AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್​’ ಚಿತ್ರಕ್ಕೆ ಸಿಕ್ತು ಧ್ರುವ ಸರ್ಜಾ ಬೆಂಬಲ; ತೇಜ ಸಜ್ಜಾಗೆ ‘ಆ್ಯಕ್ಷನ್​ ಪ್ರಿನ್ಸ್​’ ಶುಭ ಹಾರೈಕೆ

ಎಲ್ಲರಿಗೂ ತಿಳಿದಿರುವಂತೆ ಧ್ರುವ ಸರ್ಜಾ ಅವರು ಆಂಜನೇಯನ ಪರಮ ಭಕ್ತ. ತೇಜ ಸಜ್ಜಾ ನಟಿಸಿರುವ ‘ಹನುಮಾನ್​’ ಸಿನಿಮಾದಲ್ಲೂ ಆಂಜನೇಯನ ಕುರಿತ ಕಹಾನಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಧ್ರುವ ಸರ್ಜಾ ಅವರನ್ನು ‘ಹನುಮಾನ್​’ ತಂಡ ಭೇಟಿ ಮಾಡಿದೆ. ತೆಲುಗಿನ ಈ ಸಿನಿಮಾ ಜನವರಿ 12ರಂದು ಕನ್ನಡದಲ್ಲೂ ಬಿಡುಗಡೆ ಆಗಲಿದೆ.

‘ಹನುಮಾನ್​’ ಚಿತ್ರಕ್ಕೆ ಸಿಕ್ತು ಧ್ರುವ ಸರ್ಜಾ ಬೆಂಬಲ; ತೇಜ ಸಜ್ಜಾಗೆ ‘ಆ್ಯಕ್ಷನ್​ ಪ್ರಿನ್ಸ್​’ ಶುಭ ಹಾರೈಕೆ
ಧ್ರುವ ಸರ್ಜಾ ಭೇಟಿ ಮಾಡಿದ ‘ಹನುಮಾನ್​’ ಚಿತ್ರತಂಡ
ಮದನ್​ ಕುಮಾರ್​
|

Updated on: Jan 07, 2024 | 1:48 PM

Share

ಟಾಲಿವುಡ್​ ನಿರ್ದೇಶಕ ಪ್ರಶಾಂತ್ ವರ್ಮಾ ಆ್ಯಕ್ಷನ್​-ಕಟ್​ ಹೇಳಿರುವ ‘ಹನುಮಾನ್’ ಸಿನಿಮಾ (Hanuman Movie) ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲು ಸಜ್ಜಾಗಿದೆ. ಈ ಸಿನಿಮಾದಲ್ಲಿ ನಾಯಕ ನಟನಾಗಿ ತೇಜ ಸಜ್ಜಾ (Teja Sajja) ಅಭಿನಯಿಸಿದ್ದಾರೆ. ಕನ್ನಡದ ಹುಡುಗಿ ಅಮೃತಾ ಐಯ್ಯರ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಅಂಜನಾದ್ರಿ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಕತೆಯನ್ನು ‘ಹನುಮಾನ್‌’ ಸಿನಿಮಾ ಒಳಗೊಂಡಿದೆ. ಪ್ರಚಾರದ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಚಿತ್ರತಂಡದವರು ಧ್ರುವ ಸರ್ಜಾ (Dhruva Sarja) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಗೆ ಕಾರಣ ಕೂಡ ಇದೆ.

ಎಲ್ಲರಿಗೂ ತಿಳಿದಿರುವಂತೆ ಧ್ರುವ ಸರ್ಜಾ ಅವರು ಆಂಜನೇಯನ ಪರಮ ಭಕ್ತ. ಪ್ರತಿ ಮಾತಿನ ಬಳಿಕವೂ ಅವರು ಜೈ ಆಂಜನೇಯ ಎನ್ನುತ್ತಾರೆ. ತೇಜ ಸಜ್ಜಾ ನಟಿಸಿರುವ ‘ಹನುಮಾನ್​’ ಸಿನಿಮಾದಲ್ಲೂ ಆಂಜನೇಯನ ಕುರಿತ ಕಹಾನಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಧ್ರುವ ಸರ್ಜಾ ಅವರನ್ನು ‘ಹನುಮಾನ್​’ ತಂಡ ಭೇಟಿ ಮಾಡಿದೆ. ತೆಲುಗಿನ ಈ ಸಿನಿಮಾ ಕನ್ನಡದಲ್ಲೂ ಜನವರಿ 12ರಂದು ಬಿಡುಗಡೆ ಆಗಲಿದೆ. ವರಲಕ್ಷಿ ಶರತ್ ಕುಮಾರ್, ರಾಜ್ ದೀಪಕ್ ಶೆಟ್ಟಿ, ವಿನಯ್ ರೈ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಅಪ್ಪು ಜೊತೆ ನಟಿಸಬೇಕೆಂಬ ಆಸೆ ಇತ್ತಂತೆ ಅಮೃತಾ ಐಯ್ಯರ್​ಗೆ

ಧ್ರುವ ಸರ್ಜಾ ಜೊತೆ ‘ಹನುಮಾನ್​’ ತಂಡ ಒಂದಷ್ಟು ಹೊತ್ತು ಕಾಲ ಕಳೆದಿದೆ. ಸಿನಿಮಾಗಳ ಕುರಿತು ಅವರು ಚರ್ಚೆ ನಡೆಸಿದ್ದಾರೆ. ‘ಹನುಮಾನ್’ ಟ್ರೇಲರ್ ಆಕರ್ಷಕವಾಗಿ ಮೂಡಿಬಂದಿದ್ದು, ತಾವು ಕೂಡ ಈ ಸಿನಿಮಾ ನೋಡುವುದಾಗಿ ಅವರು ತಿಳಿಸಿದ್ದಾರೆ. ಕನ್ನಡದಲ್ಲಿ ಈ ಚಿತ್ರವನ್ನು ‘ಕೆಆರ್​ಜಿ ಸ್ಟುಡಿಯೋಸ್​’ ಬಿಡುಗಡೆ ಮಾಡುತ್ತಿದೆ. ಧ್ರುವ ಸರ್ಜಾ ಅವರ ಮುಂಬರುವ ಸಿನಿಮಾಗಳಾದ ‘ಕೆಡಿ’ ಮತ್ತು ‘ಮಾರ್ಟಿನ್’ಗೆ ತೇಜ ಸಜ್ಜಾ ಶುಭ ಹಾರೈಸಿದ್ದಾರೆ.

ಧ್ರುವ ಸರ್ಜಾ ಅವರನ್ನು ಭೇಟಿ ಮಾಡುವುದಕ್ಕೂ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ಹನುಮಾನ್​’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಇದರಲ್ಲಿ ನಿರ್ಮಾಪಕಿ ಚೈತನ್ಯಾ ರೆಡ್ಡಿ ಕೂಡ ಭಾಗಿ ಆಗಿದ್ದರು. ಈ ಸಿನಿಮಾ ಮೇಲೆ ತೇಜ ಸಜ್ಜಾ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಇದು ಆಂಜನೇಯನ ಬಗ್ಗೆ ಇರುವ ಚಿತ್ರವಲ್ಲ. ದೇವರ ಕಾರಣದಿಂದ ಒಬ್ಬ ವ್ಯಕ್ತಿಗೆ ಪವರ್ ಬಂದರೆ ಆತ ಸೂಪರ್ ಹೀರೋ ಆಗುತ್ತಾನೆ. ಆ ರೀತಿಯ ಕಥೆ ಇದರಲ್ಲಿದೆ. ಕಾಮಿಡಿ , ಆಕ್ಷನ್, ಲವ್​ಸ್ಟೋರಿ’ ಕೂಡ ಇದರಲ್ಲಿ ಇದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?