AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾದ ಸಮಯದಲ್ಲಿ ಬರ್ತಿದೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ

Bhoomige Bandha Bhagavantha Serial: ಜೀ ಕನ್ನಡ ವಾಹಿನಿಯಲ್ಲಿ ಹೊಸಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಅದೇ ರೀತಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ಈ ಕಾರಣದಿಂದ ‘ಭೂಮಿಗೆ ಬಂದ ಭಗವಂತ’ ಪ್ರಸಾರ ಸಮಯದಲ್ಲಿ ಬದಲಾವಣೆ ಆಗಿದೆ.

ಬದಲಾದ ಸಮಯದಲ್ಲಿ ಬರ್ತಿದೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ
ಭೂಮಿಗೆ ಬಂದ ಭಗವಂತ
Follow us
ರಾಜೇಶ್ ದುಗ್ಗುಮನೆ
|

Updated on: Jul 13, 2023 | 8:44 AM

ಜೀ ಕನ್ನಡ (Zee Kannada) ವಾಹಿನಿಯಲ್ಲಿ ವಿವಿಧ ರೀತಿಯ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಈ ಪೈಕಿ ‘ಭೂಮಿಗೆ ಬಂದ ಭಗವಂತ’ (Bhoomige Bandha Bhagavantha Serial) ಧಾರಾವಾಹಿ ಕೂಡ ಭಿನ್ನ ಶೈಲಿಯಲ್ಲಿ ಮೂಡಿ ಬರುತ್ತಿದೆ. ಎಷ್ಟೇ ಕಷ್ಟ ಬಂದರೂ ಕೇವಲ ಒಳ್ಳೆಯದನ್ನೇ ಮಾಡ ಬಯಸುವ ವ್ಯಕ್ತಿಯ ಜೊತೆ ದೇವರು ಸದಾ ಇರುತ್ತಾನೆ ಎಂಬ ಥೀಮ್​ನಲ್ಲಿ ಈ ಧಾರಾವಾಹಿ ಮೂಡಿಬಂದಿದೆ. ಇಷ್ಟು ದಿನ ಸೋಮವಾರದಿಂದ-ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಆದರೆ, ಈಗ ಪ್ರಸಾರ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ವಾಹಿನಿ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

ನವೀನ್ ಕೃಷ್ಣ, ಕೃತಿಕಾ ರವೀಂದ್ರ, ಉಮೇಶ್ ಮೊದಲಾದವರು ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಶಿವ ಪ್ರಸಾದ್ (ನವೀನ್ ಕೃಷ್ಣ) ಅಂಡರ್​ವೇರ್ ಕಂಪನಿ ಒಂದರಲ್ಲಿ ಕೆಲಸ ಮಾಡುವ ನೌಕರ. ಆತನ ಪತ್ನಿ ಗಿರಿಜಾ (ಕೃತಿಕಾ ರವೀಂದ್ರ) ಪತಿಗೆ ಬೆಂಬಲ ನೀಡುತ್ತಾ ಇರುತ್ತಾಳೆ. ಎಷ್ಟೇ ಕಷ್ಟ, ಆರ್ಥಿಕ ತೊಂದರೆ ಬಂದರೂ ಶಿವ ಪ್ರಸಾದ್ ಕೆಟ್ಟದ್ದನ್ನು ಮಾಡುವುದಿಲ್ಲ. ಈ ಕಾರಣದಿಂದಲೇ ಶಿವ ಪ್ರತ್ಯಕ್ಷ ಆಗಿ ಸದಾ ಶಿವ ಪ್ರಸಾದ್ ಜೊತೆಯೇ ಇರುತ್ತಾನೆ. ಆತನಿಗೆ ಒಳ್ಳೆಯ ಮಾರ್ಗ ತೋರಿಸುತ್ತಾನೆ. ಕಷ್ಟ ಬಂದಾಗ ಏನು ಮಾಡಬೇಕು ಎಂಬುದನ್ನು ಹೇಳುತ್ತಾನೆ. ಈಗ ಧಾರಾವಾಹಿ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ.

ಜೀ ಕನ್ನಡ ವಾಹಿನಿಯಲ್ಲಿ ಹೊಸಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಅದೇ ರೀತಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಜುಲೈ 17ರಿಂದ ರಾತ್ರಿ 9:30ಕ್ಕೆ ಪ್ರಸಾರ ಕಾಣಲಿದೆ. ಈ ಕಾರಣದಿಂದ ಜುಲೈ 17ರಿಂದ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ರಾತ್ರಿ 10 ಗಂಟೆಗೆ ಪ್ರಸಾರ ಆಗಲಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ

‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಅನೇಕರಿಂದ ಮೆಚ್ಚುಗೆ ಪಡೆದಿದೆ. ಮಧ್ಯಮ ವರ್ಗದವರು ಪಡುವ ಪಾಡನ್ನು ಈ ಧಾರಾವಾಹಿಯಲ್ಲಿ ಕಣ್ಣಿಗೆ ಕಟ್ಟುವಂತೆ ತೋರಿಸಲಾಗುತ್ತಿದೆ. ಇದರ ಜೊತೆಗೆ ಕಷ್ಟ ಬಂದಾಗಲೂ ಕೆಟ್ಟ ಮಾರ್ಗ ತುಳಿಯಬಾರದು ಎನ್ನುವ ಸಂದೇಶವೂ ಧಾರಾವಾಹಿಯಿಂದ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Video: ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!