AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ

‘ಅಶ್ವಿನಿ ನಕ್ಷತ್ರದ’ ಮೂಲಕ ಗುರುತಿಸಿಕೊಂಡಿದ್ದ ನಟಿ ಮಯೂರಿ ಕ್ಯಾತಾರಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ ಕಾಲಿಟ್ಟಿದ್ದಾರೆ. ಅವರ ಎಂಟ್ರಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿ ಹರಿದಾಡಿತ್ತು.

ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Sep 24, 2022 | 6:56 PM

Share

‘ಅಶ್ವಿನಿ ನಕ್ಷತ್ರದ’ (Ashwini Nakshatra Movie) ಮೂಲಕ ಗುರುತಿಸಿಕೊಂಡಿದ್ದ ನಟಿ ಮಯೂರಿ ಕ್ಯಾತಾರಿ ಅವರು ‘ಬಿಗ್ ಬಾಸ್​ ಕನ್ನಡ ಸೀಸನ್ 9’ಕ್ಕೆ ಕಾಲಿಟ್ಟಿದ್ದಾರೆ. ಅವರ ಎಂಟ್ರಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸುದ್ದಿ ಹರಿದಾಡಿತ್ತು. ಈಗ ಅದು ಖಚಿತವಾಗಿದೆ. ಅವರ ಎಂಟ್ರಿಯಿಂದ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

ಕಿರುತೆರೆಯ ‘ಅಶ್ವಿನಿ ನಕ್ಷತ್ರ’ ಸೀರಿಯಲ್​ ಮೂಲಕ ಹೆಚ್ಚು ಖ್ಯಾತಿ ಪಡೆದ ಮಯೂರಿ, ನಂತರ ಸಿನಿಮಾಗೂ ಕಾಲಿಟ್ಟರು. ನಾಗತಿಹಳ್ಳಿ ಚಂದ್ರಶೇಖರ್​ ನಿರ್ದೇಶನದ ‘ಇಷ್ಟಕಾಮ್ಯ’ ಸಿನಿಮಾದಲ್ಲಿ ಗಮನಾರ್ಹ ಪಾತ್ರ ಮಾಡಿದರು. ಶಶಾಂಕ್ ನಿರ್ದೇಶನದ ‘ಕೃಷ್ಣ ಲೀಲಾ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. ‘ಪೊಗರು’ ಸಿನಿಮಾದಲ್ಲಿ ಧ್ರುವ ಸರ್ಜಾಗೆ ತಂಗಿಯಾಗಿ ಅವರು ನಟಿಸಿದ್ದಾರೆ. 2020ರ ಜೂನ್​ನಲ್ಲಿ ತಮ್ಮ ಬಹುಕಾಲದ ಗೆಳಯ ಅರುಣ್​ ಜೊತೆ ಬೆಂಗಳೂರಿನ ದೇವಸ್ಥಾನದಲ್ಲಿ ಮಯೂರಿ ಹಸೆಮಣೆ ಏರಿದ್ದರು. 2021ರ ಮಾರ್ಚ್​ ತಿಂಗಳಲ್ಲಿ ಅವರು ಗಂಡುಮಗುವಿಗೆ ಜನ್ಮ ನೀಡಿದರು.

‘ನನಗೆ ನನ್ನ ಕುಟುಂಬವೇ ಪ್ರಪಂಚ. ನನ್ನ ಮಗುವಿಗೆ ಈಗ ಕೇವಲ ಒಂದೂವರೆ ವರ್ಷ. ಅವನನ್ನು ಬಿಟ್ಟು ಹೇಗೆ ಇರುತ್ತೀನೋ ಎಂಬುದು ಗೊತ್ತಿಲ್ಲ. ನಾನು ಹೊಸ ಚಾಲೆಂಜ್ ತೆಗೆದುಕೊಳ್ಳುತ್ತಿದ್ದೇನೆ’ ಎಂದು ಮಯೂರಿ ಹೇಳಿಕೊಂಡಿದ್ದಾರೆ. ಮಯೂರಿಯನ್ನು ಕಳುಹಿಸಲು ಇಡೀ ಕುಟುಂಬ ಬಂದಿತ್ತು. ಮಗು ಕೂಡ ವೇದಿಕೆ ಏರಿತ್ತು. ಮಗು ಬಿಟ್ಟು ಹೊರಡುವಾಗ ಮಯೂರಿ ಭಾವುಕರಾದರು.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 9’:​ ಮನೆ ಸೇರುವ 18 ಸ್ಪರ್ಧಿಗಳ ಹೆಸರು ಲೀಕ್? ಇಲ್ಲಿದೆ ಫುಲ್ ಲಿಸ್ಟ್

ಮಗು ಜನಿಸಿದ್ದ ಸಂದರ್ಭದಲ್ಲಿ ಫೋಟೋ ಹಂಚಿಕೊಂಡಿದ್ದ ಮಯೂರಿ, ‘ಗಂಡುಮಗು ಜನಿಸಿದೆ. ನಮ್ಮ ಮನೆಗೆ ಪುಟಾಣಿ ಆಗಮಿಸಿದ್ದಾನೆ. ಈ ಸುಮಧುರವಾದ ಅನುಭವವನ್ನು ಹೇಳಿಕೊಳ್ಳಲು ಪದಗಳೇ ಇಲ್ಲ. ಇನ್ನೊಂದು ಸುಂದರ ಪಯಣವನ್ನು ಆರಂಭಿಸುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ನನ್ನ ಮೇಲಿರಲಿ’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು.

Published On - 6:44 pm, Sat, 24 September 22

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ