AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ ಸಾಧನೆ ಹಿಂದಿದೆ ರಾಯರ ಕೃಪೆ

ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೆಚ್ಚುಗೆ ಪಡೆದ ತಮಿಳುನಾಡಿನ ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಈಗ ಕರುನಾಡಿನ ಸೊಸೆ. ಸಂಸದ ತೇಜಸ್ವಿ ಸೂರ್ಯ ಜೊತೆ ಶಿವಶ್ರೀ ಅವರ ಮದುವೆ ನಡೆದಿದೆ. ಸಂಗೀತಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಶಿವಶ್ರೀ ಅವರು ‘ಗೋಲ್ಡ್ ಕ್ಲಾಸ್ ವಿತ್ ಮಯೂರ’ ಯೂಟ್ಯೂಬ್​ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಸಾಕಷ್ಟು ಇಂಟರೆಸ್ಟಿಂಗ್ ವಿಚಾರಗಳನ್ನು ಚರ್ಚಿಸಿದ್ದಾರೆ.

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದಪ್ರಸಾದ್ ಸಂಗೀತ ಸಾಧನೆ ಹಿಂದಿದೆ ರಾಯರ ಕೃಪೆ
Tejasvi Surya, Sivasri Skandaprasad
ಮದನ್​ ಕುಮಾರ್​
|

Updated on: Mar 11, 2025 | 5:24 PM

Share

ಸಂಸದ ತೇಜಸ್ವಿ ಸೂರ್ಯ ಜೊತೆ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ (Sivasri Skandaprasad) ಅವರು ಹಸೆಮಣೆ ಏರಿದ್ದಾರೆ. ಇತ್ತೀಚೆಗೆ ಅವರ ಮದುವೆ ನೆರವೇರಿತು. ತಮಿಳುನಾಡು ಮೂಲದ ಶಿವಶ್ರೀ ಅವರ ಬಗ್ಗೆ ತಿಳಿದುಕೊಳ್ಳಲು ಜನರಿಗೆ ಆಸಕ್ತಿ ಇದೆ. ಶಿವಶ್ರೀ ಅವರು ಅತ್ಯುತ್ತಮ ಗಾಯಕಿ ಹಾಗೂ ಭರತನಾಟ್ಯ ಡ್ಯಾನ್ಸರ್ ಕೂಡ ಹೌದು. ಆರ್​ಜೆ ಮಯೂರ (RJ Mayura) ಅವರು ನಡೆಸಿದ ಯೂಟ್ಯೂಬ್ ಸಂದರ್ಶನದಲ್ಲಿ ಶಿವಶ್ರೀ ಅವರು ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಕುಟುಂಬದ ಹಿನ್ನೆಲೆ, ಬಾಲ್ಯ, ಸಂಗೀತಾಭ್ಯಾಸ, ರಾಘವೇಂದ್ರ ಸ್ವಾಮಿಗಳ ಕೃಪೆ ಮುಂತಾದ ವಿಷಯಗಳ ಬಗ್ಗೆ ಅವರು ಮನದಾಳ ಹಂಚಿಕೊಂಡಿದ್ದಾರೆ.

ಶಿವಶ್ರೀ ಸ್ಕಂದಪ್ರಸಾದ್ ಅವರದ್ದು ಸಂಗೀತಗಾರರ ಕುಟುಂಬ. ಅವರ ತಂದೆಯ ಹೋಮ್ ಸ್ಟುಡಿಯೋ ಇತ್ತು. ಪ್ರತಿದಿನ ಸಂಗೀತ ಕೇಳುತ್ತಾ, ಭರತನಾಟ್ಯ ಮಾಡುತ್ತಾ ಬೆಳೆದವರು ಶಿವಶ್ರಿ. ದಿನವೂ ಅವರು ತಪ್ಪದೇ ಸಂಗೀತ ಅಭ್ಯಾಸ ಮಾಡಬೇಕಿತ್ತು. ಬೆಳಗ್ಗೆ ಸಂಗೀತಾಭ್ಯಾಸ ಮಾಡದೇ ಇದ್ದರೆ ಅವರ ತಂದೆ ಉಪಹಾರ ನೀಡುತ್ತಿರಲಿಲ್ಲ! ‘ಬೆಳಗ್ಗೆ ಒಂದು ಗಂಟೆ ಅಭ್ಯಾಸ ಮಾಡಲೇಬೇಕಿತ್ತು. ಇಲ್ಲದಿದ್ದರೆ ನಮ್ಮ ತಂದೆ ತಿಂಡಿ ನಿನ್ನಲು ಬಿಡುತ್ತಿರಲಿಲ್ಲ. ಆ ವಿಚಾರದಲ್ಲಿ ಅವರು ತುಂಬಾ ಕಟ್ಟುನಿಟ್ಟಾಗಿದ್ದರು. ನಾನು ಆಹಾರಪ್ರಿಯೆ. ತಿಂಡಿ ಬೇಕು ಎಂಬ ಕಾರಣಕ್ಕೆ ನಾನು ತಪ್ಪದೇ ಸಂಗೀತಾಭ್ಯಾಸ ಮಾಡುತ್ತಿದ್ದೆ’ ಎಂದಿದ್ದಾರೆ ಶಿವಶ್ರೀ.

ಇದನ್ನೂ ಓದಿ: ತೇಜಸ್ವಿ ಸೂರ್ಯ-ಶಿವಶ್ರೀ ಮದ್ವೆ ಆರತಕ್ಷತೆ ಫೋಟೋ ಅಲ್ಬಂ: ಜಮೀರ್​ ಅಪ್ಪುಗೆಯ ವಿಶ್

ಇದನ್ನೂ ಓದಿ
Image
ತೇಜಸ್ವಿ ಸೂರ್ಯ-ಶಿವಶ್ರೀ ಅದ್ಧೂರಿ ಆರತಕ್ಷತೆ ಫೋಟೋ ಅಲ್ಬಂ
Image
ಸರಳವಾಗಿ ನೆರವೇರಿತು ಸಂಸದ ತೇಜಸ್ವಿ ಸೂರ್ಯ ಮದ್ವೆ: ವಿಡಿಯೋ ನೋಡಿ
Image
‘ಹೈನ’ ಕನ್ನಡ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಸಂಸದ ತೇಜಸ್ವಿ ಸೂರ್ಯ
Image
ತೇಜಸ್ವಿ ಸೂರ್ಯ ಕೈ ಹಿಡಿಯಲಿರುವ ಹುಡುಗಿಯ ಸುಮಧುರ ಕಂಠದಲ್ಲಿ ರಾಮನ ಗೀತೆ

10ನೇ ವಯಸ್ಸಿನಲ್ಲೇ ಶಿವಶ್ರೀ ಅವರು ಭರತನಾಟ್ಯ ಕಲಿತಿದ್ದರು. ಜೊತೆಗೆ ಸಂಗೀತಾಭ್ಯಾಸ ಕೂಡ ಮಾಡುತ್ತಿದ್ದರು. ಆದರೆ ಅವರ ಮೊದಲ ಆದ್ಯತೆ ಭರತನಾಟ್ಯ ಆಗಿತ್ತು. ಕೊವಿಡ್ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಸಂಗೀತಾದ ಮೇಲೆ ಹೆಚ್ಚು ಗಮನ ನೀಡಿದರು. ಆಗ ಅವರು ಹೆಚ್ಚು ಜನಪ್ರಿಯತೆ ಪಡೆದರು. ಪ್ರತಿ ವಾರ ಆನ್​ಲೈನ್ ಲೈವ್ ಕಾರ್ಯಕ್ರಮ ನೀಡಲು ಆರಂಭಿಸಿದರು.

ಲಾಕ್​ಡೌನ್ ಸಮಯದಲ್ಲಿ ಶಿವಶ್ರೀ ಗಾಯನಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬೇಡಿಕೆ ಜಾಸ್ತಿ ಆಯಿತು. ಜನರಿಗೆ ಹೊಸದನ್ನು ನೀಡಲು ಅವರು ನಿರಂತರ ಪ್ರಯತ್ನಿಸಿದರು. ಅದೊಂದು ತಪಸ್ಸಿನ ರೀತಿ ಇತ್ತು ಎಂದು ಅವರು ವಿವರಿಸಿದ್ದಾರೆ. ಅದರಿಂದ ತಮ್ಮ ಜೀವನ ಬದಲಾಯಿತು ಎಂದು ಶಿವಶ್ರೀ ಹೇಳಿದ್ದಾರೆ. ಲಾಕ್​ಡೌನ್ ಮುಗಿದ ಬಳಿಕ ಅವರು ಸಂಗೀತದ ಪಯಣವನ್ನು ಇನ್ನಷ್ಟು ಗಂಭೀರವಾಗಿ ಪರಿಗಣಿಸಿದರು.

ಮಯೂರ ಜೊತೆ ಶಿವಶ್ರೀ ಸ್ಕಂದಪ್ರಸಾದ್ ಸಂದರ್ಶನ:

ಶಿವಶ್ರೀ ಅವರು ರಾಘವೇಂದ್ರ ಸ್ವಾಮಿಗಳ ಭಕ್ತೆ. ತಮ್ಮ ಸಾಧನೆ ಹಿಂದೆ ರಾಯರ ಕೃಪೆ ಇದೆ ಎಂದು ಅವರು ನಂಬಿದ್ದಾರೆ. ಈ ಬಗ್ಗೆಯೂ ಸಂದರ್ಶನದಲ್ಲಿ ಅವರು ವಿವರವಾಗಿ ಮಾತನಾಡಿದ್ದಾರೆ. ‘ಹನುಮಂತಪುರ ಎಂಬ ಊರಿನಲ್ಲಿ ಮೊದಲ ಬಾರಿಗೆ ರಾಯರ ಬೃಂದಾವನದ ಎದುರು ಕಾನ್ಸರ್ಟ್ ನೀಡಿದೆ. ಆ ಬಳಿಕ 4 ವರ್ಷಗಳಲ್ಲಿ 200ಕ್ಕೂ ಅಧಿಕ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದೇನೆ’ ಎಂದಿದ್ದಾರೆ ಶಿವಶ್ರೀ. ಸಂಗೀತದ ಅನುಭವನ್ನು ಅಧ್ಯಾತ್ಮದಿಂದ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ