AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆಗೆ ಮರಳಿದ ನಟಿ ಮಯೂರಿ; ‘ನನ್ನ ದೇವ್ರು’ ಧಾರಾವಾಹಿಗೆ ನರಸಿಂಹರಾಜು ಮೊಮ್ಮಗ ಹೀರೋ

ನಟಿ ಮಯೂರಿ ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದವರು. ಅವರು ‘ನನ್ನ ದೇವ್ರು’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ನಾಯಕನಾಗಿ ಅವಿನಾಶ್ ದಿವಾಕರ್ ನಟಿಸುತ್ತಿದ್ದಾರೆ. ಇವರು ನರಸಿಂಹರಾಜು ಅವರ ಮೊಮ್ಮಗ ಎಂಬುದು ವಿಶೇಷ. ಧಾರಾವಾಹಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಸಂಜೆ 6:30ಕ್ಕೆ ವೀಕ್ಷಿಸಬಹುದು.

ಕಿರುತೆರೆಗೆ ಮರಳಿದ ನಟಿ ಮಯೂರಿ; ‘ನನ್ನ ದೇವ್ರು’ ಧಾರಾವಾಹಿಗೆ ನರಸಿಂಹರಾಜು ಮೊಮ್ಮಗ ಹೀರೋ
ಕಿರುತೆರೆಗೆ ಮರಳಿದ ನಟಿ ಮಯೂರಿ; ‘ನನ್ನ ದೇವ್ರು’ ಧಾರಾವಾಹಿಗೆ ನರಸಿಂಹರಾಜು ಮೊಮ್ಮಗ ಹೀರೋ
ರಾಜೇಶ್ ದುಗ್ಗುಮನೆ
|

Updated on: Jul 03, 2024 | 7:27 AM

Share

‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದವರು ನಟಿ ಮಯೂರಿ. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ಅವರು ಹಿರಿತೆರೆಯಲ್ಲಿ ಬ್ಯುಸಿ ಆದರು. ಈಗ ಅವರು ಮತ್ತೆ ಕಿರುತೆರೆಗೆ ಮರಳಿದ್ದಾರೆ. ‘ನನ್ನ ದೇವ್ರು’ ಹೆಸರಿನ ಧಾರಾವಾಹಿಯಲ್ಲಿ ಅವರು ನಟಿಸುತ್ತಿದ್ದಾರೆ. ಕಲರ್ಸ್ ಕನ್ನಡದಲ್ಲಿ ಜುಲೈ 8ರಿಂದ ಈ ಧಾರಾವಾಹಿ ಪ್ರಸಾರ ಆಗಲಿದೆ. ಈ ಧಾರಾವಾಹಿಯನ್ನು ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಸಂಜೆ 6:30ಕ್ಕೆ ವೀಕ್ಷಿಸಬಹುದು. ಖ್ಯಾತ ಹಾಸ್ಯ ನಟ ನರಸಿಂಹರಾಜು ಅವರ ಮೊಮ್ಮಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

‘ನನ್ನ ದೇವ್ರು’ ಧಾರಾವಾಹಿಯಲ್ಲಿ ಸಣ್ಣ ಊರೊಂದರ ಬಡ ನರ್ಸ್ ಪಾತ್ರ ಮಾಡಿದ್ದಾರೆ ಮಯೂರಿ. ಅತ್ತ ಇಡೀ ಊರು ಉದ್ಯಮಿ ಸಚ್ಚಿದಾನಂದನ ಮೆಚ್ಚಿಕೊಳ್ಳುತ್ತದೆ. ಈ ವ್ಯಕ್ತಿಗೆ ಸೇರಿದ ಆಸ್ಪತ್ರೆಯಲ್ಲಿ ಕಥಾ ನಾಯಕಿ ಕೆಲಸ ಮಾಡುತ್ತಾಳೆ. ಸಚ್ಚಿದಾನಂದ ಬಳಿ ಎಲ್ಲವೂ ಇದೆ. ಆದರೆ, ಮಗಳು ದೂರ ಆಗಿದ್ದಾಳೆ. ಅವಳ ವಿಶ್ವಾಸ ಗಳಿಸಲು ಸಚ್ಚಿದಾನಂದನ ಹಂಬಲಿಸುತ್ತಿರುತ್ತಾನೆ. ಆಗ ಸಚ್ಚಿದಾನಂದನ ಬದುಕಲ್ಲಿ ಮಯೂರಿಯ ಪ್ರವೇಶವಾಗುತ್ತದೆ. ಸಚ್ಚಿದಾನಂದ್ ಬಾಳನ್ನು ಸರಿದಾರಿಗೆ ತರುವ ಹಾದಿಯಲ್ಲಿ ಮಯೂರಿ ಎದುರಿಸುವ ಸವಾಲುಗಳೇನು ಎಂಬುದೇ ಮುಂದಿನ ಕಥೆ

‘ಅಶ್ವಿನಿ ನಕ್ಷತ್ರ’ ಧಾರಾವಾಹಿಯಿಂದ ಹೆಸರಾದ ಮಯೂರಿ ಹಲವು ವರ್ಷಗಳ ಬಳಿಕ ಟಿವಿಗೆ ಮರಳುತ್ತಿದ್ದಾರೆ. ನಾಯಕನಾಗಿ ಅವಿನಾಶ್ ದಿವಾಕರ್ ನಟಿಸುತ್ತಿದ್ದಾರೆ. ಇವರು ನರಸಿಂಹರಾಜು ಅವರ ಮೊಮ್ಮಗ ಎಂಬುದು ವಿಶೇಷ. ಇವರೊಟ್ಟಿಗೆ ಯುಕ್ತಾ ಮಲ್ನಾಡ್, ವಿ ಮನೋಹರ್, ಸ್ವಾತಿ, ನಿಶ್ಚಿತಾ ಗೌಡ, ರೇಖಾದಾಸ್, ಮಾಲತಿ ಸುಧೀರ್, ರವಿ ಬ್ರಹ್ಮ, ಯಮುನಾ ಶ್ರೀನಿಧಿ, ಅಭಿಷೇಕ್ ಶ್ರೀಕಾಂತ್ ಸೇರಿ ಅನೇಕರು ಧಾರಾವಾಹಿಯಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಈ ಸುಂದರ ದೃಶ್ಯ ನೋಡಿದ ಮರುಕ್ಷಣವೇ ನಾನು ಕಳೆದು ಹೋದೆ, ಹೇಗಿದೆ ನೋಡಿ ಮಯೂರಿ ನೃತ್ಯ 

ಖ್ಯಾತ ನಿರ್ಮಾಪಕಿ ಶ್ರುತಿ ನಾಯ್ಡು ಅವರು ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ಮಿಸಿದ್ದಾರೆ. ಇತ್ತೀಚಿಗೆ ಬೆಳ‌್ಳಿ ತೆರೆಯ ಮೇಲೆ ಖಳನಟನಾಗಿ ಗಮನ ಸೆಳೆಯುತ್ತಿರುವ ರಮೇಶ್ ಇಂದಿರಾ ‘ನನ್ನ ದೇವ್ರು’ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?