AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ್ ಗೋಪಾಲ್ ವರ್ಮ ನಿರ್ದೇಶನದ ‘ವ್ಯೂಹಂ’ ಸೆನ್ಸಾರ್ ಪ್ರಮಾಣಪತ್ರ ಅಮಾನತು ಆದೇಶ ಮತ್ತೆ ಮೂರು ವಾರ ವಿಸ್ತರಣೆ

ಒಂದು ಕಾಲದ ಭಾರತದ ಟಾಪ್ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಕಳೆದ ಕೆಲವು ವರ್ಷಗಳಿಂದ ವಿವಾದಗಳನ್ನು ಹುಟ್ಟುಹಾಕಲೆಂದೇ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಅವರ ನಿರ್ದೇಶನದ ‘ವ್ಯೂಹಂ’ ಸಿನಿಮಾ ಸದ್ದು ಮಾಡುತ್ತಿದೆ.

ರಾಮ್ ಗೋಪಾಲ್ ವರ್ಮ ನಿರ್ದೇಶನದ ‘ವ್ಯೂಹಂ’ ಸೆನ್ಸಾರ್ ಪ್ರಮಾಣಪತ್ರ ಅಮಾನತು ಆದೇಶ ಮತ್ತೆ ಮೂರು ವಾರ ವಿಸ್ತರಣೆ
ವ್ಯೂಹಂ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jan 23, 2024 | 2:31 PM

Share

ರಾಮ್ ಗೋಪಾಲ್ ವರ್ಮಾ (Ram Gopal Varma) ನಿರ್ದೇಶನದ ‘ವ್ಯೂಹಂ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಾಮಣಪತ್ರ ನೀಡಿತ್ತು. ಇನ್ನು ಕೆಲವೇ ತಿಂಗಳುಗಳಲ್ಲಿ ಆಂಧ್ರದಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಈ ಚಿತ್ರ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸೆನ್ಸಾರ್​ ಪ್ರಮಾಣ ಪತ್ರವನ್ನು ಅಮಾತು ಮಾಡಲಾಗಿತ್ತು. ಆದೇಶವನ್ನು ಈಗ ವಿಸ್ತರಿಸಲಾಗಿದೆ. ತೆಲಂಗಾಣ ಹೈಕೋರ್ಟ್​ನ ಏಕ ಸದಸ್ಯ ಪೀಠ ಮೂರು ವಾರಗಳ ಈ ರದ್ದತಿಯನ್ನು ವಿಸ್ತರಿಸಿದೆ.

ನ್ಯಾಯಮೂರ್ತಿ ಸುರೇಪಳ್ಳಿ ನಂದ ಅವರು ಸೆನ್ಸಾರ್ ಬೋರ್ಡ್​ಗೆ ಈ ಬಗ್ಗೆ ಸೂಚನೆ ನೀಡಿದ್ದಾರೆ. ಈ ಸಿನಿಮಾವನ್ನು ಮತ್ತೊಂದು ಬಾರಿ ವೀಕ್ಷಿಸಿ ವಿವಾದಾತ್ಮಕ ದೃಶ್ಯಗಳನ್ನು ಡಿಲೀಟ್ ಮಾಡಲು ಸೆನ್ಸಾರ್ ಮಂಡಳಿಗೆ ಸೂಚಿಸಲಾಗಿದೆ. ಮೂರು ವಾರಗಳಲ್ಲಿ ಹೊಸ ಸೆನ್ಸಾರ್ ಪ್ರಮಾಣ ಪತ್ರ ನೀಡಬೇಕು ಎಂದು ಕೋರ್ಟ್ ಸೂಚಿಸಿದೆ.

ಮತ್ತೊಂದೆಡೆ, ಮಧ್ಯಂತರ ಆದೇಶವನ್ನು ತೆಗೆದುಹಾಕುವಂತೆ ನಿರ್ಮಾಪಕ ದಾಸರಿ ಕಿರಣ್‌ಕುಮಾರ್ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದರು. ‘ಆಂಧ್ರಪ್ರದೇಶ ಚುನಾವಣೆ ಮೇಲೆ ವ್ಯೂಹಮ್ ಚಿತ್ರ ಪ್ರಭಾವ ಬೀರಲಿದೆ ಎಂದಾದರೆ ಈ ಚಿತ್ರವನ್ನು ತೆಲಂಗಾಣದಲ್ಲಿ ರಿಲೀಸ್ ಮಾಡಲು ಅವಕಾಶ ನೀಡಬೇಕು’ ಎಂದು ಅವರು ಹೈಕೋರ್ಟ್‌ಗೆ ಮನವಿ ಮಾಡಿದರು. ಇದಕ್ಕೆ ಲೋಕೇಶ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು.

ಡಿಸೆಂಬರ್ 29ರಂದು ‘ವ್ಯೂಹಂ’ ಸಿನಿಮಾ ರಿಲೀಸ್ ಆಗಬೇಕಿತ್ತು. ಆದರೆ, ಈ ಚಿತ್ರ ಆಂಧ್ರಪ್ರದೇಶದ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ವರ್ಚಸ್ಸಿಗೆ ದಕ್ಕೆ ತರುವ ರೀತಿ ಇದೆ ಎಂದು ಟಿಡಿಪಿ ಮುಖ್ಯ ಕಾರ್ಯದರ್ಶಿ ನಾರಾ ಲೋಕೇಶ್ ಅವರು ಆರೋಪಿಸಿದ್ದರು. ಅವರು ಸೆನ್ಸಾರ್ ಮಂಡಳಿ ನೀಡಿದ ಪ್ರಮಾಣ ಪತ್ರವನ್ನು ಹೈಕೋರ್ಟ್​ನಲ್ಲಿ ಪ್ರಶ್ನೆ ಮಾಡಿದರು. ಡಿಸೆಂಬರ್ 28ರಂದು ಹೈಕೋರ್ಟ್​ ಸೆನ್ಸಾರ್ ಮಂಡಳಿ ನೀಡಿದ್ದ ಪ್ರಮಾಣಪತ್ರವನ್ನು ರದ್ದು ಮಾಡಿತು. ಇದರಿಂದ ಸಿನಿಮಾಗೆ ಹಿನ್ನಡೆ ಆಯಿತು.

ಇದನ್ನೂ ಓದಿ: ರಾಮ್ ಗೋಪಾಲ್ ವರ್ಮಾ ಕಚೇರಿ ಮುಂದೆ ಗಲಾಟೆ, ‘ವ್ಯೂಹಂ’ ಪೋಸ್ಟರ್​ಗೆ ಬೆಂಕಿ

‘ವ್ಯೂಹಂ’ ಸಿನಿಮಾಗೆ ರಾಮ್ ಗೋಪಾಲ್ ವರ್ಮಾ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಕಥೆ ಬರೆದು, ಚಿತ್ರಕಥೆಯನ್ನೂ ಅವರೇ ಬರೆದಿದ್ದಾರೆ. ಈ ಸಿನಿಮಾದಲ್ಲಿ ಧನಂಜಯ್ ಅವರು ಚಂದ್ರಬಾಬು ನಾಯ್ಡು ಪಾತ್ರ ಮಾಡಿದ್ದಾರೆ. ವಾಸು, ಕೋಟ ಜಯರಾಮ್, ಮಾನಸಾ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ರಾಮ್ ಗೋಪಾಲ್ ವರ್ಮ ಸಿನಿಮಾಗೂ ವಿವಾದಕ್ಕೂ ಎಲ್ಲಿಲ್ಲದ ನಂಟು. ಅವರ ಸಿನಿಮಾಗಳಲ್ಲಿ ವಿವಾದ ಹೆಚ್ಚಿರುತ್ತದೆ. ಈಗ ‘ವ್ಯೂಹಂ’ ಚಿತ್ರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು