ಬಿಗ್​ ಬಾಸ್​ ಆಟದಲ್ಲಿ ಈ ವಾರ 7 ಜನರ ಮೇಲೆ ನಾಮಿನೇಷನ್​ ತೂಗುಗತ್ತಿ

‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಈ ವಾರ 7 ಸ್ಪರ್ಧಿಗಳಿಗೆ ಢವಢವ ಶುರುವಾಗಿದೆ. ಗೋಲ್ಡ್​ ಸುರೇಶ್​, ಶೋಭಾ ಶೆಟ್ಟಿ, ಭವ್ಯಾ ಗೌಡ, ಶಿಶಿರ್​, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ, ತ್ರಿವಿಕ್ರಮ್ ಅವರು ನಾಮಿನೇಟ್​ ಆಗಿದ್ದಾರೆ. ಇಷ್ಟು ಜನರ ಪೈಕಿ ಯಾರು ಎಲಿಮಿನೇಟ್​ ಆಗಬಹುದು ಎಂಬ ಲೆಕ್ಕಾಚಾರ ಆರಂಭ ಆಗಿದೆ.

ಬಿಗ್​ ಬಾಸ್​ ಆಟದಲ್ಲಿ ಈ ವಾರ 7 ಜನರ ಮೇಲೆ ನಾಮಿನೇಷನ್​ ತೂಗುಗತ್ತಿ
ಬಿಗ್​ ಬಾಸ್​ ಕನ್ನಡ ಸೀಸನ್​ 11

Updated on: Nov 27, 2024 | 10:45 PM

ಕಳೆದ ವಾರ ಧರ್ಮ ಕೀರ್ತಿರಾಜ್​ ಅವರು ಬಿಗ್ ಬಾಸ್ ಆಟದಿಂದ ಔಟ್​ ಆಗಿದ್ದರು. ಈ ವಾರ ಯಾರು ಹೊರಗೆ ಹೋಗುತ್ತಾರೆ ಎಂಬ ಕೌತುಕ ಮೂಡಿದೆ. ಬೇರೆ ಎಲ್ಲ ವಾರಗಳಿಗಿಂತ ಈ ವಾರ ಡಿಫರೆಂಟ್ ಆಗಿದೆ. ರಾಜಾಡಳಿತದ ಕಾನ್ಸೆಪ್ಟ್​ನಲ್ಲಿ ಸಂಚಿಕೆಗಳು ನಡೆಯುತ್ತಿವೆ. ದೊಡ್ಮನೆಯಲ್ಲಿ ಉಗ್ರಂ ಮಂಜು ಕ್ಯಾಪ್ಟನ್ ಆಗಿದ್ದಾರೆ. ಅವರಿಗೆ ರಾಜನ ಪಟ್ಟ ಸಿಕ್ಕಿದೆ. ಮೋಕ್ಷಿತಾ ಪೈ ಅವರು ಯುವರಾಣಿಯಾಗಿ ಅಧಿಕಾರ ಪಡೆದಿದ್ದಾರೆ. ಈ ನಡುವೆ ನಾಮಿನೇಷನ್​ ಪ್ರಕ್ರಿಯೆ ಕೂಡ ನಡೆದಿದ್ದು 7 ಸ್ಪರ್ಧಿಗಳು ನಾಮಿನೇಟ್​ ಆಗಿದ್ದಾರೆ. ಅವರ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎಂಬ ಕೌತುಕ ಮೂಡಿದೆ.

ಶೋಭಾ ಶೆಟ್ಟಿ, ಗೋಲ್ಡ್​ ಸುರೇಶ್​, ಶಿಶಿರ್​, ಭವ್ಯಾ ಗೌಡ, ಐಶ್ವರ್ಯಾ ಸಿಂಧೋಗಿ, ಚೈತ್ರಾ ಕುಂದಾಪುರ ಹಾಗೂ ತ್ರಿವಿಕ್ರಮ್ ಅವರು ಈ ವಾರ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ನಾಮಿನೇಟ್​ ಆಗಿದ್ದಾರೆ. ಕಳೆದ ವಾರ ಕಳಪೆ ಪಟ್ಟ ಪಡೆದಿದ್ದರೂ ಕೂಡ ಈ ವಾರ ರಜತ್ ಅವರು ನಾಮಿನೇಷನ್​ನಿಂದ ಬಚಾವ್ ಆಗಿದ್ದಾರೆ. ನಾಮಿನೇಟ್ ಆಗಿರುವವರು ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.

ವೈಲ್ಡ್​ ಕಾರ್ಡ್​ ಮೂಲಕ ಬಂದಿರುವ ಶೋಭಾ ಶೆಟ್ಟಿ ಅವರು ಆರಂಭದಲ್ಲಿ ಸಖತ್ ಸದ್ದು ಮಾಡಿದ್ದರು. ಆದರೆ ಈ ಬಾರಿ ನಾಮಿನೇಟ್​ ಆಗಿದ್ದು, ಅವರಿಗೆ ಎಲಿಮಿನೇಷನ್​ ಭಯ ಕಾಡುತ್ತಿದೆ. ಗೋಲ್ಡ್ ಸುರೇಶ್​ ಅವರು ಕೂಡ ಆತಂಕಪಡಬೇಕಿದೆ. ಟಾಸ್ಕ್​ ವೇಳೆ ಅವರು ಪೆಟ್ಟು ಮಾಡಿಕೊಂಡಿದ್ದೇ ಹೆಚ್ಚು. ಭವ್ಯಾ ಗೌಡ ಅವರು ಕ್ಯಾಪ್ಟನ್​ ಆಗಿದ್ದಾಗ ಅಧಿಕಾರ ಚಲಾಯಿಸಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಅವರಿಗೆ ಹೈಲೈಟ್​ ಆಗುವ ಅವಕಾಶ ಸಿಗಲಿಲ್ಲ.

ಇದನ್ನೂ ಓದಿ: ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?

ಚೈತ್ರಾ ಕುಂದಾಪುರ ಅವರು ಮತ್ತೆ ಡೇಂಜರ್​ ಝೋನ್​ಗೆ ಬರುವುದಿಲ್ಲ ಎಂದು ತೀರ್ಮಾನ ಮಾಡಿದ್ದರು. ಆದರೆ ಈ ವಾರ ಕೂಡ ನಾಮಿನೇಟ್​ ಆಗಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ವೀಕ್ಷಕರಿಂದ ವೋಟ್​ ಸಿಗದಿದ್ದರೆ ಔಟ್ ಆಗಬೇಕಾಗುತ್ತದೆ. ಐಶ್ವರ್ಯಾ ಅವರು ಶಿಶಿರ್​ ಹೊರತುಪಡಿಸಿ ಬೇರೆ ಯಾರ ಜೊತೆಗೂ ಹೆಚ್ಚು ಕ್ಲೋಸ್ ಆಗಿಲ್ಲ. ಹಾಗಾಗಿ ಅವರಿಗೂ ಢವಢವ ಶುರುವಾಗಿದೆ. ಇನ್ನು, ತ್ರಿವಿಕ್ರಮ್ ಅವರು ನಾಮಿನೇಟ್​ ಆಗಿದ್ದರೂ ಕೂಡ ಅವರು ಸ್ಟ್ರಾಂಗ್ ಸ್ಪರ್ಧಿ ಆಗಿರುವುದರಿಂದ ಎಲಿಮಿನೇಟ್​ ಆಗುವ ಸಾಧ್ಯತೆ ಕಡಿಮೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us