AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಸ್ಪರ್ಧಿ ಜೊತೆ ನಟನ ಸಂಬಂಧ, ವಿಡಿಯೋ ಬಿಡುಗಡೆ ಮಾಡಿದ ನಟನ ಪತ್ನಿ

Bigg Boss Contestant Ritu: ಬಿಗ್​​ಬಾಸ್ ಸ್ಪರ್ಧಿಯೊಟ್ಟಿಗೆ ನನ್ನ ಪತಿ ಸಂಬಂಧ ಹೊಂದಿದ್ದಾರೆ ಎಂದು ನಟನ ಪತ್ನಿ ಆರೋಪ ಮಾಡಿದ್ದು, ತನ್ನ ಪತಿ ಹಾಗೂ ಬಿಗ್​​ಬಾಸ್ ಸ್ಪರ್ಧಿಯ ವಿಡಿಯೋಗಳನ್ನು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ವೈರಲ್ ಮಾಡಿದ್ದಾರೆ. ಅಷ್ಟಕ್ಕೂ ಯಾರು ಆ ನಟ? ಯಾವ ಬಿಗ್​​ಬಾಸ್ ಸ್ಪರ್ಧಿಯೊಂದಿಗೆ ಸಂಬಂಧ ಹೊಂದಿದ್ದಾರೆ? ಇಲ್ಲಿದೆ ಮಾಹಿತಿ ಓದಿ...

ಬಿಗ್​​ಬಾಸ್ ಸ್ಪರ್ಧಿ ಜೊತೆ ನಟನ ಸಂಬಂಧ, ವಿಡಿಯೋ ಬಿಡುಗಡೆ ಮಾಡಿದ ನಟನ ಪತ್ನಿ
Ritu Chaudary
ಮಂಜುನಾಥ ಸಿ.
|

Updated on: Sep 23, 2025 | 11:27 AM

Share

ತೆಲುಗು ಬಿಗ್​​ಬಾಸ್ ಸೀಸನ್ 9 (Telugu Bigg Boss) ಚಾಲ್ತಿಯಲ್ಲಿದೆ. ಕನ್ನಡದ ನಟಿಯರಾದ ಸಂಜನಾ ಗಲ್ರಾನಿ, ತನುಜಾ ಗೌಡ ಅವರುಗಳು ಸಹ ಈ ಬಾರಿ ತೆಲುಗು ಬಿಗ್​​ಬಾಸ್ ಮನೆಗೆ ಹೋಗಿದ್ದಾರೆ. ಖ್ಯಾತ ನಟಿ ಫ್ಲೋರಾ ಸೈನಿ, ನಟ ಸುಮನ್ ಶೆಟ್ಟಿ ಇನ್ನೂ ಹಲವರು ಬಿಗ್​​ಬಾಸ್ ಮನೆಯಲ್ಲಿದ್ದಾರೆ. ಹಲವು ವರ್ಷಗಳಿಂದ ಟಿವಿ ಧಾರಾವಾಹಿಗಳಲ್ಲಿ ನಟಿಸುತ್ತಿರುವ ರಿತು ಚೌಧರಿ ಸಹ ಬಿಗ್​​ಬಾಸ್ ಮನೆಗೆ ಹೋಗಿದ್ದಾರೆ. ಆದರೆ ಹೊರಗೆ ಅವರದ್ದೇ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನಟನೊಟ್ಟಿಗೆ ರಿತು ಚೌಧರಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ತೆಲುಗಿನ ಕೆಲ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಧರ್ಮ ಮಹೇಶ್ ಅವರೊಟ್ಟಿಗೆ ರಿತು ಚೌಧರಿ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಆರೋಪ ಮಾಡಿರುವುದು ಸ್ವತಃ ನಟ ಧರ್ಮ ಮಹೇಶ್ ಅವರ ಪತ್ನಿಯೇ. ಕೆಲ ದಿನಗಳ ಹಿಂದಷ್ಟೆ ಧರ್ಮ ಮಹೇಶ್ ಪತ್ನಿ ಗೌತಮಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು, ಧರ್ಮ ಮಹೇಶ್ ತಮಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಹಾಗೂ ಮತ್ತೊಬ್ಬ ಯುವತಿಯೊಟ್ಟಿಗೆ ಸಂಬಂಧ ಹೊಂದಿದ್ದಾರೆ ಎಂದು ಆರೋಪ ಮಾಡಿದ್ದರು. ಆದರೆ ಆ ಯುವತಿ ಯಾರು ಎಂಬುದನ್ನು ಹೇಳಿರಲಿಲ್ಲ.

ಆದರೆ ಇದೀಗ ಗೌತಮಿ ಅವರು ರಿತು ಚೌಧರಿ ಮೇಲೆ ಆರೋಪ ಮಾಡಿದ್ದು, ತನ್ನ ಪತಿ ಧರ್ಮ ಮಹೇಶ್ ಹಾಗೂ ನಟಿ ರಿತು ಚೌಧರಿ ನಡುವೆ ಸಂಬಂಧ ಇದೆ ಎಂದಿದ್ದಾರೆ ಮಾತ್ರವಲ್ಲದೆ. ಇಬ್ಬರೂ ಒಟ್ಟಿಗೆ ಓಡಾಡುತ್ತಿರುವ ಕೆಲವು ವಿಡಿಯೋಗಳನ್ನು ಸ್ವತಃ ಗೌತಮಿ ಬಿಡುಗಡೆ ಮಾಡಿದ್ದಾರೆ. ತಮ್ಮ ಫ್ಲ್ಯಾಟ್​​ನಲ್ಲಿ ಇಬ್ಬರೂ ಒಟ್ಟಿಗೆ ಇದ್ದು, ಇಬ್ಬರೂ ಡ್ರಗ್ಸ್ ಸೇವನೆ ಮಾಡಿದ್ದಾರೆ ಎಂದು ಸಹ ಗೌತಮಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ:ಬಿಗ್​​ಬಾಸ್: ಹೀರೋಯಿನ್​​ಗೆ ಹೊಡೆದ ಕಮಿಡಿಯನ್, ಮನೆಯಲ್ಲಿ ‘ಬಳೆ’ ಸದ್ದು

ಗೌತಮಿ ಬಿಡುಗಡೆ ಮಾಡಿರುವ ವಿಡಿಯೋಗಳಲ್ಲಿ ರಿತು ಚೌಧರಿ ಮತ್ತು ಧರ್ಮ ಮಹೇಶ್ ಲಿಫ್ಟ್​​ನಲ್ಲಿ ಒಟ್ಟಿಗೆ ಹೋಗುತ್ತಿರುವ ವಿಡಿಯೋ ಇದೆ, ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೋ ಇದೆ. ಮತ್ತೊಂದು ವಿಡಿಯೋನಲ್ಲಿ ರಿತು ಚೌಧರಿ ಸಣ್ಣ ಡಬ್ಬಿ ಒಂದರಿಂದ ವಸ್ತುವೊಂದನ್ನು ತೆಗೆದುಕೊಂಡು ಬಾಯಿಗೆ ಹಾಕಿಕೊಳ್ಳುತ್ತಿರುವ ದೃಶ್ಯವಿದೆ. ಇದನ್ನೇ ಗೌತಮಿ, ಡ್ರಗ್ಸ್ ಸೇವನೆ ಮಾಡುತ್ತಿರುವ ದೃಶ್ಯವೆಂದು ವಿಡಿಯೋ ಹಂಚಿಕೊಂಡಿದ್ದಾರೆ. ರಿತು ಚೌಧರಿ ಪ್ರಸ್ತುತ ಬಿಗ್​​ಬಾಸ್ ಮನೆಯಲ್ಲಿದ್ದಾರೆ. ಪತ್ನಿಯ ಆರೋಪಗಳ ಬಗ್ಗೆ ಧರ್ಮ ಮಹೇಶ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಿತು ಚೌಧರಿ ಕೆಲ ಟಿವಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಜೊತೆಗೆ ಟಿವಿ ನಿರೂಪಕಿ ಸಹ ಆಗಿದ್ದಾರೆ. ಧರ್ಮ ಮಹೇಶ್ ‘ಡ್ರಿಂಕರ್ ಸಾಯಿ’ ಸೇರಿದಂತೆ ಇನ್ನೂ ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ. ಧರ್ಮ ಮಹೇಶ್ ಪತ್ನಿ ಗೌತಮಿ, ಸೋಷಿಯಲ್ ಮೀಡಿಯಾ ಇನ್​​ಫ್ಲ್ಯುಯೆನ್ಸರ್ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!