AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಆದಿತ್ಯ ಸಿಂಗ್ ರಜಪೂತ್​ದು ಆಕಸ್ಮಿಕ ಸಾವಲ್ಲ ಕೊಲೆ? ತಲೆಗೆ ಬಿದ್ದಿತ್ತು ಬಲವಾದ ಏಟು

ಪಂಚನಾಮದ ಸಮಯದಲ್ಲಿ ಆದಿತ್ಯ ಸಿಂಗ್ ತಲೆಯ ಎಡಭಾಗದಲ್ಲಿ ಸಣ್ಣ ಗಾಯ ಕಂಡುಬಂದಿದೆ. ಯಾವುದೇ ರಕ್ತಸ್ರಾವವಾಗಲಿಲ್ಲ. ಆ ಭಾಗದಲ್ಲಿ ಊತ ಇದೆ. ಅವರ ತಲೆಗೆ ಗಂಭೀರವಾದ ಗಾಯವಾಗಿತ್ತು ಎಂಬುದು ನಮ್ಮ ಶಂಕೆ ಎಂದಿದ್ದಾರೆ ಪೊಲೀಸರು.

ನಟ ಆದಿತ್ಯ ಸಿಂಗ್ ರಜಪೂತ್​ದು ಆಕಸ್ಮಿಕ ಸಾವಲ್ಲ ಕೊಲೆ? ತಲೆಗೆ ಬಿದ್ದಿತ್ತು ಬಲವಾದ ಏಟು
ಆದಿತ್ಯ ಸಿಂಗ್
Follow us
ರಾಜೇಶ್ ದುಗ್ಗುಮನೆ
|

Updated on: May 24, 2023 | 7:06 AM

ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ (Aditya Singh Rajput) ಅವರು ಇತ್ತೀಚೆಗೆ ನಿಧನ ಹೊಂದಿದರು. ಅವರ ನಿವಾಸದಲ್ಲಿ ಶವ ಪತ್ತೆ ಆಗಿತ್ತು. ಈ ಸಾವು ತುಂಬಾನೇ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಆಕಸ್ಮಿಕ ಸಾವೋ ಅಥವಾ ಕೊಲೆಯೋ ಎನ್ನುವ ಬಗ್ಗೆ ಸದ್ಯ ತನಿಖೆ ನಡೆಯುತ್ತಿದೆ. ಸಾಯುವುದಕ್ಕೂ ಮುನ್ನ ಆದಿತ್ಯ ತಲೆಯಲ್ಲಿ ಗಾಯಗಳು ಇದ್ದವು ಎನ್ನುವ ವಿಚಾರ ಈಗ ರಿವೀಲ್ ಆಗಿದೆ. ಇದು ಅನೇಕರಿಗೆ ಶಾಕ್ ತಂದಿದೆ. ಈ ಸಾವಿನ ಹಿಂದಿರುವ ರಹಸ್ಯ ಏನು ಎನ್ನುವ ಬಗ್ಗೆ ಅಭಿಮಾನಿಗಳಲ್ಲಿ ಪ್ರಶ್ನೆ ಮೂಡಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

‘ಪಂಚನಾಮದ ಸಮಯದಲ್ಲಿ ಆದಿತ್ಯ ಸಿಂಗ್ ತಲೆಯ ಎಡಭಾಗದಲ್ಲಿ ಸಣ್ಣ ಗಾಯ ಕಂಡುಬಂದಿದೆ. ಯಾವುದೇ ರಕ್ತಸ್ರಾವವಾಗಲಿಲ್ಲ. ಆ ಭಾಗದಲ್ಲಿ ಊತ ಇದೆ. ಅವರ ತಲೆಗೆ ಗಂಭೀರವಾದ ಗಾಯವಾಗಿತ್ತು ಎಂಬುದು ನಮ್ಮ ಶಂಕೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದಿಲ್ಲ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ’ ಎಂದು ಪೊಲೀಸ್ ಅಧಿಕಾರಿಗಳು ದಿ ಇಂಡಿಯನ್ ಎಕ್ಸ್‌ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಅವರು ಜಾರಿ ಬಿದ್ದಿರಬಹುದು ಎಂಬುದು ನಮ್ಮ ಅನುಮಾನ. ಬಾತ್​ರೂಂನ ಟೈಲ್ಸ್ ಒಡೆದಿದೆ. ಬಹುಶಃ ಅವರು ಬಿದ್ದಿದ್ದರಿಂದ ತಲೆಗೆ ಪೆಟ್ಟು ಬಿದ್ದಿರಬಹುದು. ಇದು ಸಾವಿಗೆ ಕಾರಣ ಇದ್ದರೂ ಇರಬಹುದು’ ಎಂದು ಶಂಕಿಸುತ್ತಾರೆ ಪೊಲೀಸರು.

ಇದನ್ನೂ ಓದಿ: ನಟ, ಮಾಡೆಲ್ ಆದಿತ್ಯ ಸಿಂಗ್ ಅನುಮಾನಾಸ್ಪದ ಸಾವು

ಆದಿತ್ಯ ಸಿಂಗ್ ರಜಪೂತ್ ಸೋಮವಾರ (ಮೇ 22) ತಮ್ಮ ಸ್ನಾನಗೃಹದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಆದಿತ್ಯ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮಾದಕವಸ್ತು ಮಿತಿಮೀರಿ ಸೇವಿಸಿದ್ದರಿಂದ ಆದಿತ್ಯ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಂಗಳವಾರ ಸಂಜೆ (ಮೇ 23) ಆದಿತ್ಯ ಸಿಂಗ್ ರಜಪೂತ್ ಅಂತ್ಯಕ್ರಿಯೆ ನಡೆದಿದೆ.

ಆದಿತ್ಯ ದೆಹಲಿಯವರು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದರು. ‘ಮೇ ಗಾಂಧಿ ಕೋ ನಹಿ ಮಾರಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. MTV Splitsvilla ಸೀಸನ್ 9ರಲ್ಲಿ ಭಾಗಿ ಆದ ಬಳಿಕ ಅವರ ಖ್ಯಾತಿ ಹೆಚ್ಚಿತು. ಇನ್ನೂ ಕೆಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಜನರಿಗೆ ಮೋಸ ಮಾಡುವ ಕೆಲಸಕ್ಕೆ ಯಾರೂ ಮುಂದಾಗಬಾರದು: ಕುಲಕರ್ಣಿ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ
ಪಹಲ್ಗಾಮ್​ನಲ್ಲಿ ದಾಳಿಯ ನಡುವೆಯೇ ಉಗ್ರನ ಫೋಟೊ ಕ್ಲಿಕ್ಕಿಸಿದ ಮಹಿಳೆ