AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ

ಬಿಗ್​ ಬಾಸ್​ ಸೀಸನ್​ 8 ಎರಡನೆ ಇನ್ನಿಂಗ್ಸ್ ಆರಂಭದಲ್ಲಿ ಪ್ರಿಯಾಂಕಾ ಹಾಗೂ ಚಕ್ರವರ್ತಿ ಚಂದ್ರಚೂಡ್​ ನಡುವೆ ಒಳ್ಳೆಯ ಗೆಳೆತನ ಇತ್ತು. ಪ್ರಿಯಾಂಕಾ-ಶಮಂತ್​ ಅನ್ಯೋನ್ಯವಾಗಿದ್ದಾರೆ ಎನ್ನುವುದೇ ಚಕ್ರವರ್ತಿ ಬೇಸರಕ್ಕೆ ಕಾರಣವಾಗಿತ್ತು.

‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ
TV9 Web
| Edited By: |

Updated on:Jul 19, 2021 | 3:46 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟಿದ್ದ ಚಕ್ರವರ್ತಿ ಚಂದ್ರಚೂಡ್​ ಆರಂಭದಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆದರೆ, ಬರುಬರುತ್ತಾ ಅವರ ಮಾತಿನಮೇಲೆ ಅವರಿಗೇ ಹಿಡಿತವಿರಲಿಲ್ಲ. ಈಗಲೂ ಅವರು ತಮ್ಮ ವರ್ತನೆಯನ್ನು ನಿಯಂತ್ರಿಸೋಕೆ ಸಾಧ್ಯವಾಗುತ್ತಿಲ್ಲ. ಇದು ಅವರಿಗೇ ಮುಳವಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಭಾನುವಾರದ ಎಪಿಸೋಡ್​ನಲ್ಲಿ ಚಕ್ರವರ್ತಿ ಮಾಡಿದ ಎಡವಟ್ಟಿನಿಂದ ಎಲ್ಲರೂ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಸೀಸನ್​ 8 ಎರಡನೆ ಇನ್ನಿಂಗ್ಸ್ ಆರಂಭದಲ್ಲಿ ಪ್ರಿಯಾಂಕಾ ಹಾಗೂ ಚಕ್ರವರ್ತಿ ಚಂದ್ರಚೂಡ್​ ನಡುವೆ ಒಳ್ಳೆಯ ಗೆಳೆತನ ಇತ್ತು. ಪ್ರಿಯಾಂಕಾ-ಶಮಂತ್​ ಅನ್ಯೋನ್ಯವಾಗಿದ್ದಾರೆ ಎನ್ನುವುದೇ ಚಕ್ರವರ್ತಿ ಬೇಸರಕ್ಕೆ ಕಾರಣವಾಗಿತ್ತು. ಈ ಘಟನೆ ನಂತರದಲ್ಲಿ ಇಬ್ಬರೂ ಒಬ್ಬರ ಮುಖ ಒಬ್ಬರು ನೋಡುತ್ತಿರಲಿಲ್ಲ. ಜುಲೈ 18ರ ಎಪಿಸೋಡ್​ನಲ್ಲಿ ಪ್ರಿಯಾಂಕಾ ಎಲಿಮಿನೇಟ್​ ಆಗಿದ್ದಾರೆ. ದೊಡ್ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅವರಿಗೆ ಬಿಗ್​ ಬಾಸ್ ವಿಶೇಷ ಅಧಿಕಾರ ಒಂದನ್ನು ನೀಡಿದ್ದರು. ಅದರನ್ವಯ ಒಬ್ಬರನ್ನು ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್​ ಮಾಡಬೇಕು.

ಈ ಆದೇಶ ಬರುತ್ತಿದ್ದಂತೆ ಒಂದು ಕ್ಷಣವು ಯೋಚಿಸದೆ ಪ್ರಿಯಾಂಕಾ ತಿಮ್ಮೇಶ್​ ಅವರು ಚಕ್ರವರ್ತಿ ಚಂದ್ರಚೂಡ್​ ಹೆಸರನ್ನು ಹೇಳಿದ್ದರು. ಇದು ನಿರೀಕ್ಷಿತವೇ ಆಗಿದ್ದರು, ಚಕ್ರವರ್ತಿಗೆ ಇದನ್ನು ಸಹಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಹೀಗಾಗಿ, ಅವರು ಮಧ್ಯಬೆಟ್ಟನ್ನು ಎತ್ತಿ ತೋರಿಸಿದ್ದಾರೆ. ಇದು ಪ್ರಶಾಂತ್​ ಗಮನಕ್ಕೂ ಬಂದಿದೆ. ‘ಸಾರ್ವಜನಿಕ ಪ್ಲಾಟ್​ಫಾರ್ಮ್​ನಲ್ಲಿದ್ದಾಗ ಈ ರೀತಿ ಮಾಡೋದು ಸರಿಯಲ್ಲ’ ಎಂದು ಚಕ್ರರ್ತಿಗೆ ಬುದ್ಧಿವಾದ ಹೆಳುವ ಕೆಲಸ ಮಾಡಿದ್ದಾರೆ ಪ್ರಶಾಂತ್​.

ಈ ವಿಚಾರದಲ್ಲಿ ಚಕ್ರವರ್ತಿ ವಿರುದ್ಧ ಅನೇಕರು ಸಿಡಿದೆದ್ದಿದ್ದಾರೆ. ಅವರು ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಹೀಗಾಗಿ, ಕೆಲವರು ನಾವು ಕೂಡ ಮಧ್ಯಬೆಟ್ಟು ತೋರಿಸೋಕೆ ಕಾತುರರಾಗಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್ ಆಗೋಕೆ ಕಾರಣವಾಗಿದ್ದು ಈ ಮೂರು ಸ್ಪರ್ಧಿಗಳು

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

Published On - 3:45 pm, Mon, 19 July 21

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್