AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬದಲಾದ ಸಮಯದಲ್ಲಿ ಬರ್ತಿದೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ

Bhoomige Bandha Bhagavantha Serial: ಜೀ ಕನ್ನಡ ವಾಹಿನಿಯಲ್ಲಿ ಹೊಸಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಅದೇ ರೀತಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ಈ ಕಾರಣದಿಂದ ‘ಭೂಮಿಗೆ ಬಂದ ಭಗವಂತ’ ಪ್ರಸಾರ ಸಮಯದಲ್ಲಿ ಬದಲಾವಣೆ ಆಗಿದೆ.

ಬದಲಾದ ಸಮಯದಲ್ಲಿ ಬರ್ತಿದೆ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ
ಭೂಮಿಗೆ ಬಂದ ಭಗವಂತ
ರಾಜೇಶ್ ದುಗ್ಗುಮನೆ
|

Updated on: Jul 13, 2023 | 8:44 AM

Share

ಜೀ ಕನ್ನಡ (Zee Kannada) ವಾಹಿನಿಯಲ್ಲಿ ವಿವಿಧ ರೀತಿಯ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಈ ಪೈಕಿ ‘ಭೂಮಿಗೆ ಬಂದ ಭಗವಂತ’ (Bhoomige Bandha Bhagavantha Serial) ಧಾರಾವಾಹಿ ಕೂಡ ಭಿನ್ನ ಶೈಲಿಯಲ್ಲಿ ಮೂಡಿ ಬರುತ್ತಿದೆ. ಎಷ್ಟೇ ಕಷ್ಟ ಬಂದರೂ ಕೇವಲ ಒಳ್ಳೆಯದನ್ನೇ ಮಾಡ ಬಯಸುವ ವ್ಯಕ್ತಿಯ ಜೊತೆ ದೇವರು ಸದಾ ಇರುತ್ತಾನೆ ಎಂಬ ಥೀಮ್​ನಲ್ಲಿ ಈ ಧಾರಾವಾಹಿ ಮೂಡಿಬಂದಿದೆ. ಇಷ್ಟು ದಿನ ಸೋಮವಾರದಿಂದ-ಶುಕ್ರವಾರದವರೆಗೆ ರಾತ್ರಿ 9:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಆದರೆ, ಈಗ ಪ್ರಸಾರ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ವಾಹಿನಿ ಕಡೆಯಿಂದ ಅಧಿಕೃತ ಘೋಷಣೆ ಆಗಿದೆ.

ನವೀನ್ ಕೃಷ್ಣ, ಕೃತಿಕಾ ರವೀಂದ್ರ, ಉಮೇಶ್ ಮೊದಲಾದವರು ‘ಭೂಮಿಗೆ ಬಂದ ಭಗವಂತ’ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಶಿವ ಪ್ರಸಾದ್ (ನವೀನ್ ಕೃಷ್ಣ) ಅಂಡರ್​ವೇರ್ ಕಂಪನಿ ಒಂದರಲ್ಲಿ ಕೆಲಸ ಮಾಡುವ ನೌಕರ. ಆತನ ಪತ್ನಿ ಗಿರಿಜಾ (ಕೃತಿಕಾ ರವೀಂದ್ರ) ಪತಿಗೆ ಬೆಂಬಲ ನೀಡುತ್ತಾ ಇರುತ್ತಾಳೆ. ಎಷ್ಟೇ ಕಷ್ಟ, ಆರ್ಥಿಕ ತೊಂದರೆ ಬಂದರೂ ಶಿವ ಪ್ರಸಾದ್ ಕೆಟ್ಟದ್ದನ್ನು ಮಾಡುವುದಿಲ್ಲ. ಈ ಕಾರಣದಿಂದಲೇ ಶಿವ ಪ್ರತ್ಯಕ್ಷ ಆಗಿ ಸದಾ ಶಿವ ಪ್ರಸಾದ್ ಜೊತೆಯೇ ಇರುತ್ತಾನೆ. ಆತನಿಗೆ ಒಳ್ಳೆಯ ಮಾರ್ಗ ತೋರಿಸುತ್ತಾನೆ. ಕಷ್ಟ ಬಂದಾಗ ಏನು ಮಾಡಬೇಕು ಎಂಬುದನ್ನು ಹೇಳುತ್ತಾನೆ. ಈಗ ಧಾರಾವಾಹಿ ಸಮಯದಲ್ಲಿ ಬದಲಾವಣೆ ಮಾಡಿಕೊಳ್ಳಲಾಗಿದೆ.

ಜೀ ಕನ್ನಡ ವಾಹಿನಿಯಲ್ಲಿ ಹೊಸಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಅದೇ ರೀತಿ ‘ಸೀತಾ ರಾಮ’ ಧಾರಾವಾಹಿ ಪ್ರಸಾರ ಕಾಣೋಕೆ ರೆಡಿ ಆಗಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ಅವರು ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಧಾರಾವಾಹಿ ಜುಲೈ 17ರಿಂದ ರಾತ್ರಿ 9:30ಕ್ಕೆ ಪ್ರಸಾರ ಕಾಣಲಿದೆ. ಈ ಕಾರಣದಿಂದ ಜುಲೈ 17ರಿಂದ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ರಾತ್ರಿ 10 ಗಂಟೆಗೆ ಪ್ರಸಾರ ಆಗಲಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ

‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಅನೇಕರಿಂದ ಮೆಚ್ಚುಗೆ ಪಡೆದಿದೆ. ಮಧ್ಯಮ ವರ್ಗದವರು ಪಡುವ ಪಾಡನ್ನು ಈ ಧಾರಾವಾಹಿಯಲ್ಲಿ ಕಣ್ಣಿಗೆ ಕಟ್ಟುವಂತೆ ತೋರಿಸಲಾಗುತ್ತಿದೆ. ಇದರ ಜೊತೆಗೆ ಕಷ್ಟ ಬಂದಾಗಲೂ ಕೆಟ್ಟ ಮಾರ್ಗ ತುಳಿಯಬಾರದು ಎನ್ನುವ ಸಂದೇಶವೂ ಧಾರಾವಾಹಿಯಿಂದ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?