AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಮನೆಯಲ್ಲಿ ಚಾಕು ಹಿಡಿದು ಹತ್ಯೆ ಮಾಡಿಕೊಳ್ಳಲು ಮುಂದಾದ ಸ್ಪರ್ಧಿ; ವಾಹಿನಿಯಿಂದ ಮಹತ್ವದ ನಿರ್ಧಾರ

ಪಂಜಾಬಿ ಸಿಂಗರ್​ ಅಫ್ಸಾನಾ ಅವರಿಗೆ ವಿಐಪಿ ಟಿಕೆಟ್​ ಸಿಕ್ಕಿರಲಿಲ್ಲ. ಇದರಿಂದ ಅವರು ತುಂಬಾನೇ ಕೋಪಗೊಂಡಿದ್ದರು. ಇದಲ್ಲದೆ, ಅವರು ಖಿನ್ನತೆಗೆ ಒಳಗಾಗಿದ್ದು ಕಂಡು ಬಂತು.

ಬಿಗ್​ ಬಾಸ್​ ಮನೆಯಲ್ಲಿ ಚಾಕು ಹಿಡಿದು ಹತ್ಯೆ ಮಾಡಿಕೊಳ್ಳಲು ಮುಂದಾದ ಸ್ಪರ್ಧಿ; ವಾಹಿನಿಯಿಂದ ಮಹತ್ವದ ನಿರ್ಧಾರ
ಅಫ್ಸಾನಾ
TV9 Web
| Edited By: |

Updated on: Nov 18, 2021 | 8:05 PM

Share

ಬಿಗ್​ ಬಾಸ್​ ಶೋ ಆರಂಭವಾದ ನಂತರ ಯಾವಾಗಲೂ ಸುದ್ದಿಯಲ್ಲಿರುತ್ತದೆ. ಒಳಗೆ ಆಗುವ ಜಗಳಗಳು, ಹುಟ್ಟುವ ಪ್ರೇಮ ಕಥೆಗಳು ಸ್ಕ್ರಿಪ್ಟೆಡ್​ ಅಲ್ಲ ಎಂಬುದನ್ನು ವಾಹಿನಿ ಅನೇಕ ಬಾರಿ ಹೇಳಿಕೊಂಡಿದೆ. ಆದರೆ, ಇದನ್ನು ಕೆಲವರು ನಂಬೋಕೆ ರೆಡಿ ಇಲ್ಲ. ಮನೆಯಲ್ಲಿ ನಡೆಯುವ ಡ್ರಾಮಾಗಳು ಕೂಡ ಕೆಲವೊಮ್ಮೆ ಅತಿರೇಕ ಎನಿಸುತ್ತದೆ. ಅದೇ ರೀತಿ ‘ಹಿಂದಿ ಬಿಗ್​ ಬಾಸ್​ 15’ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಮನೆಯಲ್ಲಿ ಸಾಕಷ್ಟು ಜಗಳಗಳು ಕೂಡ ಏರ್ಪಡುತ್ತಿದೆ. ಈಗ ಅದು ಮಿತಿ ಮೀರಿತ್ತು. ಅಫ್ಸಾನಾ ಖಾನ್​ ಅವರು ತಮ್ಮನ್ನು ತಾವೇ ಹತ್ಯೆ ಮಾಡಿಕೊಳ್ಳಲು ಮುಂದಾಗಿರುವ ಘಟನೆ ಶಾಕಿಂಗ್​ ಆಗಿತ್ತು. ಈ ಬೆಳವಣಿಗೆ ಕಳೆದು ಕೆಲ ದಿನ ಆಗಿದ್ದು, ಈಗ ವಾಹಿನಿ ಈ ಬಗ್ಗೆ ನಿರ್ಧಾರ ಒಂದನ್ನು ತೆಗೆದುಕೊಳ್ಳುತ್ತಿದೆ.

ಪಂಜಾಬಿ ಸಿಂಗರ್​ ಅಫ್ಸಾನಾ ಅವರಿಗೆ ವಿಐಪಿ ಟಿಕೆಟ್​ ಸಿಕ್ಕಿರಲಿಲ್ಲ. ಇದರಿಂದ ಅವರು ತುಂಬಾನೇ ಕೋಪಗೊಂಡಿದ್ದರು. ಇದಲ್ಲದೆ, ಅವರು ಖಿನ್ನತೆಗೆ ಒಳಗಾಗಿದ್ದು ಕಂಡು ಬಂತು. ಹೀಗಾಗಿ, ಅವರು ಅಡುಗೆ ಮನೆಯಲ್ಲಿ ಇದ್ದ ಚಾಕುವನ್ನು ತೆಗೆದುಕೊಂಡು ತಮ್ಮನ್ನು ತಾವು ಕೊಂದುಕೊಳ್ಳಲು ಮುಂದಾಗಿದ್ದರು.  ಇದು ಅನೇಕರಿಗೆ ಆತಂಕ ಮೂಡಿಸಿತ್ತು. ಅಲ್ಲದೆ, ಅವರು ಅರಚಾಟ ಕೂಗಾಟದಿಂದ ಮನೆಯವರೆಲ್ಲರಿಗೂ ಕಿರಿಕಿರಿ ಉಂಟಾಗಿತ್ತು.

ಅಫ್ಸಾನಾ ತೆಗೆದುಕೊಂಡು ಈ ಸ್ಟೆಪ್​ನಿಂದ ಅವರು ಮನೆಯಿಂದ ಹೊರ ಬಿದ್ದಿದ್ದರು. ಚಾಕು ಹಿಡಿದುಕೊಂಡ ಅವರು ಏನಾದರೂ ತೊಂದರೆ ಮಾಡಿಕೊಂಡರೆ ಅದಕ್ಕೆ ವಾಹಿನಿ ಜವಾಬ್ದಾರಿ ಆಗಬೇಕಾಗುತ್ತದೆ. ಅಲ್ಲದೆ, ಶೋ ನಿಲ್ಲುವ ಸಾಧ್ಯತೆ ಕೂಡ ಇರುತ್ತದೆ. ಈ ಕಾರಣಕ್ಕೆ ಅವರನ್ನು ಮನೆಯಿಂದ ಹೊರಗೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಈಗ ಹೊಸ ಅಪ್​ಡೇಟ್ ಒಂದು ಬಂದಿದೆ.

View this post on Instagram

A post shared by ColorsTV (@colorstv)

ಮನೆಯಿಂದ ಹೊರ ನಡೆದ ಅಫ್ಸಾನ ಪಂಜಾಬ್​ಗೆ ತೆರಳಿದ್ದರು. ಈಗ ಅವರು ಮರಳಿ ಮುಂಬೈಗೆ ಬಂದಿದ್ದಾರೆ. ಮೂಲಗಳ ಪ್ರಕಾರ ಅವರು ಶೋನ ಮುಖ್ಯಸ್ಥರ ಜತೆ ಮಾತನಾಡಿದ್ದು ಮತ್ತೆ ಮನೆ ಒಳಗೆ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಫ್ಸಾನಾ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಈ ಕಾರಣಕ್ಕೆ ಅವರನ್ನು ಮತ್ತೆ ಶೋಗೆ ತಂದೆ ಅಭಿಮಾನಿಗಳು ಖುಷಿಯಾಗಬಹುದು ಎಂಬುದು ವಾಹನಿ ಲೆಕ್ಕಾಚಾರ. ಈ ಕಾರಣಕ್ಕೆ ಮತ್ತೆ ಶೋ ಒಳಗೆ ಅವರನ್ನು ಕರೆತರುವ ನಿರ್ಧಾರ ವಾಹಿನಿ ತೆಗೆದುಕೊಂಡಿದೆ ಎನ್ನಲಾಗುತ್ತಿದೆ. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಶುರುವಾಯ್ತು ರಾಕೇಶ್​-ಶಮಿತಾ ರೊಮ್ಯಾನ್ಸ್​; ಮೊದಲ ದಿನವೇ ಕಿಸ್ಸಿಂಗ್​

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್