AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹನುಮಾನ್​’ ಚಿತ್ರಕ್ಕೆ ಸಿಕ್ತು ಧ್ರುವ ಸರ್ಜಾ ಬೆಂಬಲ; ತೇಜ ಸಜ್ಜಾಗೆ ‘ಆ್ಯಕ್ಷನ್​ ಪ್ರಿನ್ಸ್​’ ಶುಭ ಹಾರೈಕೆ

ಎಲ್ಲರಿಗೂ ತಿಳಿದಿರುವಂತೆ ಧ್ರುವ ಸರ್ಜಾ ಅವರು ಆಂಜನೇಯನ ಪರಮ ಭಕ್ತ. ತೇಜ ಸಜ್ಜಾ ನಟಿಸಿರುವ ‘ಹನುಮಾನ್​’ ಸಿನಿಮಾದಲ್ಲೂ ಆಂಜನೇಯನ ಕುರಿತ ಕಹಾನಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಧ್ರುವ ಸರ್ಜಾ ಅವರನ್ನು ‘ಹನುಮಾನ್​’ ತಂಡ ಭೇಟಿ ಮಾಡಿದೆ. ತೆಲುಗಿನ ಈ ಸಿನಿಮಾ ಜನವರಿ 12ರಂದು ಕನ್ನಡದಲ್ಲೂ ಬಿಡುಗಡೆ ಆಗಲಿದೆ.

‘ಹನುಮಾನ್​’ ಚಿತ್ರಕ್ಕೆ ಸಿಕ್ತು ಧ್ರುವ ಸರ್ಜಾ ಬೆಂಬಲ; ತೇಜ ಸಜ್ಜಾಗೆ ‘ಆ್ಯಕ್ಷನ್​ ಪ್ರಿನ್ಸ್​’ ಶುಭ ಹಾರೈಕೆ
ಧ್ರುವ ಸರ್ಜಾ ಭೇಟಿ ಮಾಡಿದ ‘ಹನುಮಾನ್​’ ಚಿತ್ರತಂಡ
ಮದನ್​ ಕುಮಾರ್​
|

Updated on: Jan 07, 2024 | 1:48 PM

Share

ಟಾಲಿವುಡ್​ ನಿರ್ದೇಶಕ ಪ್ರಶಾಂತ್ ವರ್ಮಾ ಆ್ಯಕ್ಷನ್​-ಕಟ್​ ಹೇಳಿರುವ ‘ಹನುಮಾನ್’ ಸಿನಿಮಾ (Hanuman Movie) ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲು ಸಜ್ಜಾಗಿದೆ. ಈ ಸಿನಿಮಾದಲ್ಲಿ ನಾಯಕ ನಟನಾಗಿ ತೇಜ ಸಜ್ಜಾ (Teja Sajja) ಅಭಿನಯಿಸಿದ್ದಾರೆ. ಕನ್ನಡದ ಹುಡುಗಿ ಅಮೃತಾ ಐಯ್ಯರ್ ಅವರು ನಾಯಕಿಯಾಗಿ ನಟಿಸಿದ್ದಾರೆ. ಅಂಜನಾದ್ರಿ ಎಂಬ ಕಾಲ್ಪನಿಕ ಊರಿನಲ್ಲಿ ನಡೆಯುವ ಕತೆಯನ್ನು ‘ಹನುಮಾನ್‌’ ಸಿನಿಮಾ ಒಳಗೊಂಡಿದೆ. ಪ್ರಚಾರದ ಸಲುವಾಗಿ ಬೆಂಗಳೂರಿಗೆ ಬಂದಿದ್ದ ಚಿತ್ರತಂಡದವರು ಧ್ರುವ ಸರ್ಜಾ (Dhruva Sarja) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಗೆ ಕಾರಣ ಕೂಡ ಇದೆ.

ಎಲ್ಲರಿಗೂ ತಿಳಿದಿರುವಂತೆ ಧ್ರುವ ಸರ್ಜಾ ಅವರು ಆಂಜನೇಯನ ಪರಮ ಭಕ್ತ. ಪ್ರತಿ ಮಾತಿನ ಬಳಿಕವೂ ಅವರು ಜೈ ಆಂಜನೇಯ ಎನ್ನುತ್ತಾರೆ. ತೇಜ ಸಜ್ಜಾ ನಟಿಸಿರುವ ‘ಹನುಮಾನ್​’ ಸಿನಿಮಾದಲ್ಲೂ ಆಂಜನೇಯನ ಕುರಿತ ಕಹಾನಿ ಇದೆ. ಹಾಗಾಗಿ ಬೆಂಗಳೂರಿನಲ್ಲಿ ಧ್ರುವ ಸರ್ಜಾ ಅವರನ್ನು ‘ಹನುಮಾನ್​’ ತಂಡ ಭೇಟಿ ಮಾಡಿದೆ. ತೆಲುಗಿನ ಈ ಸಿನಿಮಾ ಕನ್ನಡದಲ್ಲೂ ಜನವರಿ 12ರಂದು ಬಿಡುಗಡೆ ಆಗಲಿದೆ. ವರಲಕ್ಷಿ ಶರತ್ ಕುಮಾರ್, ರಾಜ್ ದೀಪಕ್ ಶೆಟ್ಟಿ, ವಿನಯ್ ರೈ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಅಪ್ಪು ಜೊತೆ ನಟಿಸಬೇಕೆಂಬ ಆಸೆ ಇತ್ತಂತೆ ಅಮೃತಾ ಐಯ್ಯರ್​ಗೆ

ಧ್ರುವ ಸರ್ಜಾ ಜೊತೆ ‘ಹನುಮಾನ್​’ ತಂಡ ಒಂದಷ್ಟು ಹೊತ್ತು ಕಾಲ ಕಳೆದಿದೆ. ಸಿನಿಮಾಗಳ ಕುರಿತು ಅವರು ಚರ್ಚೆ ನಡೆಸಿದ್ದಾರೆ. ‘ಹನುಮಾನ್’ ಟ್ರೇಲರ್ ಆಕರ್ಷಕವಾಗಿ ಮೂಡಿಬಂದಿದ್ದು, ತಾವು ಕೂಡ ಈ ಸಿನಿಮಾ ನೋಡುವುದಾಗಿ ಅವರು ತಿಳಿಸಿದ್ದಾರೆ. ಕನ್ನಡದಲ್ಲಿ ಈ ಚಿತ್ರವನ್ನು ‘ಕೆಆರ್​ಜಿ ಸ್ಟುಡಿಯೋಸ್​’ ಬಿಡುಗಡೆ ಮಾಡುತ್ತಿದೆ. ಧ್ರುವ ಸರ್ಜಾ ಅವರ ಮುಂಬರುವ ಸಿನಿಮಾಗಳಾದ ‘ಕೆಡಿ’ ಮತ್ತು ‘ಮಾರ್ಟಿನ್’ಗೆ ತೇಜ ಸಜ್ಜಾ ಶುಭ ಹಾರೈಸಿದ್ದಾರೆ.

ಧ್ರುವ ಸರ್ಜಾ ಅವರನ್ನು ಭೇಟಿ ಮಾಡುವುದಕ್ಕೂ ಮುನ್ನ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ‘ಹನುಮಾನ್​’ ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು. ಇದರಲ್ಲಿ ನಿರ್ಮಾಪಕಿ ಚೈತನ್ಯಾ ರೆಡ್ಡಿ ಕೂಡ ಭಾಗಿ ಆಗಿದ್ದರು. ಈ ಸಿನಿಮಾ ಮೇಲೆ ತೇಜ ಸಜ್ಜಾ ಸಖತ್​ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಇದು ಆಂಜನೇಯನ ಬಗ್ಗೆ ಇರುವ ಚಿತ್ರವಲ್ಲ. ದೇವರ ಕಾರಣದಿಂದ ಒಬ್ಬ ವ್ಯಕ್ತಿಗೆ ಪವರ್ ಬಂದರೆ ಆತ ಸೂಪರ್ ಹೀರೋ ಆಗುತ್ತಾನೆ. ಆ ರೀತಿಯ ಕಥೆ ಇದರಲ್ಲಿದೆ. ಕಾಮಿಡಿ , ಆಕ್ಷನ್, ಲವ್​ಸ್ಟೋರಿ’ ಕೂಡ ಇದರಲ್ಲಿ ಇದೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ