AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ.

‘ಬಿಗ್ ಬಾಸ್’ ಮನೆಯಲ್ಲಿ ಫೈಟ್​; ಕೆನ್ನೆಗೆ ಬಾರಿಸಿ ಎಲಿಮಿನೇಟ್ ಆದ ಸ್ಪರ್ಧಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jan 05, 2024 | 12:36 PM

Share

‘ಬಿಗ್ ಬಾಸ್’ ಮನೆಯಲ್ಲಿ ಮ್ಯಾನ್ ಹ್ಯಾಂಡ್ಲಿಂಗ್ ಮಾಡುವಂತೆ ಇಲ್ಲ. ಹಾಗೆ ಮಾಡಿದರೆ ತಕ್ಷಣಕ್ಕೆ ಅವರನ್ನು ಎಲಿಮಿನೇಟ್ ಮಾಡಲಾಗುತ್ತದೆ. ‘ಬಿಗ್ ಬಾಸ್ ಹಿಂದಿ ಸೀಸನ್ 17’ನಲ್ಲಿ ಈ ರೀತಿಯ ಘಟನೆ ನಡೆದಿದೆ ಎಂದು ವರದಿ ಆಗಿದೆ. ಅಭಿಷೇಕ್ ಕುಮಾರ್ (Abhishek Kumar) ಹಾಗೂ ಸಮರ್ಥ್ ಜ್ಯುರೆಲ್ ಮಧ್ಯೆ ಫೈಟ್ ನಡೆದಿದೆ. ಅಭಿಷೇಕ್ ಅವರು ಸಮರ್ಥ್​​ಗೆ ಹೊಡೆದಿದ್ದಾರೆ. ಇದರಿಂದ ಅಭಿಷೇಕ್​ನ ಮನೆಯಿಂದ ಹೊರಕ್ಕೆ ಹಾಕಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಬಿಗ್ ಬಾಸ್ ಮನೆಯಲ್ಲಿ ಕೆಲವು ಸ್ಪರ್ಧಿಗಳು ಫ್ರಸ್ಟ್ರೇಷನ್ ಅನುಭವಿಸುತ್ತಾ ಇರುತ್ತಾರೆ. ಸಣ್ಣ ಮಾತಿನಿಂದ ದೊಡ್ಡ ಫೈಟ್ ಆದ ಉದಾಹರಣೆ ಇದೆ. ಬಿಗ್ ಬಾಸ್ ಮನೆಯಲ್ಲಿ  ಅಭಿಷೇಕ್ ಅವರು ಸಿಟ್ಟಿನಿಂದ ಸಮರ್ಥ್​ಗೆ ಹೊಡೆದಿದ್ದಾರೆ. ಅಭಿಷೇಕ್ ಅವರನ್ನು ಮನೆಯಲ್ಲಿ ಉಳಿಸಿಕೊಳ್ಳಬೇಕೆ ಅಥವಾ ಬೇಡವೇ ಎನ್ನುವ ನಿರ್ಧಾರವನ್ನು ಮನೆಯ ಕ್ಯಾಪ್ಟನ್ ಅಂಕಿತಾ ತೆಗೆದುಕೊಳ್ಳುವಂತೆ ಬಿಗ್ ಬಾಸ್ ಆದೇಶ ನೀಡಿದರು ಎನ್ನಲಾಗಿದೆ.

ಅಂಕಿತಾ ಅವರು ಅಭಿಷೇಕ್​ನ ಎಲಿಮಿನೇಟ್ ಮಾಡುವ ನಿರ್ಧಾರ ತೆಗೆದುಕೊಂಡರು. ಈ ಮೂಲಕ ಅವರನ್ನು ಬಿಗ್ ಬಾಸ್​ನಿಂದ ಹೊರಕ್ಕೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಚರ್ಚೆ ಜೋರಾಗಿದೆ. ಅವರನ್ನು ಮನೆಯಿಂದ ಎಲಿಮಿನೇಟ್ ಮಾಡಬಾರದಿತ್ತು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಹೋಯ್ತು ಲಕ್ಷ ಲಕ್ಷ ಹಣ; ಬಿಗ್ ಬಾಸ್ ವಿನ್ನರ್​ಗೆ ಸಿಗೋ ಫೈನಲ್ ಅಮೌಂಟ್ ಎಷ್ಟು?

‘ಅಭಿಷೇಕ್ ಇರಬೇಕೋ ಅಥವಾ ಬೇಡವೋ ಎಂಬುದನ್ನು ಜನರು ನಿರ್ಧಾರ ಮಾಡಬೇಕು. ಅಂಕಿತಾಗೆ ಈ ಅಧಿಕಾರವನ್ನು ಏಕೆ ನೀಡಿದಿರಿ’ ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ‘ಅಭಿಷೇಕ್ ಎಲಿಮಿನೇಟ್ ಆಗುತ್ತಾರೆ ಅನ್ನೋದು ಗೊತ್ತಿತ್ತು. ಆದರೆ, ಅಂಕಿತಾಗೆ ಈ ಅಧಿಕಾರ ನೀಡಿದ್ದೇಕೆ’ ಎಂದು ಕೆಲವರು ಕೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:26 pm, Fri, 5 January 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ