AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕಲರ್ಸ್​ನಲ್ಲಿ ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​ಗಳೆಷ್ಟು?

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಈ ಬಗ್ಗೆ ಫ್ಯಾನ್ಸ್​ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಮಧ್ಯೆ ‘ದೃಷ್ಟಿ ಬೊಟ್ಟು’ ಧಾರಾವಾಹಿ ಪ್ರಸಾರ ಕಾಣಲು ರೆಡಿ ಆಗಿದೆ. ಈ ಮಧ್ಯೆ ಕೆಲವು ಧಾರಾವಾಹಿಗಳು ಕೊನೆಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕಲರ್ಸ್​ನಲ್ಲಿ ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​ಗಳೆಷ್ಟು?
‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕಲರ್ಸ್​ನಲ್ಲಿ ಹೊಸ ಧಾರಾವಾಹಿ; ಮುಗಿಯೋ ಧಾರಾವಾಹಿಗಳೆಷ್ಟು?
ರಾಜೇಶ್ ದುಗ್ಗುಮನೆ
|

Updated on: Aug 21, 2024 | 10:51 AM

Share

ಈ ಬಾರಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಈ ರಿಯಾಲಿಟಿ ಶೋಗಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ. ಈ ಶೋ ಯಾವಾಗ ಪ್ರಸಾರ ಕಾಣಲಿದೆ ಎಂಬ ಕುತೂಹಲ ಪ್ರೇಕ್ಷಕರನ್ನು ಬಲವಾಗಿ ಕಾಡುತ್ತಿದೆ. ಹೀಗಿರುವಾಗಲೇ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ಅದುವೇ ‘ದೃಷ್ಟಿಬೊಟ್ಟು’. ಇದರ ಜೊತೆಗೆ ಕೆಲವು ಧಾರಾವಾಹಿಗಳು ಪೂರ್ಣಗೊಳ್ಳಲಿವೆ ಎಂದು ಕೂಡ ಹೇಳಲಾಗುತ್ತಿದೆ.

‘ದೃಷ್ಟಿ ಬೊಟ್ಟು’ ಧಾರಾವಾಹಿಯಲ್ಲಿ ವಿಜಯ್ ಸೂರ್ಯ ಅವರು ನಟಿಸುತ್ತಿದ್ದಾರೆ. ಖಡಕ್ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರ ಹೆಸರು ದತ್ತಾ ಭಾಯ್. ಸಿನಿಮಾ ರೇಂಜ್​ನ ಆ್ಯಕ್ಷನ್ ಈ ಧಾರಾವಾಹಿಯಲ್ಲಿ ಇದೆ. ವಿಜಯ್ ಸೂರ್ಯ ಫ್ಯಾನ್ಸ್​ಗೆ ಈ ಧಾರಾವಾಹಿಯ ಪ್ರೋಮೋ ಸಖತ್ ಇಷ್ಟ ಆಗಿದೆ. ಈ ಧಾರಾವಾಹಿ ವೀಕ್ಷಕರಿಗೆ ಇಷ್ಟ ಆಗೋ ಸಾಧ್ಯತೆ ಇದೆ.

ಈ ಧಾರಾವಾಹಿ ಆರಂಭದ ಜೊತೆಗೆ ಒಂದಷ್ಟು ಧಾರಾವಾಹಿ ಪೂರ್ಣಗೊಳ್ಳೊಲಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ಆರಂಭ ಆಗೋ ಸಂದರ್ಭದಲ್ಲಿ ಕಲರ್ಸ್ ಕನ್ನಡದ ಕೆಲವು ಧಾರಾವಾಹಿಗಳು ಕೊನೆಗೊಳ್ಳೋದು ವಾಡಿಕೆ. ಈ ಬಾರಿಯೂ ಅದೇ ರೀತಿ ಆಗಲಿದೆಯೇ ಎನ್ನುವ ಪ್ರಶ್ನೆ ವೀಕ್ಷಕರನ್ನು ಕಾಡಿದೆ. ಇದು ಸತ್ಯ ಎನ್ನುತ್ತಿವೆ ಮೂಲಗಳು.

ಇದನ್ನೂ ಓದಿ: ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ 

‘ಬಿಗ್ ಬಾಸ್ ಕನ್ನಡ ಸೀಸನ್ 11’ ಅನ್ನು ಸುದೀಪ್ ಅವರೇ ನಡೆಸಿಕೊಡುತ್ತಾರೆ ಎನ್ನಲಾಗಿದೆ. ಈ ಮೊದಲು ಸುದೀಪ್ ಅವರು ಬಿಗ್ ಬಾಸ್​ನ ಭಾಗವಾಗಿ ಇರುವುದಿಲ್ಲ ಎಂದು ಕೆಲವರು ಹೇಳಿದ್ದರು. ಆದರೆ, ಆ ರೀತಿ ಇಲ್ಲ ಎಂದು ಕೆಲವು ಮೂಲಗಳು ಹೇಳುತ್ತಿವೆ. ಈಗಾಗಲೇ ಪ್ರೋಮೋಶೂಟ್ ಮುಗಿದಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ವೆನೆಜುವೆಲಾ ದರೋಡೆಕೋರನ ಮೇಲಿನ ವೈಮಾನಿಕ ದಾಳಿಯ ವಿಡಿಯೋ ಹಂಚಿಕೊಂಡ ಟ್ರಂಪ್
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿ ಹಾಜರಿರಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮತ್ತೆ ವಿದೇಶಕ್ಕೆ ತೆರಳಿದ ಪ್ರಧಾನಿ ಮೋದಿ; ಫ್ರಾನ್ಸ್​, ಸ್ಲೋವಾಕಿಯಾಗೆ ಭೇಟಿ
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಮನಾಲಿಗೆ ಹೊರಟ ಪ್ರವಾಸಿಗರಿಂದ ಕುಲು-ಮಂಡಿ ಮಾರ್ಗದಲ್ಲಿ ಟ್ರಾಫಿಕ್ ಜಾಮ್
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಪ್ರಥಮ ದರ್ಜೆ ನೌಕರನಿಗೆ ಚಪ್ಪಲಿ ಏಟು ಕೊಟ್ಟ ರೈತ! ಯಾಕೆ ಗೊತ್ತಾ?
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಬಿಡದಿ ಟೌನ್​ಶಿಪ್​ ಯೋಜನೆ ವಿರೋಧಿಸಿ ಜೂನ್ 22ರಂದು ಬೃಹತ್ ಪ್ರತಿಭಟನೆ!
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಕಲಬುರಗಿಯಲ್ಲಿ ನಕಲಿ ಡಿಎಪಿ ರಸಗೊಬ್ಬರ ಮಾರಾಟ: ರೈತರ ತೀವ್ರ ಆಕ್ರೋಶ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಬಿಡದಿ ಟೌನ್​ಶಿಪ್​​ ಯೋಜನೆ ಲೂಟಿ ಸ್ಕೀಮ್​​​ ಡೌಟೇ ಬೇಡ: ಕುಮಾರಸ್ವಾಮಿ
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
ಕೊಲೆ ಆರೋಪಿಗಳಿಂದ ಜೈಲಿನಲ್ಲಿ ಪುಂಡಾಟ: ವಾರ್ಡನ್ ಮೇಲೆ ಹಲ್ಲೆ!
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ
‘ಯತ್ನಾಳ್ ಯಾವುದೋ ಒಂದು ಕೋತಿಯ ಬ್ರೀಡ್’: ಪ್ರದೀಪ್ ಈಶ್ವರ್ ವಾಗ್ದಾಳಿ