AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕಲರ್ಸ್​ನಲ್ಲಿ ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​ಗಳೆಷ್ಟು?

‘ಬಿಗ್ ಬಾಸ್ ಕನ್ನಡ ಸೀಸನ್ 11’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಈ ಬಗ್ಗೆ ಫ್ಯಾನ್ಸ್​ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಮಧ್ಯೆ ‘ದೃಷ್ಟಿ ಬೊಟ್ಟು’ ಧಾರಾವಾಹಿ ಪ್ರಸಾರ ಕಾಣಲು ರೆಡಿ ಆಗಿದೆ. ಈ ಮಧ್ಯೆ ಕೆಲವು ಧಾರಾವಾಹಿಗಳು ಕೊನೆಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕಲರ್ಸ್​ನಲ್ಲಿ ಹೊಸ ಧಾರಾವಾಹಿ; ಮುಗಿಯೋ ಸೀರಿಯಲ್​ಗಳೆಷ್ಟು?
‘ಬಿಗ್ ಬಾಸ್’ ಆರಂಭಕ್ಕೂ ಮುನ್ನ ಕಲರ್ಸ್​ನಲ್ಲಿ ಹೊಸ ಧಾರಾವಾಹಿ; ಮುಗಿಯೋ ಧಾರಾವಾಹಿಗಳೆಷ್ಟು?
ರಾಜೇಶ್ ದುಗ್ಗುಮನೆ
|

Updated on: Aug 21, 2024 | 10:51 AM

Share

ಈ ಬಾರಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ. ಈ ರಿಯಾಲಿಟಿ ಶೋಗಾಗಿ ಫ್ಯಾನ್ಸ್ ಕಾದು ಕುಳಿತಿದ್ದಾರೆ. ಈ ಶೋ ಯಾವಾಗ ಪ್ರಸಾರ ಕಾಣಲಿದೆ ಎಂಬ ಕುತೂಹಲ ಪ್ರೇಕ್ಷಕರನ್ನು ಬಲವಾಗಿ ಕಾಡುತ್ತಿದೆ. ಹೀಗಿರುವಾಗಲೇ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ಅದುವೇ ‘ದೃಷ್ಟಿಬೊಟ್ಟು’. ಇದರ ಜೊತೆಗೆ ಕೆಲವು ಧಾರಾವಾಹಿಗಳು ಪೂರ್ಣಗೊಳ್ಳಲಿವೆ ಎಂದು ಕೂಡ ಹೇಳಲಾಗುತ್ತಿದೆ.

‘ದೃಷ್ಟಿ ಬೊಟ್ಟು’ ಧಾರಾವಾಹಿಯಲ್ಲಿ ವಿಜಯ್ ಸೂರ್ಯ ಅವರು ನಟಿಸುತ್ತಿದ್ದಾರೆ. ಖಡಕ್ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಧಾರಾವಾಹಿಯಲ್ಲಿ ಅವರ ಹೆಸರು ದತ್ತಾ ಭಾಯ್. ಸಿನಿಮಾ ರೇಂಜ್​ನ ಆ್ಯಕ್ಷನ್ ಈ ಧಾರಾವಾಹಿಯಲ್ಲಿ ಇದೆ. ವಿಜಯ್ ಸೂರ್ಯ ಫ್ಯಾನ್ಸ್​ಗೆ ಈ ಧಾರಾವಾಹಿಯ ಪ್ರೋಮೋ ಸಖತ್ ಇಷ್ಟ ಆಗಿದೆ. ಈ ಧಾರಾವಾಹಿ ವೀಕ್ಷಕರಿಗೆ ಇಷ್ಟ ಆಗೋ ಸಾಧ್ಯತೆ ಇದೆ.

ಈ ಧಾರಾವಾಹಿ ಆರಂಭದ ಜೊತೆಗೆ ಒಂದಷ್ಟು ಧಾರಾವಾಹಿ ಪೂರ್ಣಗೊಳ್ಳೊಲಿದೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ಆರಂಭ ಆಗೋ ಸಂದರ್ಭದಲ್ಲಿ ಕಲರ್ಸ್ ಕನ್ನಡದ ಕೆಲವು ಧಾರಾವಾಹಿಗಳು ಕೊನೆಗೊಳ್ಳೋದು ವಾಡಿಕೆ. ಈ ಬಾರಿಯೂ ಅದೇ ರೀತಿ ಆಗಲಿದೆಯೇ ಎನ್ನುವ ಪ್ರಶ್ನೆ ವೀಕ್ಷಕರನ್ನು ಕಾಡಿದೆ. ಇದು ಸತ್ಯ ಎನ್ನುತ್ತಿವೆ ಮೂಲಗಳು.

ಇದನ್ನೂ ಓದಿ: ನೈಟ್ ಲೈಫ್ ಎಂಜಾಯ್ ಮಾಡಿದ ‘ಬಿಗ್ ಬಾಸ್’ ತನಿಷಾ ಕುಪ್ಪಂಡ 

‘ಬಿಗ್ ಬಾಸ್ ಕನ್ನಡ ಸೀಸನ್ 11’ ಅನ್ನು ಸುದೀಪ್ ಅವರೇ ನಡೆಸಿಕೊಡುತ್ತಾರೆ ಎನ್ನಲಾಗಿದೆ. ಈ ಮೊದಲು ಸುದೀಪ್ ಅವರು ಬಿಗ್ ಬಾಸ್​ನ ಭಾಗವಾಗಿ ಇರುವುದಿಲ್ಲ ಎಂದು ಕೆಲವರು ಹೇಳಿದ್ದರು. ಆದರೆ, ಆ ರೀತಿ ಇಲ್ಲ ಎಂದು ಕೆಲವು ಮೂಲಗಳು ಹೇಳುತ್ತಿವೆ. ಈಗಾಗಲೇ ಪ್ರೋಮೋಶೂಟ್ ಮುಗಿದಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್