AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗಕ್ಕೆ ಭಾರಿ ಹೊಡೆತ ಕೊಟ್ಟ ತೆಲಂಗಾಣ ಸರ್ಕಾರ

Telangana Government: ತೆಲುಗು ಚಿತ್ರರಂಗದ ಭಾರತದ ನಂಬರ್ 1 ಚಿತ್ರರಂಗ ಆದರೆ ಇದೀಗ ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ಬಲು ದೊಡ್ಡ ಶಾಕ್ ನೀಡಿದೆ. ಇನ್ನು ಮುಂದೆ ತೆಲುಗಿನ ಯಾವುದೇ ಸಿನಿಮಾಕ್ಕೆ ಬೆನಿಫಿಟ್ ಶೋ, ಟಿಕೆಟ್ ದರ ಹೆಚ್ಚಳಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಇದು ತೆಲುಗು ಸಿನಿಮಾಗಳ ಗಳಿಕೆಯ ಮೇಲೆ ಭಾರಿ ದೊಡ್ಡ ಹೊಡೆತ ನೀಡಲಿದೆ.

ತೆಲುಗು ಚಿತ್ರರಂಗಕ್ಕೆ ಭಾರಿ ಹೊಡೆತ ಕೊಟ್ಟ ತೆಲಂಗಾಣ ಸರ್ಕಾರ
Tollywood
ಮಂಜುನಾಥ ಸಿ.
|

Updated on: Dec 22, 2024 | 8:43 AM

Share

ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸರ್ಕಾರ ಭಾರಿ ಹೊಡೆತ ಕೊಟ್ಟಿದೆ. ತೆಲುಗು ಚಿತ್ರರಂಗ ಬಾಲಿವುಡ್ ನಂತರ ಭಾರತದ ಅತ್ಯಂತ ದೊಡ್ಡ ಚಿತ್ರರಂಗ. ಬಾಕ್ಸ್ ಕಲೆಕ್ಷನ್​ ಲೆಕ್ಕಹಾಕಿ ನೋಡಿದರೆ ಇಡೀ ಭಾರತದಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡುವ ಚಿತ್ರರಂಗ ಟಾಲಿವುಡ್. ಆದರೆ ಈಗ ತೆಲಂಗಾಣ ಸರ್ಕಾರ ತೆಲುಗು ಚಿತ್ರರಂಗಕ್ಕೆ ಭಾರಿ ದೊಡ್ಡ ಹೊಡೆತ ನೀಡಿದೆ. ಇದು ತೆಲುಗು ಚಿತ್ರರಂಗದ ದೊಡ್ಡ ನಿರ್ಮಾಪಕರು, ಸ್ಟಾರ್ ನಟರನ್ನು ಚಿಂತೆಗೆ ದೂಡಿದೆ.

ತೆಲುಗು ರಾಜ್ಯಗಳಲ್ಲಿ ಸಿನಿಮಾ ಟಿಕೆಟ್ ದರಗಳು ಕಡಿಮೆ ಇವೆ. ಆದರೆ ಯಾವುದೇ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗುವ ಸಮಯದಲ್ಲಿ ನಿರ್ಮಾಪಕರು, ಸರ್ಕಾರದ ಬಳಿ ಮನವಿ ಮಾಡಿಕೊಂಡು ಟಿಕೆಟ್ ಬೆಲೆ ಹೆಚ್ಚಳ ಹಾಗೂ ಹೆಚ್ಚುವರಿ ಶೋ ಹಾಕಿಕೊಳ್ಳಲು ಅನುಮತಿ ಪಡೆದುಕೊಳ್ಳುತ್ತಾರೆ. ಕಳೆದ ಕೆಲ ವರ್ಷಗಳಿಂದಲೂ ಇದು ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ ‘ಪುಷ್ಪ 2’ ಸಿನಿಮಾ ಬಿಡುಗಡೆ ಸಮಯದಲ್ಲಿ ಸಂಧ್ಯಾ ಚಿತ್ರಮಂದಿರದಲ್ಲಿ ಆದ ಅಪಘಾತದ ಬಳಿಕ ತೆಲಂಗಾಣ ಸರ್ಕಾರ, ತೆಲುಗು ಚಿತ್ರರಂಗದ ವಿರುದ್ಧ ನಿಲುವು ತಳೆದಿದೆ.

ನಿನ್ನೆಯಷ್ಟೆ ಸಂಧ್ಯಾ ಚಿತ್ರಮಂದಿರದಲ್ಲಿ ಜೀವ ಕಳೆದುಕೊಂಡ ಮಹಿಳೆಯ ಕುಟುಂಬವನ್ನು ಭೇಟಿ ಮಾಡಿದ ತೆಲಂಗಾಣ ಸಿನಿಮಾಟೊಗ್ರಫಿ ಸಚಿವ ವೆಂಕಟ ರೆಡ್ಡಿ ಅವರಿಗೆ 25 ಲಕ್ಷ ಹಣ ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪುಷ್ಪ 2’ ಸಿನಿಮಾವನ್ನು, ಅಲ್ಲು ಅರ್ಜುನ್ ಅನ್ನು ಟೀಕೆ ಮಾಡಿದ್ದಾರೆ. ತೆಲಂಗಾಣ ವಿಧಾನಸಭೆಯಲ್ಲಿಯೂ ಈ ಬಗ್ಗೆ ಮಾತನಾಡಿರುವ ಸಚಿವ ವೆಂಕಟ ರೆಡ್ಡಿ, ಚಿತ್ರರಂಗಕ್ಕೆ ನೀಡುತ್ತಿರುವ ಎಲ್ಲ ಸವಲತ್ತುಗಳನ್ನು ನಿಲ್ಲಿಸುತ್ತಿರುವದಾಗಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ:‘ಯಾರನ್ನೂ ದೂರಲ್ಲ, ಇಲ್ಲಿ ನನ್ನ ಚಾರಿತ್ರ್ಯ ಹರಣ ಆಗುತ್ತಿದೆ’; ಅಲ್ಲು ಅರ್ಜುನ್ ಬೇಸರ

ಇಷ್ಟು ದಿನ ತೆಲುಗು ಸಿನಿಮಾಗಳಿಗೆ ನೀಡಲಾಗುತ್ತಿದ್ದು ವಿಶೇಷ ಶೋ, ಬೆನಿಫಿಟ್ ಶೋಗಳನ್ನು ರದ್ದು ಮಾಡಲಾಗುತ್ತಿದೆ. ಮಾತ್ರವಲ್ಲದೆ ತೆಲುಗು ಸಿನಿಮಾಗಳಿಗೆ ನೀಡಲಾಗುತ್ತಿದ್ದ ಟಿಕೆಟ್ ದರ ಹೆಚ್ಚಳ ಸವಲತ್ತನ್ನು ಸಹ ಹಿಂಪಡೆಯಲಾಗಿದೆ ಎಂದು ಸಚಿವ ವೆಂಕಟ ರೆಡ್ಡಿ ತೆಲಂಗಾಣ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಅಲ್ಲದೆ ತಮ್ಮ ಸ್ವಂತ ಖಾತೆಯಿಂದ 25 ಲಕ್ಷ ರೂಪಾಯಿ ಹಣವನ್ನು ಮೃತ ಮಹಿಳೆಯ ಕುಟುಂಬಕ್ಕೆ ನೀಡುತ್ತಿರುವಾಗಿ ಹಾಗೂ ಐಸಿಯುನಲ್ಲಿರುವ ಬಾಲಕ ಶ್ರೀತೇಜ ಅವರ ಆಸ್ಪತ್ರೆ ವೆಚ್ಚವನ್ನು ಸರ್ಕಾರವೇ ನೋಡಿಕೊಳ್ಳುವುದಾಗಿ ಹೇಳಿದ್ದಾರೆ.

ತೆಲಂಗಾಣ ಸರ್ಕಾರದ ಈ ನಿರ್ಣಯ ತೆಲುಗು ಚಿತ್ರರಂಗಕ್ಕೆ ಭಾರಿ ದೊಡ್ಡ ಪೆಟ್ಟು ನೀಡಲಿದೆ. ಟಿಕೆಟ್ ದರ ಹೆಚ್ಚಳ ಮತ್ತು ಹೆಚ್ಚುವರಿ ಶೋಗಳು ಇಲ್ಲದಿದ್ದರೆ ತೆಲುಗು ಸಿನಿಮಾಗಳು ಭಾರಿ ನಷ್ಟವನ್ನು ಎದುರಿಸಬೇಕಾಗುತ್ತದೆ. ತೆಲಂಗಾಣ ಸರ್ಕಾರದ ಈ ನಿರ್ಧಾರದಿಂದಾಗಿ ಬಿಗ್ ಬಜೆಟ್ ಸಿನಿಮಾಗಳು ಚಿಂತೆಗೆ ದೂಡಲ್ಪಟ್ಟಿವೆ. ಇದೀಗ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾದ ಮೇಲೆ ಭಾರಿ ಪರಿಣಾಮ ಬೀರಲಿದೆ. ಸಂಕ್ರಾಂತಿಗೆ ಸಹ ಕೆಲವು ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆ ಆಗಲಿದ್ದು, ಅವುಗಳಿಗೂ ಸಹ ಸಮಸ್ಯೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ