AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಟ್ ಮಾಡುವಾಗ ತನ್ನದೇ ಕೈ ಬಣ್ಣದ ಬಗ್ಗೆ ಹನುಮಂತ ಬೇಸರ; ಅದಿತಿ ಉತ್ತರಕ್ಕೆ ನಾಚಿ ನೀರಾದ ಸ್ಪರ್ಧಿ

ಫಿನಾಲೆ ಟಿಕೆಟ್​ ಪಡೆಯಲು ಬಿಗ್ ಬಾಸ್​ ಒಂದು ಟಾಸ್ಕ್ ನೀಡಿದ್ದರು. ಯಾರು ಅತಿ ಕಡಿಮೆ ಸಮಯ ತೆಗೆದುಕೊಂಡು ಈ ಟಾಸ್ಕ್ ನಿಭಾಯಿಸುತ್ತಾರೋ ಅವರಿಗೆ ಫಿನಾಲೆಗೆ ಎಂಟ್ರಿ ಸಿಗಲಿದೆ ಎಂದು ಘೋಷಿಸಲಾಗಿತ್ತು. ಮನೆಯಲ್ಲಿ ಇರುವ ಇನ್ನುಳಿದ 8 ಘಟಾನುಘಟಿ ಸ್ಪರ್ಧಿಗಳನ್ನೂ ಮೀರಿಸಿ ಹನುಮಂತ ಈ ಸಾಧನೆ ಮಾಡಿದ್ದಾರೆ. ಅವರಿಗೆ ಅದಿತಿ ಶುಭ ಹಾರೈಸಿದ್ದಾರೆ.

ಹಾರ್ಟ್ ಮಾಡುವಾಗ ತನ್ನದೇ ಕೈ ಬಣ್ಣದ ಬಗ್ಗೆ ಹನುಮಂತ ಬೇಸರ; ಅದಿತಿ ಉತ್ತರಕ್ಕೆ ನಾಚಿ ನೀರಾದ ಸ್ಪರ್ಧಿ
ಅದಿತಿ-ಹನುಮಂತ
ರಾಜೇಶ್ ದುಗ್ಗುಮನೆ
|

Updated on: Jan 11, 2025 | 6:54 AM

Share

ಬಿಗ್ ಬಾಸ್ ಮನೆಯಲ್ಲಿ ಹನುಮಂತನ ಪಾಲಿಗೆ ಫಿನಾಲೆ ದೂರದ ಬೆಟ್ಟವಲ್ಲ. ಆ ಬೆಟ್ಟವನ್ನು ಏರಿಯಾಗಿದೆ. ಫಿನಾಲೆ ಟಿಕೆಟ್ ಪಡೆದು ಡೈರೆಕ್ಟ್ ಆಗಿ ಕೊನೆಯ ವಾರಕ್ಕೆ ಹೋಗಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ. ವಿಸೇಷ ಎಂದರೆ ಫಿನಾಲೆ ಟಿಕೆಟ್ ಪಡೆದವರನ್ನು ಅಭಿನಂದಿಸೋಕೆ ‘ಛೂ ಮಂತರ’ ಚಿತ್ರದ ಶರಣ್ ಹಾಗೂ ಅದಿತಿ ಪ್ರಭುದೇವ ಆಗಮಿಸಿದ್ದರು. ಇವರು ಹನುಮಂತಗೆ ಶುಭಾಶಯ ಕೋರಿದ್ದಾರೆ.

ಹಗ್ಗದಿಂದ ಮಾಡಿದ ದೊಡ್ಡ ಜಾಲದ ಮಾದರಿಯನ್ನು ಗಾರ್ಡನ್ ಏರಿಯಾದಲ್ಲಿ ನಿಲ್ಲಿಸಲಾಗಿತ್ತು. ಇದರ ಮೇಲೆ ವಿವಿಧ ಕೀ ಇರುತ್ತದೆ. ಈ ಕೀನ ತೆಗೆದುಕೊಂಡ ಸ್ಪರ್ಧಿ ಮರಳಿ ಬಂದು ಕೀ ಮೂಲಕ ಪೆಟ್ಟಿಗೆ ತೆಗೆಯಬೇಕು. ತೆಗೆದ ಬಳಿಕ ಆ ಬಾಕ್ಸ್​ನಲ್ಲಿರುವ ಬಾವುಟವನ್ನು ಹಿಡಿದು ಮತ್ತೆ ಹಗ್ಗದ ಜಾಲವನ್ನು ಏರಿ, ಅದರ ಮೇಲಿರುವ ಒಂದು ಹಲಗೆಯ ಮೇಲೆ ನಿಂತು ಬಾವುಟವನ್ನು ಅಲ್ಲಿರುವ ಪೈಪ್​ಗೆ ಸಿಕ್ಕಿಸಿ ‘ಬಿಗ್ ಬಾಸ್’ ಎಂದು ಹೇಳಬೇಕು.

ಈ ಟಾಸ್ಕ್​​ಗೆ ಭವ್ಯಾ ಹಾಗೂ ರಜತ್ ಮೂರು ನಿಮಿಷಕ್ಕೂ ಹೆಚ್ಚಿನ ಸಮಯ ತೆಗೆದುಕೊಂಡರು. ತ್ರಿವಿಕ್ರಂ ಅವರು ಎರಡು ನಿಮಿಷ ಇಪ್ಪತ್ತೊಬ್ಬಂತ್ತು ಸೆಕೆಡ್ ತೆಗೆದುಕೊಂಡರು. ಹನುಮಂತ ಅವರು ಎರಡು ನಿಮಿಷ ಇಪ್ಪತ್ತೇಳು ಸೆಕೆಂಡ್​ನಲ್ಲಿ ಟಾಸ್ಕ್ ಪೂರ್ಣಗೊಳಿಸಿ ಭೇಷ್ ಎನಿಸಿಕೊಂಡರು. ಈ ಮೂಲಕ ಟಿಕೆಟ್ ಟು ಫಿನಾಲೆ ಟಿಕೆಟ್​ನ ತಮ್ಮದಾಗಿಸಿಕೊಂಡರು.

ಇದನ್ನೂ ಓದಿ: ಬಿಗ್ ಬಾಸ್ ಫಿನಾಲೆಗೆ ಹನುಮಂತ ಎಂಟ್ರಿ; ಘಟಾನುಘಟಿಗಳೆಲ್ಲ ಗಪ್​ಚುಪ್​

ಈ ಟಿಕೆಟ್ ನೀಡೋಕೆ ಶರಣ್ ಹಾಗೂ ಅದಿತಿ ಬಂದಿದ್ದರು. ಟಿಕೆಟ್ ನೀಡಿದ ಬಳಿಕ ಹನುಮಂತ ಹಾಗೂ ಅದಿತಿ ಪ್ರತ್ಯೇಕವಾಗಿ ಹೋಗಿ ನಿಂತರು. ಈ ವೇಳೆ ಅದಿತಿ ಹನುಮಂತನ ಕೈ ಸಹಾಯದಿಂದ ಹಾರ್ಟ್ ಮಾಡಲು ಹೋದರು. ಆಗ ಹನುಮಂತಗೆ ಅದಿತಿ ಕೈ ಬಣ್ಣ ನೋಡಿ ಬೇಸರವಾಯಿತು. ‘ನನ್ನ ಕೈ ಕಪ್ಪಿದೆ’ ಎಂದು ಬೇಸರ ಹೊರಹಾಕಿದರು. ಆಗ ಇದಕ್ಕೆ ಉತ್ತರಿಸಿದ ಅದಿತಿ, ‘ಮನಸ್ಸು ಬೆಳ್ಳಗಿದೆ’ ಎಂದರು. ಇದರಿಂದ ಹನುಮಂತ ನಾಚಿ ನೀರಾದರು. ಈ ವಾರ ರಿಲೀಸ್ ಆದ ಹಾರರ್ ಸಿನಿಮಾ ‘ಛೂ ಮಂತರ್’ ಪ್ರಚಾರಕ್ಕಾಗಿ ಶರಣ್ ಹಾಗೂ ಅದಿತಿ ಬಿಗ್ ಬಾಸ್​ಗೆ ಬಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ
40 ಕೋಟಿ ಸಾಲದಿಂದ 19,000 ಕೋಟಿ ಸಾಮ್ರಾಜ್ಯ ಕಟ್ಟಿದ ಸ್ಪೂರ್ತಿದಾಯಕ ಕಥೆ