ಬಿಗ್​ ಬಾಸ್​ ಸ್ಪರ್ಧಿ ಹಿನಾ ಖಾನ್​ಗೆ 3ನೇ ಹಂತದ ಸ್ತನ ಕ್ಯಾನ್ಸರ್​; ಶಾಕಿಂಗ್​ ವಿಚಾರ ತಿಳಿಸಿದ ನಟಿ

ಹಿನಾ ಖಾನ್​ ಅವರ ಆರೋಗ್ಯದ ಕುರಿತಂತೆ ಕೆಲವು ಅಂತೆಕಂತೆಗಳು ಹರಡಲು ಶುರುವಾಗಿವೆ. ಅದು ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ಅವರು ಸ್ವತಃ ಸ್ಪಷ್ಟನೆ ನೀಡಿದ್ದಾರೆ. ತಾವು ಸ್ತನ ಕ್ಯಾನ್ಸರ್​ಗೆ ಒಳಗಾಗಿರುವುದನ್ನು ಹಿನಾ ಖಾನ್​ ಖಚಿತಪಡಿಸಿದ್ದಾರೆ. ಅಲ್ಲದೇ ಶೀಘ್ರವೇ ತಾವು ಗುಣಮುಖರಾಗುವುದಾಗಿ ಭರವಸೆ ನೀಡಿದ್ದಾರೆ. ಈ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಬಿಗ್​ ಬಾಸ್​ ಸ್ಪರ್ಧಿ ಹಿನಾ ಖಾನ್​ಗೆ 3ನೇ ಹಂತದ ಸ್ತನ ಕ್ಯಾನ್ಸರ್​; ಶಾಕಿಂಗ್​ ವಿಚಾರ ತಿಳಿಸಿದ ನಟಿ
ಹಿನಾ ಖಾನ್​
Follow us
|

Updated on: Jun 28, 2024 | 4:06 PM

ಹಿಂದಿ ಕಿರುತೆರೆಯಲ್ಲಿ ಸಾಕಷ್ಟು ಜನಪ್ರಿಯತೆ ಗಳಿಸಿರುವ ನಟಿ ಹಿನಾ ಖಾನ್​ (Hina Khan) ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದೆ. ಈಗ ಬಗ್ಗೆ ಅವರು ಅಭಿಮಾನಿಗಳಿಗೆ ಮಾಹಿತಿ ತಿಳಿಸಿದ್ದಾರೆ. ಒಂದು ಬೇಸರದ ವಿಚಾರವನ್ನು ಹಿನಾ ಖಾನ್​ ಬಹಿರಂಗಪಡಿಸಿದ್ದಾರೆ. ಅವರಿಗೆ ಕ್ಯಾನ್ಸರ್​ (Breast Cancer) ಆಗಿದೆ. ಮೂರನೇ ಹಂತದ ಸ್ತನ ಕ್ಯಾನ್ಸರ್​ನಿಂದ ಹಿನಾ ಖಾನ್​ ಬಳಲುತ್ತಿದ್ದಾರೆ. ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ ನೋವಾಗಿದೆ. ಹಿಂದಿ ಧಾರಾವಾಹಿ ಹಾಗೂ ಬಿಗ್​ ಬಾಸ್​ ರಿಯಾಲಿಟಿ ಶೋ ಮೂಲಕ ಹಿನಾ ಖಾನ್​ ಖ್ಯಾತಿ ಗಳಿಸಿದ್ದಾರೆ.

ಸೋಶಿಯಲ್​ ಮೀಡಿಯಾ ಮೂಲಕ ಹಿನಾ ಖಾನ್​ ಅವರು ಮಾಹಿತಿ ನೀಡಿದ್ದಾರೆ. ‘ಇತ್ತೀಚೆಗೆ ಹರಡಿರುವ ಗಾಸಿಪ್​ಗಳಿಗೆ ಸ್ಪಷ್ಟನೆ ನೀಡುತ್ತಾ, ಒಂದು ಮುಖ್ಯವಾದ ವಿಷಯವನ್ನು ನನ್ನ ಅಭಿಮಾನಿಗಳಿಗೆ ತಿಳಿಸುತ್ತಿದ್ದೇನೆ. ನನಗೆ 3ನೇ ಹಂತದ ಸ್ತನ ಕ್ಯಾನ್ಸರ್​ ಆಗಿರುವುದು ತಿಳಿದುಬಂದಿದೆ. ಈ ಖಾಯಿಲೆಯ ವಿರುದ್ಧ ಹೋರಾಡಿ ಹೊರಬರಲು ನಾನು ಸನ್ನದ್ಧಳಾಗಿದ್ದೇನೆ’ ಎಂದು ಹಿನಾ ಖಾನ್​ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

ಈಗಾಗಲೇ ಹಿನಾ ಖಾನ್​ ಅವರು ಸ್ತನ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯಲು ಆರಂಭಿಸಿದ್ದಾರೆ. ಗುಣಮುಖರಾಗಿ, ಮೊದಲಿನಿಂದಲೂ ಸ್ಟ್ರಾಂಗ್​ ಆಗಿ ಜನರ ಎದುರು ಬರುವುದಾಗಿ ಅವರು ಹೇಳಿದ್ದಾರೆ. ಆ ಮೂಲಕ ಅಭಿಮಾನಿಗಳಿಗೆ ಅವರು ಭರವಸೆ ನೀಡಿದ್ದಾರೆ. ಹಿಂದಿ ಕಿರುತೆರೆ ಧಾರಾವಾಹಿಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ಈಗ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ನಿಮ್ಮೆಲ್ಲರ ಪ್ರೀತಿ ಮತ್ತು ಹಾರೈಕೆ ನನಗೆ ಬೇಕು. ನಿಮ್ಮ ಸ್ವಂತ ಅನುಭವ, ಚಿಕ್ಕ ಮಾಹಿತಿಗಳು, ಸಲಹೆಗಳು ನನಗೆ ತುಂಬ ಮುಖ್ಯವಾಗಿವೆ. ನಾನು ಮತ್ತು ನನ್ನ ಕುಟುಂಬದವರು ಚಿಕಿತ್ಸೆಯ ಕಡೆಗೆ ಗಮನ ಹರಿಸಿದ್ದೇವೆ. ದೇವರ ದಯೆಯಿಂದ ನಾನು ಗುಣಮುಖಳಾಗುತ್ತೇನೆ ಹಾಗೂ ಸಂಪೂರ್ಣ ಆರೋಗ್ಯವಂತಳಾಗುತ್ತೇನೆ ಎಂಬ ನಂಬಿಕೆ ಇದೆ. ನಿಮ್ಮ ಪ್ರೀತಿ, ಹಾರೈಕೆ ನನಗೆ ಕಳಿಸಿ’ ಎಂದು ಅಭಿಮಾನಿಗಳಲ್ಲಿ ಹಿನಾ ಖಾನ್​ ಮನವಿ ಮಾಡಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ
T20 World Cup: ದ್ರಾವಿಡ್ ಭಾವನಾತ್ಮಕ ಸಂಭ್ರಮಾಚರಣೆ ಹೇಗಿದೆ ನೋಡಿ