AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಆಟದಲ್ಲಿ ಈ ವಾರ 7 ಜನರ ಮೇಲೆ ನಾಮಿನೇಷನ್​ ತೂಗುಗತ್ತಿ

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಈ ವಾರ 7 ಸ್ಪರ್ಧಿಗಳಿಗೆ ಢವಢವ ಶುರುವಾಗಿದೆ. ಗೋಲ್ಡ್​ ಸುರೇಶ್​, ಶೋಭಾ ಶೆಟ್ಟಿ, ಭವ್ಯಾ ಗೌಡ, ಶಿಶಿರ್​, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ, ತ್ರಿವಿಕ್ರಮ್ ಅವರು ನಾಮಿನೇಟ್​ ಆಗಿದ್ದಾರೆ. ಇಷ್ಟು ಜನರ ಪೈಕಿ ಯಾರು ಎಲಿಮಿನೇಟ್​ ಆಗಬಹುದು ಎಂಬ ಲೆಕ್ಕಾಚಾರ ಆರಂಭ ಆಗಿದೆ.

ಬಿಗ್​ ಬಾಸ್​ ಆಟದಲ್ಲಿ ಈ ವಾರ 7 ಜನರ ಮೇಲೆ ನಾಮಿನೇಷನ್​ ತೂಗುಗತ್ತಿ
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Nov 27, 2024 | 10:45 PM

Share

ಕಳೆದ ವಾರ ಧರ್ಮ ಕೀರ್ತಿರಾಜ್​ ಅವರು ಬಿಗ್ ಬಾಸ್ ಆಟದಿಂದ ಔಟ್​ ಆಗಿದ್ದರು. ಈ ವಾರ ಯಾರು ಹೊರಗೆ ಹೋಗುತ್ತಾರೆ ಎಂಬ ಕೌತುಕ ಮೂಡಿದೆ. ಬೇರೆ ಎಲ್ಲ ವಾರಗಳಿಗಿಂತ ಈ ವಾರ ಡಿಫರೆಂಟ್ ಆಗಿದೆ. ರಾಜಾಡಳಿತದ ಕಾನ್ಸೆಪ್ಟ್​ನಲ್ಲಿ ಸಂಚಿಕೆಗಳು ನಡೆಯುತ್ತಿವೆ. ದೊಡ್ಮನೆಯಲ್ಲಿ ಉಗ್ರಂ ಮಂಜು ಕ್ಯಾಪ್ಟನ್ ಆಗಿದ್ದಾರೆ. ಅವರಿಗೆ ರಾಜನ ಪಟ್ಟ ಸಿಕ್ಕಿದೆ. ಮೋಕ್ಷಿತಾ ಪೈ ಅವರು ಯುವರಾಣಿಯಾಗಿ ಅಧಿಕಾರ ಪಡೆದಿದ್ದಾರೆ. ಈ ನಡುವೆ ನಾಮಿನೇಷನ್​ ಪ್ರಕ್ರಿಯೆ ಕೂಡ ನಡೆದಿದ್ದು 7 ಸ್ಪರ್ಧಿಗಳು ನಾಮಿನೇಟ್​ ಆಗಿದ್ದಾರೆ. ಅವರ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬ ಕೌತುಕ ಮೂಡಿದೆ.

ಶೋಭಾ ಶೆಟ್ಟಿ, ಗೋಲ್ಡ್​ ಸುರೇಶ್​, ಶಿಶಿರ್​, ಭವ್ಯಾ ಗೌಡ, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್ ಅವರು ಈ ವಾರ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ನಾಮಿನೇಟ್​ ಆಗಿದ್ದಾರೆ. ಕಳೆದ ವಾರ ಕಳಪೆ ಪಟ್ಟ ಪಡೆದಿದ್ದರೂ ಕೂಡ ಈ ವಾರ ರಜತ್ ಅವರು ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ನಾಮಿನೇಟ್ ಆಗಿರುವವರು ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.

ವೈಲ್ಡ್​ ಕಾರ್ಡ್​ ಮೂಲಕ ಬಂದಿರುವ ಶೋಭಾ ಶೆಟ್ಟಿ ಅವರು ಆರಂಭದಲ್ಲಿ ಸಖತ್ ಸದ್ದು ಮಾಡಿದ್ದರು. ಆದರೆ ಈ ಬಾರಿ ನಾಮಿನೇಟ್​ ಆಗಿದ್ದು, ಅವರಿಗೆ ಎಲಿಮಿನೇಷನ್​ ಭಯ ಕಾಡುತ್ತಿದೆ. ಗೋಲ್ಡ್ ಸುರೇಶ್​ ಅವರು ಕೂಡ ಆತಂಕಪಡಬೇಕಿದೆ. ಟಾಸ್ಕ್​ ವೇಳೆ ಅವರು ಪೆಟ್ಟು ಮಾಡಿಕೊಂಡಿದ್ದೇ ಹೆಚ್ಚು. ಭವ್ಯಾ ಗೌಡ ಅವರು ಕ್ಯಾಪ್ಟನ್​ ಆಗಿದ್ದಾಗ ಅಧಿಕಾರ ಚಲಾಯಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಅವರಿಗೆ ಹೈಲೈಟ್​ ಆಗುವ ಅವಕಾಶ ಸಿಗಲಿಲ್ಲ.

ಇದನ್ನೂ ಓದಿ: ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?

ಚೈತ್ರಾ ಕುಂದಾಪುರ ಅವರು ಮತ್ತೆ ಡೇಂಜರ್​ ಝೋನ್​ಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಿದ್ದರು. ಆದರೆ ಈ ವಾರ ಕೂಡ ನಾಮಿನೇಟ್​ ಆಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ವೀಕ್ಷಕರಿಂದ ವೋಟ್​ ಸಿಗದಿದ್ದರೆ ಔಟ್ ಆಗಬೇಕಾಗುತ್ತದೆ. ಐಶ್ವರ್ಯಾ ಅವರು ಶಿಶಿರ್​ ಹೊರತುಪಡಿಸಿ ಬೇರೆ ಯಾರ ಜೊತೆಗೂ ಹೆಚ್ಚು ಕ್ಲೋಸ್ ಆಗಿಲ್ಲ. ಹಾಗಾಗಿ ಅವರಿಗೂ ಢವಢವ ಶುರುವಾಗಿದೆ. ಇನ್ನು, ತ್ರಿವಿಕ್ರಮ್ ಅವರು ನಾಮಿನೇಟ್​ ಆಗಿದ್ದರೂ ಕೂಡ ಅವರು ಸ್ಟ್ರಾಂಗ್ ಸ್ಪರ್ಧಿ ಆಗಿರುವುದರಿಂದ ಎಲಿಮಿನೇಟ್​ ಆಗುವ ಸಾಧ್ಯತೆ ಕಡಿಮೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್