AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜು ಐ ಲವ್​ ಯೂ’ ಎಂದ ರಮ್ಯಾ, ಅಪ್ಪು ನೆನೆದು ಕಣ್ಣೀರು; ‘ವೀಕೆಂಡ್ ವಿತ್ ರಮೇಶ್’ ಹೈಲೈಟ್ಸ್

Weekend With Ramesh: ಮೊದಲ ಎಪಿಸೋಡ್​ಗೆ ರಮ್ಯಾ ಅತಿಥಿ ಎಂದಾಗ ಈ ಕುತೂಹಲ ದುಪ್ಟಟ್ಟಾಗಿತ್ತು. ರಮ್ಯಾ ಎಪಿಸೋಡ್​ನಲ್ಲಿ ಏನೆಲ್ಲ ಇರಲಿದೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಂಜು ಐ ಲವ್​ ಯೂ’ ಎಂದ ರಮ್ಯಾ, ಅಪ್ಪು ನೆನೆದು ಕಣ್ಣೀರು; ‘ವೀಕೆಂಡ್ ವಿತ್ ರಮೇಶ್’ ಹೈಲೈಟ್ಸ್
ರಮೇಶ್-ರಮ್ಯಾ
ರಾಜೇಶ್ ದುಗ್ಗುಮನೆ
| Edited By: |

Updated on:Mar 23, 2023 | 11:14 AM

Share

‘ವೀಕೆಂಡ್ ವಿತ್ ರಮೇಶ್ ಸೀಸನ್ 5’ರ (Weekend with Ramesh) ಮೊದಲ ಎಪಿಸೋಡ್ ಶನಿವಾರ (ಮಾರ್ಚ್ 25) ಪ್ರಸಾರ ಕಾಣಲಿದೆ. ಇದಕ್ಕೆ ಮೊದಲ ಅತಿಥಿಯಾಗಿ ರಮ್ಯಾ ಆಗಮಿಸಲಿದ್ದಾರೆ. ಈಗಾಗಲೇ ಇದರ ಶೂಟಿಂಗ್ ಪೂರ್ಣಗೊಂಡಿದೆ. ಹೊಸ ಸೀಸನ್​ನ ಮೊದಲ ಎಪಿಸೋಡ್​ನಲ್ಲಿ ಏನೆಲ್ಲ ಇರಲಿದೆ ಎಂಬ ವಿಚಾರವನ್ನು ಜೀ ಕನ್ನಡ ವಾಹಿನಿ ರಿವೀಲ್ ಮಾಡಿದೆ. ರಮ್ಯಾ ಎಪಿಸೋಡ್​ನ ಪ್ರೋಮೋನ ಹಂಚಿಕೊಳ್ಳಲಾಗಿದೆ. ಇದರಲ್ಲಿ ರಮ್ಯಾ ಅವರು ಸೀರೆಯಲ್ಲಿ ಮಿಂಚಿದ್ದಾರೆ. ತಮ್ಮ ಜರ್ನಿಯಲ್ಲಿ ಬಂದವರನ್ನು ಅವರು ನೆಪಿಸಿಕೊಂಡಿದ್ದಾರೆ. ಹಲವರು ವೇದಿಕೆ ಏರಿ ರಮ್ಯಾ ಅವರಿಗೆ ಸರ್​ಪ್ರೈಸ್ ನೀಡಿದ್ದಾರೆ. ‘ವೀಕೆಂಡ್ ವಿತ್ ರಮೇಶ್’ ಈಗಾಗಲೇ ನಾಲ್ಕು ಸೀಸನ್ ಪೂರ್ಣಗೊಳಿಸಿದೆ. ಐದನೇ ಸೀಸನ್ ಆರಂಭ ಆಗುತ್ತದೆ ಎಂದಾಗಲೇ ಸಾಕಷ್ಟು ಕುತೂಹಲ ಸೃಷ್ಟಿ ಆಗಿತ್ತು. ಅದರಲ್ಲೂ ಮೊದಲ ಎಪಿಸೋಡ್​ಗೆ ರಮ್ಯಾ ಅತಿಥಿ ಎಂದಾಗ ಈ ಕುತೂಹಲ ದುಪ್ಟಟ್ಟಾಗಿತ್ತು. ಈಗ ಇದರ ಪ್ರೋಮೋ ಹಂಚಿಕೊಳ್ಳಲಾಗಿದೆ. ‘ಮೊದಲ ಎಪಿಸೋಡ್‌ನಲ್ಲಿ ಮೋಡಿ ಮಾಡಲು ಬಂದರು ಸ್ಯಾಂಡಲ್‌ವುಡ್ ಕ್ವೀನ್. ವೀಕೆಂಡ್ ವಿತ್ ರಮೇಶ್-5. ಇದೇ ಶನಿವಾರದಿಂದ ಶನಿ-ಭಾನು ರಾತ್ರಿ 9ಕ್ಕೆ’ ಎಂದು ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ.

ಇದನ್ನೂ ಓದಿ: Ramya: ‘ವೀಕೆಂಡ್ ವಿತ್​ ರಮೇಶ್’ ಮೊದಲ ಎಪಿಸೋಡ್​ ಅತಿಥಿ ರಮ್ಯಾ; ‘ನಮ್ಮ ಕ್ವೀನ್​’ ಎಂದ ಫ್ಯಾನ್ಸ್

ರಮ್ಯಾ ಅವರ ವೃತ್ತಿ ಜೀವನದಲ್ಲಿ ರಾಜ್​ಕುಮಾರ್ ಕುಟುಂಬ ವಿಶೇಷವಾಗಿದೆ. ರಮ್ಯಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪಾರ್ವತಮ್ಮ. ಅವರಿಗೆ ರಮ್ಯಾ ಎಂದು ನಾಮಕರಣ ಮಾಡಿದ್ದೂ ಅವರೇ. ಇದನ್ನು ರಮ್ಯಾ ಉಲ್ಲೇಖ ಮಾಡಿದ್ದಾರೆ. ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಅಭಿನಯದ ‘ಸಂಜು ಮತ್ತು ಗೀತ’ ಸಿನಿಮಾ ಯಶಸ್ಸು ಕಂಡಿತ್ತು. ಶ್ರೀನಗರ ಕಿಟ್ಟಿ ಕೂಡ ವೇದಿಕೆ ಏರಿದ್ದಾರೆ. ಈ ವೇಳೆ ‘ಐ ಲವ್ ಯೂ ಸಂಜು’ ಎಂದಿದ್ದಾರೆ ರಮ್ಯಾ. ಪುನೀತ್ ಹಾಗೂ ರಮ್ಯಾ ಅವರದ್ದು ಹಿಟ್ ಕಾಂಬಿನೇಷನ್. ಆ ಬಗ್ಗೆಯೂ ರಮ್ಯಾ ಮಾತನಾಡಿದ್ದಾರೆ. ರಮ್ಯಾ ಪುನೀತ್ ನೆನೆದು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ‘ನಾವು ಭಾರತೀಯರು, ಹಾಗೆಯೇ ಕನ್ನಡಿಗರೂ ಕೂಡ’; ಅದ್ನಾನ್ ಸಮಿ ಹೇಳಿಕೆಗೆ ರಮ್ಯಾ ತಿರುಗೇಟು

2003ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ಅಭಿ’ ಚಿತ್ರದ ಮೂಲಕ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಚಿತ್ರದಿಂದ ಅವರಿಗೆ ಜನಪ್ರಿಯತೆ ಹೆಚ್ಚಿತು. ಅದೇ ವರ್ಷ ರಿಲೀಸ್ ಆದ ‘ಎಕ್ಸ್​ಕ್ಯೂಸ್​ ಮಿ’ ಸಿನಿಮಾ ಕೂಡ ಗೆದ್ದಿತು. ನಂತರ ಸುದೀಪ್ ಸೇರಿ ಅನೇಕ ಸ್ಟಾರ್​ಗಳ ಜೊತೆ ಅವರು ತೆರೆಹಂಚಿಕೊಂಡರು. ‘ವೀಕೆಂಡ್ ವಿತ್​ ರಮೇಶ್​’ ವೇದಿಕೆ ಮೇಲೆ ಅವರು ಪುನೀತ್ ಕುರಿತ ಅಪರೂಪದ ಮಾಹಿತಿ ಹಂಚಿಕೊಳ್ಳುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:38 am, Thu, 23 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​