AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆಯಲ್ಲಿ ಉಗ್ರಂ ಮಂಜು: ‘ಭಾರ್ಗವಿ ಎಲ್​ಎಲ್​ಬಿ’ ಧಾರಾವಾಹಿಗೆ ಬಂದ ನಟ

Ugram Manju: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಉಗ್ರಂ ಮಂಜು ಇದ್ದರು. ಅವರು ಟಾಪ 6ರಲ್ಲಿ ಸ್ಥಾನ ಪಡೆದಿದ್ದರು. ಅವರು ದೊಡ್ಮನೆಯಿಂದ ಹೊರ ಬಂದ ಬಳಿಕ ಸಾಕಷ್ಟು ಸಿನಿಮಾ ಆಫರ್ ಪಡೆದರು. ಈಗ ಅವರು  ‘ಭಾರ್ಗವಿ ಎಲ್​ಎಲ್​ಬಿ’ ಧಾರಾವಾಹಿಯಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎಪಿಸೋಡ್​ಗಳಿಗಾಗಿ ಅವರ ಫ್ಯಾನ್ಸ್ ಕಾದಿದ್ದಾರೆ.

ಕಿರುತೆರೆಯಲ್ಲಿ ಉಗ್ರಂ ಮಂಜು: ‘ಭಾರ್ಗವಿ ಎಲ್​ಎಲ್​ಬಿ’ ಧಾರಾವಾಹಿಗೆ ಬಂದ ನಟ
Ugram Manju
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 14, 2025 | 8:12 PM

Share

ನಟ ಉಗ್ರಂ ಮಂಜು ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾದ ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಉಗ್ರಂ ಮಂಜು ಇದ್ದರು. ಅವರು ಟಾಪ 6ರಲ್ಲಿ ಸ್ಥಾನ ಪಡೆದಿದ್ದರು. ಅವರು ದೊಡ್ಮನೆಯಿಂದ ಹೊರ ಬಂದ ಬಳಿಕ ಸಾಕಷ್ಟು ಸಿನಿಮಾ ಆಫರ್ ಪಡೆದರು. ಈಗ ಅವರು  ‘ಭಾರ್ಗವಿ ಎಲ್​ಎಲ್​ಬಿ’ ಧಾರಾವಾಹಿಯಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎಪಿಸೋಡ್​ಗಳಿಗಾಗಿ ಅವರ ಫ್ಯಾನ್ಸ್ ಕಾದಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಹಲವು ರೀತಿಯ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಇದರಲ್ಲಿ ಅನೇಕ ಧಾರಾವಾಹಿಗಳು ಭಾವನಾತ್ಮಕವಾಗಿದ್ದರೆ, ಇನ್ನೂ ಕೆಲವು ಮನಮಿಡಿಯುವ ರೀತಿಯಲ್ಲಿ ಇವೆ. ‘ಭಾರ್ಗವಿ ಎಲ್​ಎಲ್​ಬಿ’ ಧಾರಾವಾಹಿ ಕೂಡ ಪ್ರೇಕ್ಷಕರಿಗೆ ಇಷ್ಟ ಆಗಿದೆ. ಸೋಮವಾರದಿಂದ – ಶುಕ್ರವಾರ ರಾತ್ರಿ 8.30ಕ್ಕೆ ಕಲರ್ಸ್ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಆಗುತ್ತಿದೆ. ಇದಕ್ಕೆ ಉಗ್ರಂ ಮಂಜು ಕಾಣಿಸಿಕೊಳ್ಳಲಿದ್ದಾರೆ.

ಬುಧವಾರ ಮತ್ತು ಗುರುವಾರದ ಸಂಚಿಕೆಯಲ್ಲಿ (ಆಗಸ್ಟ್ 13,14) ಉಗ್ರಂ ಮಂಜು ಬಂದಿದ್ದಾರೆ. ನಾಯಕ ಅರ್ಜುನ್ ಹಾಗೂ ಕಥಾನಾಯಕಿ ಭಾರ್ಗವಿಗೆ ತಾಳಿ ಕಟ್ಟುವ ಸನ್ನಿವೇಶ ಇದೆ. ಇದು ಸಂಚಿಕೆಯ ಹೈಲೈಟ್. ಈ ವೇಳೆ ಉಗ್ರಂ ಮಂಜು ಅವರ ಆಗಮನ ಆಗಲಿದೆ.

ಧೈರ್ಯಶಾಲಿ ಹಾಗೂ ಮಧ್ಯಮ ವರ್ಗದ ಯುವತಿ ಭಾರ್ಗವಿ ಮತ್ತು ಅತ್ಯಂತ ಪ್ರಭಾವಶಾಲಿ ಮತ್ತು ಬಲಿಷ್ಠ ವಕೀಲ ಜಯಪ್ರಕಾಶ್ ಪಾಟೀಲ್ ನಡುವಿನ ಸ್ವಾಭಿಮಾನದ ಮಹಾ ಸಂಘರ್ಷದ ಕಥೆಯನ್ನು ‘ಭಾರ್ಗವಿ ಎಲ್​ಎಲ್​ಬಿ’ ಧಾರಾವಾಹಿ ಹೇಳುತ್ತದೆ. ಕಥೆಯಲ್ಲಿ ಪ್ರಮುಖ ತಿರುವೊಂದು ಎದುರಾಗಿದೆ. ಇದರಲ್ಲಿ, ಅರ್ಜುನ್ ಹಾಗೂ ಭಾರ್ಗವಿ ಅನಿರೀಕ್ಷಿತವಾಗಿ ಮದುವೆ ಆಗೋ ಪರಿಸ್ಥಿತಿ ಬರುತ್ತದೆ.

ಇದನ್ನೂ ಓದಿ:ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ ಅಮೂಲ್ಯ

ಮದುವೆಯ ವಿಷಯ ತಿಳಿದರೆ ಜೆಪಿ ಪ್ರತಿಕ್ರಿಯೆ ಏನು? ಬೃಂದಾ ಕೂಡಾ ಅದೇ ಮನೆ ಸೇರಿದರೆ ಮುಮದೆ ಏನೆಲ್ಲ ನಡೆಯುತ್ತದೆ ಎಂಬುದು ಸದ್ಯದ ಕುತೂಹಲ. ಇನ್ನು, ಭಾರ್ಗವಿಯ ಮೊದಲ ಕೋರ್ಟ್ ಪ್ರಕರಣ ಅಂತಿಮ ಹಂತದಲ್ಲಿದೆ. ಇದರಲ್ಲಿ ಅವರು ಜೆಪಿಯನ್ನು ಸೋಲಿಸುತ್ತಾಳಾ ಎಂಬುದು ಸದ್ಯದ ಪ್ರಶ್ನೆ.

ಇನ್ನು, ಉಗ್ರಂ ಮಂಜು ಅವರು ‘ಮ್ಯಾಕ್ಸ್’ ಯಶಸ್ಸಿನ ಬಳಿಕ ‘ಮ್ಯಾಕ್ಸ್’ ಮಂಜು ಆಗಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!