AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಆಟದಲ್ಲಿ ಈ ವಾರ 7 ಜನರ ಮೇಲೆ ನಾಮಿನೇಷನ್​ ತೂಗುಗತ್ತಿ

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಈ ವಾರ 7 ಸ್ಪರ್ಧಿಗಳಿಗೆ ಢವಢವ ಶುರುವಾಗಿದೆ. ಗೋಲ್ಡ್​ ಸುರೇಶ್​, ಶೋಭಾ ಶೆಟ್ಟಿ, ಭವ್ಯಾ ಗೌಡ, ಶಿಶಿರ್​, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ, ತ್ರಿವಿಕ್ರಮ್ ಅವರು ನಾಮಿನೇಟ್​ ಆಗಿದ್ದಾರೆ. ಇಷ್ಟು ಜನರ ಪೈಕಿ ಯಾರು ಎಲಿಮಿನೇಟ್​ ಆಗಬಹುದು ಎಂಬ ಲೆಕ್ಕಾಚಾರ ಆರಂಭ ಆಗಿದೆ.

ಬಿಗ್​ ಬಾಸ್​ ಆಟದಲ್ಲಿ ಈ ವಾರ 7 ಜನರ ಮೇಲೆ ನಾಮಿನೇಷನ್​ ತೂಗುಗತ್ತಿ
ಬಿಗ್​ ಬಾಸ್​ ಕನ್ನಡ ಸೀಸನ್​ 11
ಮದನ್​ ಕುಮಾರ್​
|

Updated on: Nov 27, 2024 | 10:45 PM

Share

ಕಳೆದ ವಾರ ಧರ್ಮ ಕೀರ್ತಿರಾಜ್​ ಅವರು ಬಿಗ್ ಬಾಸ್ ಆಟದಿಂದ ಔಟ್​ ಆಗಿದ್ದರು. ಈ ವಾರ ಯಾರು ಹೊರಗೆ ಹೋಗುತ್ತಾರೆ ಎಂಬ ಕೌತುಕ ಮೂಡಿದೆ. ಬೇರೆ ಎಲ್ಲ ವಾರಗಳಿಗಿಂತ ಈ ವಾರ ಡಿಫರೆಂಟ್ ಆಗಿದೆ. ರಾಜಾಡಳಿತದ ಕಾನ್ಸೆಪ್ಟ್​ನಲ್ಲಿ ಸಂಚಿಕೆಗಳು ನಡೆಯುತ್ತಿವೆ. ದೊಡ್ಮನೆಯಲ್ಲಿ ಉಗ್ರಂ ಮಂಜು ಕ್ಯಾಪ್ಟನ್ ಆಗಿದ್ದಾರೆ. ಅವರಿಗೆ ರಾಜನ ಪಟ್ಟ ಸಿಕ್ಕಿದೆ. ಮೋಕ್ಷಿತಾ ಪೈ ಅವರು ಯುವರಾಣಿಯಾಗಿ ಅಧಿಕಾರ ಪಡೆದಿದ್ದಾರೆ. ಈ ನಡುವೆ ನಾಮಿನೇಷನ್​ ಪ್ರಕ್ರಿಯೆ ಕೂಡ ನಡೆದಿದ್ದು 7 ಸ್ಪರ್ಧಿಗಳು ನಾಮಿನೇಟ್​ ಆಗಿದ್ದಾರೆ. ಅವರ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬ ಕೌತುಕ ಮೂಡಿದೆ.

ಶೋಭಾ ಶೆಟ್ಟಿ, ಗೋಲ್ಡ್​ ಸುರೇಶ್​, ಶಿಶಿರ್​, ಭವ್ಯಾ ಗೌಡ, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್ ಅವರು ಈ ವಾರ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ನಾಮಿನೇಟ್​ ಆಗಿದ್ದಾರೆ. ಕಳೆದ ವಾರ ಕಳಪೆ ಪಟ್ಟ ಪಡೆದಿದ್ದರೂ ಕೂಡ ಈ ವಾರ ರಜತ್ ಅವರು ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ನಾಮಿನೇಟ್ ಆಗಿರುವವರು ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.

ವೈಲ್ಡ್​ ಕಾರ್ಡ್​ ಮೂಲಕ ಬಂದಿರುವ ಶೋಭಾ ಶೆಟ್ಟಿ ಅವರು ಆರಂಭದಲ್ಲಿ ಸಖತ್ ಸದ್ದು ಮಾಡಿದ್ದರು. ಆದರೆ ಈ ಬಾರಿ ನಾಮಿನೇಟ್​ ಆಗಿದ್ದು, ಅವರಿಗೆ ಎಲಿಮಿನೇಷನ್​ ಭಯ ಕಾಡುತ್ತಿದೆ. ಗೋಲ್ಡ್ ಸುರೇಶ್​ ಅವರು ಕೂಡ ಆತಂಕಪಡಬೇಕಿದೆ. ಟಾಸ್ಕ್​ ವೇಳೆ ಅವರು ಪೆಟ್ಟು ಮಾಡಿಕೊಂಡಿದ್ದೇ ಹೆಚ್ಚು. ಭವ್ಯಾ ಗೌಡ ಅವರು ಕ್ಯಾಪ್ಟನ್​ ಆಗಿದ್ದಾಗ ಅಧಿಕಾರ ಚಲಾಯಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಅವರಿಗೆ ಹೈಲೈಟ್​ ಆಗುವ ಅವಕಾಶ ಸಿಗಲಿಲ್ಲ.

ಇದನ್ನೂ ಓದಿ: ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?

ಚೈತ್ರಾ ಕುಂದಾಪುರ ಅವರು ಮತ್ತೆ ಡೇಂಜರ್​ ಝೋನ್​ಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಿದ್ದರು. ಆದರೆ ಈ ವಾರ ಕೂಡ ನಾಮಿನೇಟ್​ ಆಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ವೀಕ್ಷಕರಿಂದ ವೋಟ್​ ಸಿಗದಿದ್ದರೆ ಔಟ್ ಆಗಬೇಕಾಗುತ್ತದೆ. ಐಶ್ವರ್ಯಾ ಅವರು ಶಿಶಿರ್​ ಹೊರತುಪಡಿಸಿ ಬೇರೆ ಯಾರ ಜೊತೆಗೂ ಹೆಚ್ಚು ಕ್ಲೋಸ್ ಆಗಿಲ್ಲ. ಹಾಗಾಗಿ ಅವರಿಗೂ ಢವಢವ ಶುರುವಾಗಿದೆ. ಇನ್ನು, ತ್ರಿವಿಕ್ರಮ್ ಅವರು ನಾಮಿನೇಟ್​ ಆಗಿದ್ದರೂ ಕೂಡ ಅವರು ಸ್ಟ್ರಾಂಗ್ ಸ್ಪರ್ಧಿ ಆಗಿರುವುದರಿಂದ ಎಲಿಮಿನೇಟ್​ ಆಗುವ ಸಾಧ್ಯತೆ ಕಡಿಮೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ