aug 18, 2025 | 12:52 PM

Share

ತೆಲುಗು ದೇಶಂ ಪಕ್ಷದ (ಟಿಡಿಪಿ) ಅನಂತಪುರ ಶಾಸಕ ದಗ್ಗುಬಾಟಿ ವೆಂಕಟೇಶ್ವರ ಪ್ರಸಾದ್ ಅವರು ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ. ಅವರು ಜೂನಿಯರ್ ಎನ್‌ಟಿಆರ್ (JR NTR) ನಟಿಸಿದ ‘ವಾರ್ 2’ ಸಿನಿಮಾ ನೋಡದಂತೆ ತನ್ನ ಬೆಂಬಲಿಗರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಅವರದ್ದು ಎನ್ನಲಾದ ಆಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜೂ.ಎನ್​ಟಿಆರ್ ಫ್ಯಾನ್ಸ್ ಸಿಟ್ಟಾಗಿದ್ದಾರೆ. ಅವರ ಮನೆ ಮುಂದೆ ಪ್ರತಿಭಟನೆ ನಡೆದಿದ್ದು, ಶಾಸಕ ಕ್ಷಮೆ ಕೇಳಿದ್ದಾರೆ.

‘ಟಿಡಿಪಿಯಿಂದ ದೂರವಿರುವ ಎನ್‌ಟಿಆರ್ ಚಿತ್ರವನ್ನು ಏಕೆ ನೋಡಬೇಕು’ ಎಂದು ದಗ್ಗುಬಾಟಿ ಪ್ರಸಾದ್ ಪ್ರಶ್ನಿಸಿದ್ದಾರೆ ಎಂಬ ಆಡಿಯೋ ಕ್ಲಿಪ್ ವೈರಲ್ ಆಗಿದೆ. ನಟನ ವಿರುದ್ಧ ಕೆಟ್ಟ ಪದ ಬಳಕೆ ಆಗಿದೆ ಎನ್ನಲಾಗುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಲೀಕ್ ಆಗಿರುವ ಆಡಿಯೋಗೂ ವಂಕಟೇಶ್ವರ ಪ್ರಸಾದ್ ಧ್ವನಿಗೂ ಸಾಮ್ಯತೆ ಇದೆ. ಹೀಗಾಗಿ, ಜೂನಿಯರ್ ಎನ್​ಟಿಆರ್ ಅಭಿಮಾನಿಗಳಲ್ಲಿ ಆಕ್ರೋಶವನ್ನು ಹುಟ್ಟುಹಾಕಿತು.

ಇದನ್ನೂ ಓದಿ
Image
ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದೆ ಸೆನ್ಸೇಷನ್ ಸೃಷ್ಟಿಸಿದ ಜೋಡಿ
Image
ಬಜೆಟ್​ಗಿಂತ 21 ಪಟ್ಟು ಹೆಚ್ಚು ಕಲೆಕ್ಷನ್ ಮಾಡಿದ ‘ಸು ಫ್ರಮ್ ಸೋ’
Image
ಮಿಶ್ರ ಪ್ರತಿಕ್ರಿಯೆ ನಡುವೆಯೂ ದಾಖಲೆಯ ಕಲೆಕ್ಷನ್ ಮಾಡಿದ ಕೂಲಿ, ವಾರ್ 2
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ

ಜೂನಿಯರ್ ಎನ್​ಟಿಆರ್ ಅಭಿಮಾನಿಗಳು ಶಾಸಕರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಅಲ್ಲಿ ಕಟ್ಟಲಾದ ಶಾಸಕನ ಫ್ಲೆಕ್ಸ್​ಗಳನ್ನು ನೆಲಕ್ಕೆ ಉರುಳಿಸಿದ್ದಾರೆ. ಶಾಸಕರ ವಿರುದ್ಧ ಘೋಷಣೆ ಕೂಗಿದ್ದಾರೆ. ‘ನಂದಮೂರಿ ಅಭಿಮಾನಿಗಳು ಇಲ್ಲದಿದ್ದರೆ ಟಿಡಿಪಿ ಅಸ್ತಿತ್ವದಲ್ಲೇ ಇರುತ್ತಿರಲಿಲ್ಲ’ ಎಂದು ಕೆಲವರು ಹೇಳಿದ್ದಾರೆ.

ಸ್ಪಷ್ಟನೆ ಕೊಟ್ಟ ದಗ್ಗುಬಾಟಿ ವೆಂಕಟೇಶ್ವರ ಪ್ರಸಾದ್

ಪ್ರತಿಭಟನೆಯಿಂದ ದಗ್ಗುಬಾಟಿ ವೆಂಕಟೇಶ್ವರ ಪ್ರಸಾದ್ ಭಯ ಬಿದ್ದಿದ್ದಾರೆ. ಅವರು ಕ್ಷಮೆ ಕೇಳಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ‘ಆ ಆಡಿಯೋ ಕ್ಲಿಪ್ ನನ್ನದಲ್ಲ. ಇದು ರಾಜಕೀಯ ಪಿತೂರಿ. ಅದು ನನ್ನ ಧ್ವನಿ ಅಲ್ಲದೆ ಇದ್ದರೂ ಜೂನಿಯರ್ ಎನ್​ಟಿಆರ್ ಅಭಿಮಾನಿಗಳ ಬಳಿಕ ನಾನು ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

‘ನಾನು ಆರಂಭದಿಂದಲೂ ನಂದಮೂರಿ ಕುಟುಂಬವನ್ನು ಮೆಚ್ಚುತ್ತಾ ಬಂದಿರುವವನು. ಬಾಲಯ್ಯ ಹಾಗೂ ಎನ್​ಟಿರಾ್ ಸಿನಿಮಾಗಳನ್ನು ನಾನು ಮೊದಲಿನಿಂದಲೂ ಇಷ್ಟಪಟ್ಟಿದ್ದೇನೆ. ಫೇಕ್ ಆಡಿಯೋ ಬಿಡಲಾಗಿದೆ. ಇದು ಸಂಪೂರ್ಣ ಸುಳ್ಳು’ ಎಂದಿದ್ದಾರೆ ಅವರು.

ಇದನ್ನೂ ಓದಿ: ಜೂನಿಯರ್ ಎನ್​ಟಿಆರ್ ಕನ್ನಡ ಪ್ರೇಮಕ್ಕೆ ಈ ವ್ಯಕ್ತಿಯೇ ಕಾರಣ

ಜೂನಿಯರ್ ಎನ್​ಟಿಆರ್ ಮೇಲೆ ಅಸಮಧಾನ

‘ವಾರ್ 2′ ಚಿತ್ರದ ಪ್ರೀ-ರಿಲೀಸ್ ಈವೆಂಟ್​ನಲ್ಲಿ ಜೂನಿಯರ್ ಎನ್‌ಟಿಆರ್ ನೀಡಿದ ಹೇಳಿಕೆಯಿಂದ ಟಿಡಿಪಿ ಬೆಂಬಲಿಗರ ಒಂದು ವರ್ಗ ಅಸಮಾಧಾನಗೊಂಡಿದೆ. ‘ಅಜ್ಜ ನಂದಮೂರಿ ತಾರಕ ರಾಮರಾವ್ ಅವರ ಆಶೀರ್ವಾದ ಇರುವುದರಿಂದ ನನ್ನನ್ನು ಯಾರೂ ಏನೂ ಮಾಡಲು ಸಾಧ್ಯವಿಲ್ಲ’ ಎಂದಿದ್ದರು. ಇದು ಟಿಡಿಪಿ ಅವರಿಗೆ ಕೊಟ್ಟ ಎಚ್ಚರಿಕೆ ಎನ್ನಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ