AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9 Finale: ಬಿಗ್​ ಬಾಸ್​ ಫಿನಾಲೆ ವಾರಕ್ಕೆ 6 ಮಂದಿ ಎಂಟ್ರಿ; ಶೀಘ್ರವೇ ನಡೆಯಲಿದೆ ಇನ್ನೊಂದು ಎಲಿಮಿನೇಷನ್​

Bigg Boss Kannada Season 9: ಬಿಗ್​ ಬಾಸ್​ ಫಿನಾಲೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಂತಿಮವಾಗಿ ಟ್ರೋಫಿ ಪಡೆಯುವವರು ಯಾರು ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

BBK9 Finale: ಬಿಗ್​ ಬಾಸ್​ ಫಿನಾಲೆ ವಾರಕ್ಕೆ 6 ಮಂದಿ ಎಂಟ್ರಿ; ಶೀಘ್ರವೇ ನಡೆಯಲಿದೆ ಇನ್ನೊಂದು ಎಲಿಮಿನೇಷನ್​
ಬಿಗ್ ಬಾಸ್ ಫಿನಾಲೆ ವಾರಕ್ಕೆ 6 ಮಂದಿ
TV9 Web
| Edited By: |

Updated on: Dec 26, 2022 | 7:30 AM

Share

ಕಿರುತೆರೆಯ ಅತಿ ದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ‘ಬಿಗ್​ ಬಾಗ್​’ (Bigg Boss) ಕಾರ್ಯಕ್ರಮ ಕನ್ನಡದಲ್ಲೂ ಜನಮೆಚ್ಚುಗೆ ಪಡೆದುಕೊಂಡಿದೆ. ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ (Bigg Boss Kannada Season 9) ಈಗ ಅಂತಿಮ ಹಂತಕ್ಕೆ ಬಂದಿದೆ. 93 ದಿನಗಳನ್ನು ಪೂರೈಸಿ ಕೊನೇ ವಾರಕ್ಕೆ ಕಾಲಿಟ್ಟಿರುವ ಈ ಕಾರ್ಯಕ್ರಮದಲ್ಲಿ ಈಗ 6 ಜನರು ಸ್ಪರ್ಧಿಸುತ್ತಿದ್ದಾರೆ. 13ನೇ ವಾರದಲ್ಲಿ ಅರುಣ್​ ಸಾಗರ್​ ಅವರು ಎಲಿಮಿನೇಟ್​ ಆದರು. ಆ ಮೂಲಕ ಇನ್ನುಳಿದ 6 ಸ್ಪರ್ಧಿಗಳು ಫಿನಾಲೆ (BBK9 Finale) ವಾರಕ್ಕೆ ಎಂಟ್ರಿ ಪಡೆದರು. ರೂಪೇಶ್​ ಶೆಟ್ಟಿ, ರಾಕೇಶ್​ ಅಡಿಗ, ರೂಪೇಶ್​ ರಾಜಣ್ಣ, ಆರ್ಯವರ್ಧನ್​ ಗುರೂಜಿ, ದೀಪಿಕಾ ದಾಸ್​, ದಿವ್ಯಾ ಉರುಡುಗ ನಡುವೆ ಸ್ಪರ್ಧೆ ಮುಂದುವರಿದಿದೆ.

ಕಿಚ್ಚ ಸುದೀಪ್​ ಅವರು ಬಹಳ ಲವಲವಿಕೆಯಿಂದ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಫಿನಾಲೆ ಸಂಚಿಕೆ ಪ್ರಸಾರ ಆಗಲಿದೆ. ಫಿನಾಲೆಯಲ್ಲಿ 5 ಜನರ ನಡುವೆ ಹಣಾಹಣಿ ನಡೆಯಲಿದೆ. ಅಂತಿಮವಾಗಿ ಒಬ್ಬರು ಟ್ರೋಫಿ ಎತ್ತಲಿದ್ದಾರೆ. ಸದ್ಯ ಮನೆಯಲ್ಲಿ ಇರುವ 6 ಜನರ ಪೈಕಿ ಒಬ್ಬರು ಮಿಡ್​ ವೀಕ್​ ಎಲಿಮಿನೇಷನ್​ನಲ್ಲಿ ಔಟ್​ ಆಗಲೇಬೇಕಿದೆ. ಆ ಎಲಿಮಿನೇಷನ್​ ತುಂಬ ಅಚ್ಚರಿಯಾಗಿ ಇರಲಿದೆ. ಅದಕ್ಕಾಗಿ ಪ್ರೇಕ್ಷಕರು ಕಾದಿದ್ದಾರೆ.

ಇದನ್ನೂ ಓದಿ: BBK9: ಎಚ್ಚರಿಕೆ ನೀಡಲು ಬಂದ ಬಿಗ್​ ಬಾಸ್​ಗೆ ಆವಾಜ್​ ಹಾಕಿದ ಆರ್ಯವರ್ಧನ್​ ಗುರೂಜಿ; ಕಾದಿದೆ ಗ್ರಹಚಾರ

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ನೂರು ದಿನಗಳನ್ನು ಪೂರೈಸಿ ಬಿಗ್​ ಬಾಸ್​ ಟ್ರೋಫಿ ಪಡೆಯಬೇಕು ಎಂಬುದು ಎಲ್ಲ ಸ್ಪರ್ಧಿಗಳ ಕನಸಾಗಿರುತ್ತದೆ. ಅದೇ ನಿಟ್ಟಿನಲ್ಲಿ ವಿವಿಧ ಟಾಸ್ಕ್​ಗಳಲ್ಲಿ ಹಣಾಹಣಿ ನಡೆಸಿರುತ್ತಾರೆ. ಆದರೆ ಅಂತಿಮವಾಗಿ ಗೆಲ್ಲುವುದು ಒಬ್ಬರು ಮಾತ್ರ. ಈ ಬಾರಿ ಯಾರಿಗೆ ವಿಜಯಲಕ್ಷ್ಮೀ ಒಲಿಯಲಿದ್ದಾಳೆ ಎಂಬುದನ್ನು ತಿಳಿಯುವ ಕೌತುಕ ಮನೆಮಾಡಿದೆ.

ಇದನ್ನೂ ಓದಿ: Arun Sagar: ಬಿಗ್​ ಬಾಸ್​ನಿಂದ ಅರುಣ್​ ಸಾಗರ್​ ಎಲಿಮಿನೇಟ್​; ಫಿನಾಲೆಯ ಸಮೀಪದಲ್ಲಿ ಮುಗ್ಗರಿಸಿದ ಕಲಾವಿದ

ಈಗ ಉಳಿದಿರುವ 6 ಸ್ಪರ್ಧಿಗಳ ಪೈಕಿ ಎಲ್ಲರೂ ಒಂದೊಂದು ವಿಚಾರದಲ್ಲಿ ಪ್ರಬಲರಾಗಿದ್ದಾರೆ. ತುಂಬ ಕೂಲ್​ ವ್ಯಕ್ತಿತ್ವದ ಕಾರಣದಿಂದ ರಾಕೇಶ್​ ಅಡಿಗ ಮತ್ತು ರೂಪೇಶ್​ ಶೆಟ್ಟಿ ಅವರು ಹೆಚ್ಚು ಜನರನ್ನು ಸೆಳೆದುಕೊಂಡಿದ್ದಾರೆ. ಕಾಮಿಡಿ ಮತ್ತು ಪ್ರಾಮಾಣಿಕತೆಯಲ್ಲಿ ಆರ್ಯವರ್ಧನ್​ ಗುರೂಜಿ ಗಮನ ಸೆಳೆಯುತ್ತಿದ್ದಾರೆ. ದಿವ್ಯಾ ಉರುಗಡ ಮತ್ತು ದೀಪಿಕಾ ದಾಸ್​ ಅವರು ಹಳೇ ಸೀಸನ್​ನ ಅನುಭವವನ್ನು ಈ ಬಾರಿ ಚೆನ್ನಾಗಿ ಬಳಸಿಕೊಳ್ಳುತ್ತಿದ್ದಾರೆ. ಹೊಸಬರಾದರೂ ರೂಪೇಶ್​ ರಾಜಣ್ಣ ನೇರ-ನಿಷ್ಠುರ ನಡೆಯಿಂದ ಗುರುತಿಸಿಕೊಂಡಿದ್ದಾರೆ.

ಬಿಗ್​ ಬಾಸ್​ ಫಿನಾಲೆಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅದ್ದೂರಿ ವೇದಿಕೆಯಲ್ಲಿ ವಿವಿಧ ಮನರಂಜನಾ ಕಾರ್ಯಕ್ರಮಗಳ ನಡುವೆ ಕಿಚ್ಚ ಸುದೀಪ್​ ಅವರು ಫಿನಾಲೆ ಸಂಚಿಕೆಯನ್ನು ನಡೆಸಿಕೊಡಲಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ