AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಭೇಟಿ ಮಾಡಿದ ‘ಹನುಮಾನ್​’ ತಂಡ; ಸಿಕ್ತು ಗೃಹ ಸಚಿವರ ಮೆಚ್ಚುಗೆ

ಇಂಡಿಯನ್​ ಸೂಪರ್​ ಹೀರೋ ಕಥೆ ಹೊಂದಿರುವ ‘ಹನುಮಾನ್​’ ಸಿನಿಮಾ 50ಕ್ಕೂ ಹೆಚ್ಚು ದಿನಗಳ ಕಾಲ ಪ್ರದರ್ಶನ ಕಂಡು ಬ್ಲಾಕ್​ ಬಸ್ಟರ್​ ಆಗಿದೆ. ಈ ಚಿತ್ರತಂಡದವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ನಟ ತೇಜ ಸಜ್ಜಾ, ನಿರ್ದೇಶಕ ಪ್ರಶಾಂತ್​ ವರ್ಮಾ ಸೇರಿದಂತೆ ಇಡೀ ತಂಡದ ಮುಂದಿನ ಪ್ರಾಜೆಕ್ಟ್​ಗೆ ಅಮಿತ್​ ಶಾ ಶುಭ ಹಾರೈಸಿದ್ದಾರೆ.

ಅಮಿತ್​ ಶಾ ಭೇಟಿ ಮಾಡಿದ ‘ಹನುಮಾನ್​’ ತಂಡ; ಸಿಕ್ತು ಗೃಹ ಸಚಿವರ ಮೆಚ್ಚುಗೆ
ಅಮಿತ್​ ಶಾ ಭೇಟಿ ಮಾಡಿದ ಹನುಮಾನ್​ ಚಿತ್ರತಂಡ
ಮದನ್​ ಕುಮಾರ್​
|

Updated on: Mar 13, 2024 | 3:18 PM

Share

ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಿನಿಮಾ (HanuMan Movie) ದಾಖಲೆ ಬರೆದಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆದ ಈ ಸಿನಿಮಾವನ್ನು ಜನರು ಗೆಲ್ಲಿಸಿದ್ದಾರೆ. ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಹನುಮಾನ್​’ (HanuMan) ಸಿನಿಮಾ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಕೂಡ ಈ ಸಿನಿಮಾವನ್ನು ಹೊಗಳಿದ್ದಾರೆ. ಹೈದರಾಬಾದ್​​ನಲ್ಲಿ ಅಮಿತ್​ ಶಾ ಅವರನ್ನು ‘ಹನುಮಾನ್​’ ತಂಡದವರು ಭೇಟಿ ಮಾಡಿದ್ದಾರೆ. ಆ ಸಂದರ್ಭದ ಫೋಟೋ ವೈರಲ್​ ಆಗಿದೆ.

ಪಕ್ಷದ ಮೀಟಿಂಗ್​ ಸಲುವಾಗಿ ಅಮಿತ್​ ಶಾ ಅವರು ಹೈದರಾಬಾದ್​ಗೆ ಆಗಮಿಸಿದ್ದರು. ಈ ವೇಳೆ ಅವರನ್ನು ಭೇಟಿ ಆಗುವ ಅವಕಾಶ ‘ಹನುಮಾನ್​’ ತಂಡಕ್ಕೆ ಸಿಕ್ಕಿದೆ. ಗೃಹ ಸಚಿವರಿಗೆ ಆಂಜನೇಯನ ಮೂರ್ತಿ ಇರುವ ಸ್ಮರಣಿಕೆಯನ್ನು ನೀಡಲಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ 50 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಈಗ ಗೃಹ ಸಚಿವ ಅಮಿತ್​ ಶಾ ಅವರಿಂದ ಮೆಚ್ಚುಗೆ ಸಿಕ್ಕಿರುವುದಕ್ಕೆ ಚಿತ್ರತಂಡ ಖುಷಿಯಲ್ಲಿದೆ.

‘ಹನುಮಾನ್​’ ತಂಡದ ಭೇಟಿಯ ಬಳಿಕ ಅಮಿತ್​ ಶಾ ಅವರು ‘ಎಕ್ಸ್​’ (ಟ್ವಿಟರ್​) ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಇತ್ತೀಚೆಗೆ ಸೂಪರ್​ ಹಿಟ್​ ಆದ ಹನುಮಾನ್​ ಸಿನಿಮಾದ ನಿರ್ದೇಶಕ ಪ್ರಶಾಂತ್​ ವರ್ಮಾ, ಪ್ರತಿಭಾವಂತ ನಟ ತೇಜ ಸಜ್ಜಾ ಅವರನ್ನು ಭೇಟಿ ಮಾಡಿದೆ. ಭಾರತದ ಧಾರ್ಮಿಕ ಪರಂಪರೆಯನ್ನು ತೋರಿಸುವಲ್ಲಿ ಈ ಚಿತ್ರತಂಡದವರು ಉತ್ತಮವಾದ ಕೆಲಸ ಮಾಡಿದ್ದಾರೆ. ಅವರ ಮುಂದಿನ ಸಿನಿಮಾಗಳಿಗೆ ಶುಭವಾಗಲಿ’ ಎಂದು ಅಮಿತ್ ಶಾ ಪೋಸ್ಟ್​ ಮಾಡಿದ್ದಾರೆ. ತಂಡದ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿಯಲ್ಲಿ ‘ಕೆಜಿಎಫ್​’ ಮಾಡಿದ್ದ ದಾಖಲೆ ಮುರಿದ ‘ಹನುಮಾನ್​’ ಸಿನಿಮಾ

ಈ ಭೇಟಿಯ ಸಂದರ್ಭದಲ್ಲಿ ನಿರ್ಮಾಪಕ ಕೆ. ನಿರಂಜನ್​ ರೆಡ್ಡಿ, ಕೇಂದ್ರ ಸಚಿವ ಜಿ. ಕೃಷ್ಣ ರೆಡ್ಡಿ ಕೂಡ ಜೊತೆಯಲ್ಲಿ ಇದ್ದರು. ‘ಅಮಿತ್​ ಶಾ ಅವರನ್ನು ಭೇಟಿಯಾಗಿದ್ದು ಒಂದು ಹೆಮ್ಮೆ. ನಿಮ್ಮ ಪ್ರೋತ್ಸಾಹದ ಮಾತುಗಳಿಗೆ ಧನ್ಯವಾದಗಳು’ ಎಂದು ನಟ ತೇಜ ಸಜ್ಜಾ ಪೋಸ್ಟ್​ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆಗಿರುವ ಈ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ ಬರಲಿದೆ. ಅಲ್ಲದೇ, ಈ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಎರಡನೇ ಪಾರ್ಟ್​ಗೆ ‘ಜೈ ಹನುಮಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಆ ಸಿನಿಮಾಗಾಗಿ ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್