AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್​’ ಚಿತ್ರಕ್ಕಾಗಿ 75 ಸಿನಿಮಾಗಳ ಅವಕಾಶ ಕೈಚೆಲ್ಲಿದ್ದ ನಟ ತೇಜ ಸಜ್ಜಾ

ಬಾಕ್ಸ್​ ಆಫೀಸ್​ನಲ್ಲಿ ಬಂಗಾರದ ಬೆಳೆ ತೆಗೆದಿರುವ ‘ಹನುಮಾನ್​’ ಸಿನಿಮಾದಿಂದ ನಟ ತೇಜ ಸಜ್ಜಾ ಅವರ ಜನಪ್ರಿಯತೆ ಹೆಚ್ಚಾಗಿದೆ. ಅವರ ಅಭಿಮಾನಿ ಬಳಗ ಕೂಡ ದೊಡ್ಡದಾಗಿದೆ. ಅಂದಹಾಗೆ, ಅವರಿಗೆ ಈ ಯಶಸ್ಸು ಸಿಕ್ಕಿದ್ದು ಏಕಾಏಕಿಯಾಗಿ ಅಲ್ಲ. ಈ ಚಿತ್ರಕ್ಕಾಗಿ ಅವರು ತುಂಬ ಕಷ್ಟಪಟ್ಟಿದ್ದಾರೆ. ಹಲವು ಸಿನಿಮಾಗಳನ್ನು ರಿಜೆಕ್ಟ್​ ಮಾಡಿದ್ದಾರೆ. ಆ ಕುರಿತು ಅವರೀಗ ಮಾತಾಡಿದ್ದಾರೆ.

‘ಹನುಮಾನ್​’ ಚಿತ್ರಕ್ಕಾಗಿ 75 ಸಿನಿಮಾಗಳ ಅವಕಾಶ ಕೈಚೆಲ್ಲಿದ್ದ ನಟ ತೇಜ ಸಜ್ಜಾ
ತೇಜ ಸಜ್ಜಾ
ಮದನ್​ ಕುಮಾರ್​
|

Updated on: Feb 04, 2024 | 1:03 PM

Share

ತೆಲುಗಿನ ನಟ ತೇಜ ಸಜ್ಜಾ (Teja Sajja) ಅವರಿಗೆ 2024ರ ಆರಂಭದಲ್ಲೇ ಭರ್ಜರಿ ಗೆಲುವು ಸಿಕ್ಕಿದೆ. ಅವರು ನಟಿಸಿದ ‘ಹನುಮಾನ್​’ ಸಿನಿಮಾ (Hanuman Movie) ಸೂಪರ್​ ಹಿಟ್​ ಆಗಿದೆ. ದೇಸಿ ಸೂಪರ್​ ಹೀರೋ ಕಾನ್ಸೆಪ್ಟ್​ ಹೊಂದಿರುವ ಈ ಸಿನಿಮಾದಲ್ಲಿ ಅವರ ನಟನೆ ಕಂಡು ಅಭಿಮಾನಿಗಳು ಭೇಷ್​ ಎಂದಿದ್ದಾರೆ. ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ 250 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಹಾಗಂತ ತೇಜ ಸಜ್ಜಾ ಅವರಿಗೆ ಈ ಗೆಲುವು ಸಿಕ್ಕಿರುವುದು ರಾತ್ರೋರಾತ್ರಿ ಅಲ್ಲ. ‘ಹನುಮಾನ್​’ ಸಿನಿಮಾಗಾಗಿ ಅವರು ಸಾಕಷ್ಟು ತ್ಯಾಗ ಮಾಡಿದ್ದಾರೆ. ಅನೇಕ ಸಿನಿಮಾಗಳ ಅವಕಾಶವನ್ನು ತ್ಯಜಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಕುರಿತು ಮಾತನಾಡಿದ್ದಾರೆ.

‘ಹನುಮಾನ್​’ ಸಿನಿಮಾದ ಕೆಲಸಗಳು ಪೂರ್ಣಗೊಳ್ಳಲು ಎರಡೂವರೆ ವರ್ಷಗಳ ಸಮಯ ಹಿಡಿಯಿತು. ‘ಈ ಸಮಯದಲ್ಲಿ ನಾನು ಮಾಡಿದ್ದು ಇದೊಂದೇ ಸಿನಿಮಾ. ನನಗೆ ಬೇರೆ ಅವಕಾಶಗಳು ಕೂಡ ಬರುತ್ತಿದ್ದವು. ಅಂದಾಜು 70ರಿಂದ 75 ಪ್ರಾಜೆಕ್ಟ್​ಗಳನ್ನು ನಾನು ರಿಜೆಕ್ಟ್​ ಮಾಡಿದೆ. ಅದರಲ್ಲಿ ಕೊನೇ ಪಕ್ಷ 15 ಪ್ರಾಜೆಕ್ಟ್​ಗಳು ಚೆನ್ನಾಗಿದ್ದವು. ಆದರೆ ನಾನು ಯಾವಾಗಲೂ ಹನುಮಾನ್​ ಸಿನಿಮಾಗೆ ಕಮಿಟ್​ ಆಗಿದ್ದೆ’ ಎಂದು ತೇಜ ಸಜ್ಜಾ ಹೇಳಿದ್ದಾರೆ.

ಇದನ್ನೂ ಓದಿ: ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

ಸಾಧಾರಣ ಬಜೆಟ್​ನಲ್ಲಿ ಸಿದ್ಧವಾದ ‘ಹನುಮಾನ್​’ ಸಿನಿಮಾ ಗಲ್ಲಾಪಟ್ಟಿಗೆಯಲ್ಲಿ ಬಂಗಾರದ ಬೆಳೆ ತೆಗೆದಿದೆ. ಬಹಳ ಕಷ್ಟಪಟ್ಟು ಈ ಸಿನಿಮಾ ಮಾಡಿದ್ದನ್ನು ತೇಜ ಸಜ್ಜಾ ಈಗ ನೆನಪಿಸಿಕೊಂಡಿದ್ದಾರೆ. ‘ಈ ಸಿನಿಮಾದ ಸೂಪರ್​ ಹೀರೋ ಲುಕ್​ಗಾಗಿ ನಾವು 25 ಲುಕ್​ ಟೆಸ್ಟ್​ ಮಾಡಿದೆವು. ಸಾಮಾನ್ಯವಾಗಿ ಬೇರೆ ನಟರು ಎರಡು-ಮೂರು ಲುಕ್​ ಟೆಸ್ಟ್​ ಮಾಡುತ್ತಾರೆ ಅಷ್ಟೇ. ಸಾಹಸ ದೃಶ್ಯಗಳ ಶೂಟಿಂಗ್​ ತುಂಬ ಕಷ್ಟಕರ ಆಗಿತ್ತು. ಅಂಥ ಎಲ್ಲ ದೃಶ್ಯಗಳಲ್ಲೂ ನಾನೇ ಸ್ವತಃ ಅಭಿನಯಿಸಿದ್ದೇನೆ’ ಎಂದಿದ್ದಾರೆ ತೇಜ ಸಜ್ಜಾ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

ಪ್ರಶಾಂತ್​ ವರ್ಮಾ ಅವರ ನಿರ್ದೇಶನದಲ್ಲಿ ಮೂಡಿಬಂದ ‘ಹನುಮಾನ್​’ ಸಿನಿಮಾ ಜನವರಿ 12ರಂದು ಬಿಡುಗಡೆ ಆಯಿತು. ಅಮೃತಾ ಅಯ್ಯರ್​, ರಾಜ್​ ದೀಪಕ್​ ಶೆಟ್ಟಿ, ವಿನಯ್​ ರೈ, ವರಲಕ್ಷ್ಮೀ ಶರತ್​ಕುಮಾರ್​ ಮುಂತಾದವರು ನಟಿಸಿದ್ದಾರೆ. ಸಂಕ್ರಾಂತಿ ಸಂದರ್ಭದಲ್ಲಿ ತೆರೆಕಂಡ ಸ್ಟಾರ್​ ಹೀರೋಗಳ ಸಿನಿಮಾಗಳಿಗೂ ‘ಹನುಮಾನ್​’ ಟಫ್​ ಪೈಪೋಟಿ ನೀಡಿದೆ. ಈ ಸಿನಿಮಾ ಗೆದ್ದಿರುವುದರಿಂದ ಅದಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಸೀಕ್ವೆಲ್​ಗೆ ‘ಜೈ ಹನುಮಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗಷ್ಟೇ ಅದರ ಸ್ಕ್ರಿಪ್ಟ್​ ಪೂಜೆ ಮಾಡಲಾಗಿದೆ. ‘ಹನುಮಾನ್​’ ಸಿನಿಮಾ ಗೆದ್ದ ಬಳಿಕ ತೇಜ ಸಜ್ಜಾ ಅವರ ಡಿಮ್ಯಾಂಡ್​ ಹೆಚ್ಚಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು