ನಟ ಆದಿತ್ಯ ಸಿಂಗ್ ರಜಪೂತ್​ದು ಆಕಸ್ಮಿಕ ಸಾವಲ್ಲ ಕೊಲೆ? ತಲೆಗೆ ಬಿದ್ದಿತ್ತು ಬಲವಾದ ಏಟು

ಪಂಚನಾಮದ ಸಮಯದಲ್ಲಿ ಆದಿತ್ಯ ಸಿಂಗ್ ತಲೆಯ ಎಡಭಾಗದಲ್ಲಿ ಸಣ್ಣ ಗಾಯ ಕಂಡುಬಂದಿದೆ. ಯಾವುದೇ ರಕ್ತಸ್ರಾವವಾಗಲಿಲ್ಲ. ಆ ಭಾಗದಲ್ಲಿ ಊತ ಇದೆ. ಅವರ ತಲೆಗೆ ಗಂಭೀರವಾದ ಗಾಯವಾಗಿತ್ತು ಎಂಬುದು ನಮ್ಮ ಶಂಕೆ ಎಂದಿದ್ದಾರೆ ಪೊಲೀಸರು.

ನಟ ಆದಿತ್ಯ ಸಿಂಗ್ ರಜಪೂತ್​ದು ಆಕಸ್ಮಿಕ ಸಾವಲ್ಲ ಕೊಲೆ? ತಲೆಗೆ ಬಿದ್ದಿತ್ತು ಬಲವಾದ ಏಟು
ಆದಿತ್ಯ ಸಿಂಗ್
Follow us
|

Updated on: May 24, 2023 | 7:06 AM

ಕಿರುತೆರೆ ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ (Aditya Singh Rajput) ಅವರು ಇತ್ತೀಚೆಗೆ ನಿಧನ ಹೊಂದಿದರು. ಅವರ ನಿವಾಸದಲ್ಲಿ ಶವ ಪತ್ತೆ ಆಗಿತ್ತು. ಈ ಸಾವು ತುಂಬಾನೇ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇದು ಆಕಸ್ಮಿಕ ಸಾವೋ ಅಥವಾ ಕೊಲೆಯೋ ಎನ್ನುವ ಬಗ್ಗೆ ಸದ್ಯ ತನಿಖೆ ನಡೆಯುತ್ತಿದೆ. ಸಾಯುವುದಕ್ಕೂ ಮುನ್ನ ಆದಿತ್ಯ ತಲೆಯಲ್ಲಿ ಗಾಯಗಳು ಇದ್ದವು ಎನ್ನುವ ವಿಚಾರ ಈಗ ರಿವೀಲ್ ಆಗಿದೆ. ಇದು ಅನೇಕರಿಗೆ ಶಾಕ್ ತಂದಿದೆ. ಈ ಸಾವಿನ ಹಿಂದಿರುವ ರಹಸ್ಯ ಏನು ಎನ್ನುವ ಬಗ್ಗೆ ಅಭಿಮಾನಿಗಳಲ್ಲಿ ಪ್ರಶ್ನೆ ಮೂಡಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

‘ಪಂಚನಾಮದ ಸಮಯದಲ್ಲಿ ಆದಿತ್ಯ ಸಿಂಗ್ ತಲೆಯ ಎಡಭಾಗದಲ್ಲಿ ಸಣ್ಣ ಗಾಯ ಕಂಡುಬಂದಿದೆ. ಯಾವುದೇ ರಕ್ತಸ್ರಾವವಾಗಲಿಲ್ಲ. ಆ ಭಾಗದಲ್ಲಿ ಊತ ಇದೆ. ಅವರ ತಲೆಗೆ ಗಂಭೀರವಾದ ಗಾಯವಾಗಿತ್ತು ಎಂಬುದು ನಮ್ಮ ಶಂಕೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದಿಲ್ಲ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ’ ಎಂದು ಪೊಲೀಸ್ ಅಧಿಕಾರಿಗಳು ದಿ ಇಂಡಿಯನ್ ಎಕ್ಸ್‌ಪ್ರೆಸ್​ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

‘ಅವರು ಜಾರಿ ಬಿದ್ದಿರಬಹುದು ಎಂಬುದು ನಮ್ಮ ಅನುಮಾನ. ಬಾತ್​ರೂಂನ ಟೈಲ್ಸ್ ಒಡೆದಿದೆ. ಬಹುಶಃ ಅವರು ಬಿದ್ದಿದ್ದರಿಂದ ತಲೆಗೆ ಪೆಟ್ಟು ಬಿದ್ದಿರಬಹುದು. ಇದು ಸಾವಿಗೆ ಕಾರಣ ಇದ್ದರೂ ಇರಬಹುದು’ ಎಂದು ಶಂಕಿಸುತ್ತಾರೆ ಪೊಲೀಸರು.

ಇದನ್ನೂ ಓದಿ: ನಟ, ಮಾಡೆಲ್ ಆದಿತ್ಯ ಸಿಂಗ್ ಅನುಮಾನಾಸ್ಪದ ಸಾವು

ಆದಿತ್ಯ ಸಿಂಗ್ ರಜಪೂತ್ ಸೋಮವಾರ (ಮೇ 22) ತಮ್ಮ ಸ್ನಾನಗೃಹದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಆದಿತ್ಯ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಮಾದಕವಸ್ತು ಮಿತಿಮೀರಿ ಸೇವಿಸಿದ್ದರಿಂದ ಆದಿತ್ಯ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಮಂಗಳವಾರ ಸಂಜೆ (ಮೇ 23) ಆದಿತ್ಯ ಸಿಂಗ್ ರಜಪೂತ್ ಅಂತ್ಯಕ್ರಿಯೆ ನಡೆದಿದೆ.

ಆದಿತ್ಯ ದೆಹಲಿಯವರು. ಮಾಡೆಲ್ ಆಗಿ ವೃತ್ತಿ ಜೀವನ ಆರಂಭಿಸಿದರು. ‘ಮೇ ಗಾಂಧಿ ಕೋ ನಹಿ ಮಾರಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. MTV Splitsvilla ಸೀಸನ್ 9ರಲ್ಲಿ ಭಾಗಿ ಆದ ಬಳಿಕ ಅವರ ಖ್ಯಾತಿ ಹೆಚ್ಚಿತು. ಇನ್ನೂ ಕೆಲವು ಧಾರಾವಾಹಿಗಳಲ್ಲಿ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ