AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ

ಬಿಗ್​ ಬಾಸ್​ ಸೀಸನ್​ 8 ಎರಡನೆ ಇನ್ನಿಂಗ್ಸ್ ಆರಂಭದಲ್ಲಿ ಪ್ರಿಯಾಂಕಾ ಹಾಗೂ ಚಕ್ರವರ್ತಿ ಚಂದ್ರಚೂಡ್​ ನಡುವೆ ಒಳ್ಳೆಯ ಗೆಳೆತನ ಇತ್ತು. ಪ್ರಿಯಾಂಕಾ-ಶಮಂತ್​ ಅನ್ಯೋನ್ಯವಾಗಿದ್ದಾರೆ ಎನ್ನುವುದೇ ಚಕ್ರವರ್ತಿ ಬೇಸರಕ್ಕೆ ಕಾರಣವಾಗಿತ್ತು.

‘ನಿಮಗೂ ಮಧ್ಯಬೆಟ್ಟು ತೋರಿಸೋಕೆ ಕಾಯುತ್ತಿದ್ದೇವೆ’; ಚಕ್ರವರ್ತಿ ಚಂದ್ರಚೂಡ್​ ಹೊರಹಾಕಲು ಆರಂಭವಾಗಿದೆ ಅಭಿಯಾನ
TV9 Web
| Edited By: |

Updated on:Jul 19, 2021 | 3:46 PM

Share

ಕನ್ನಡ ಬಿಗ್​ ಬಾಸ್​ ಸೀಸನ್​ 8ರಲ್ಲಿ ವೈಲ್ಡ್​ ಕಾರ್ಡ್​ ಮೂಲಕ ಎಂಟ್ರಿ ಕೊಟ್ಟಿದ್ದ ಚಕ್ರವರ್ತಿ ಚಂದ್ರಚೂಡ್​ ಆರಂಭದಲ್ಲಿ ಮಾತಿನ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಆದರೆ, ಬರುಬರುತ್ತಾ ಅವರ ಮಾತಿನಮೇಲೆ ಅವರಿಗೇ ಹಿಡಿತವಿರಲಿಲ್ಲ. ಈಗಲೂ ಅವರು ತಮ್ಮ ವರ್ತನೆಯನ್ನು ನಿಯಂತ್ರಿಸೋಕೆ ಸಾಧ್ಯವಾಗುತ್ತಿಲ್ಲ. ಇದು ಅವರಿಗೇ ಮುಳವಾಗಿದೆ. ಬಿಗ್​ ಬಾಸ್​ ಮನೆಯಲ್ಲಿ ಭಾನುವಾರದ ಎಪಿಸೋಡ್​ನಲ್ಲಿ ಚಕ್ರವರ್ತಿ ಮಾಡಿದ ಎಡವಟ್ಟಿನಿಂದ ಎಲ್ಲರೂ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಗ್​ ಬಾಸ್​ ಸೀಸನ್​ 8 ಎರಡನೆ ಇನ್ನಿಂಗ್ಸ್ ಆರಂಭದಲ್ಲಿ ಪ್ರಿಯಾಂಕಾ ಹಾಗೂ ಚಕ್ರವರ್ತಿ ಚಂದ್ರಚೂಡ್​ ನಡುವೆ ಒಳ್ಳೆಯ ಗೆಳೆತನ ಇತ್ತು. ಪ್ರಿಯಾಂಕಾ-ಶಮಂತ್​ ಅನ್ಯೋನ್ಯವಾಗಿದ್ದಾರೆ ಎನ್ನುವುದೇ ಚಕ್ರವರ್ತಿ ಬೇಸರಕ್ಕೆ ಕಾರಣವಾಗಿತ್ತು. ಈ ಘಟನೆ ನಂತರದಲ್ಲಿ ಇಬ್ಬರೂ ಒಬ್ಬರ ಮುಖ ಒಬ್ಬರು ನೋಡುತ್ತಿರಲಿಲ್ಲ. ಜುಲೈ 18ರ ಎಪಿಸೋಡ್​ನಲ್ಲಿ ಪ್ರಿಯಾಂಕಾ ಎಲಿಮಿನೇಟ್​ ಆಗಿದ್ದಾರೆ. ದೊಡ್ಮನೆಯಿಂದ ಹೊರ ಹೋಗುವುದಕ್ಕೂ ಮೊದಲು ಅವರಿಗೆ ಬಿಗ್​ ಬಾಸ್ ವಿಶೇಷ ಅಧಿಕಾರ ಒಂದನ್ನು ನೀಡಿದ್ದರು. ಅದರನ್ವಯ ಒಬ್ಬರನ್ನು ಮುಂದಿನ ವಾರಕ್ಕೆ ನೇರವಾಗಿ ನಾಮಿನೇಟ್​ ಮಾಡಬೇಕು.

ಈ ಆದೇಶ ಬರುತ್ತಿದ್ದಂತೆ ಒಂದು ಕ್ಷಣವು ಯೋಚಿಸದೆ ಪ್ರಿಯಾಂಕಾ ತಿಮ್ಮೇಶ್​ ಅವರು ಚಕ್ರವರ್ತಿ ಚಂದ್ರಚೂಡ್​ ಹೆಸರನ್ನು ಹೇಳಿದ್ದರು. ಇದು ನಿರೀಕ್ಷಿತವೇ ಆಗಿದ್ದರು, ಚಕ್ರವರ್ತಿಗೆ ಇದನ್ನು ಸಹಿಸಿಕೊಳ್ಳೋಕೆ ಸಾಧ್ಯವಾಗಿಲ್ಲ. ಹೀಗಾಗಿ, ಅವರು ಮಧ್ಯಬೆಟ್ಟನ್ನು ಎತ್ತಿ ತೋರಿಸಿದ್ದಾರೆ. ಇದು ಪ್ರಶಾಂತ್​ ಗಮನಕ್ಕೂ ಬಂದಿದೆ. ‘ಸಾರ್ವಜನಿಕ ಪ್ಲಾಟ್​ಫಾರ್ಮ್​ನಲ್ಲಿದ್ದಾಗ ಈ ರೀತಿ ಮಾಡೋದು ಸರಿಯಲ್ಲ’ ಎಂದು ಚಕ್ರರ್ತಿಗೆ ಬುದ್ಧಿವಾದ ಹೆಳುವ ಕೆಲಸ ಮಾಡಿದ್ದಾರೆ ಪ್ರಶಾಂತ್​.

ಈ ವಿಚಾರದಲ್ಲಿ ಚಕ್ರವರ್ತಿ ವಿರುದ್ಧ ಅನೇಕರು ಸಿಡಿದೆದ್ದಿದ್ದಾರೆ. ಅವರು ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಹೀಗಾಗಿ, ಕೆಲವರು ನಾವು ಕೂಡ ಮಧ್ಯಬೆಟ್ಟು ತೋರಿಸೋಕೆ ಕಾತುರರಾಗಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ತಿಮ್ಮೇಶ್​ ಎಲಿಮಿನೇಟ್ ಆಗೋಕೆ ಕಾರಣವಾಗಿದ್ದು ಈ ಮೂರು ಸ್ಪರ್ಧಿಗಳು

ಪ್ರಿಯಾಂಕಾಗೆ ಅಶ್ಲೀಲ ಸನ್ನೆ ತೋರಿಸಿದ ಚಕ್ರವರ್ತಿ; ಬಿಗ್​ ಬಾಸ್​ ನೀಡ್ತೀರೋ ಶಿಕ್ಷೆ ಏನು?

Published On - 3:45 pm, Mon, 19 July 21

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು