AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಶತಕದ ಬಳಿಕ ರಿಷಬ್ ಶೆಟ್ಟಿ ಸಂಭ್ರಮ ಹೇಗಿತ್ತು ನೋಡಿ..

ವಿರಾಟ್ ಅವರ ಹಿಂಬಾಲಕರ ಸಂಖ್ಯೆ ದೊಡ್ಡದಿದೆ. ಅವರ ಆಟವನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ರಿಷಬ್ ಕೂಡ ವಿರಾಟ್ ಅವರ ಅಭಿಮಾನಿ. ವಿರಾಟ್ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಫೋಟೋ ಅನ್ನು ಅವರು ಪೋಸ್ಟ್ ಮಾಡಿದ್ದಾರೆ.

ವಿರಾಟ್ ಶತಕದ ಬಳಿಕ ರಿಷಬ್ ಶೆಟ್ಟಿ ಸಂಭ್ರಮ ಹೇಗಿತ್ತು ನೋಡಿ..
ರಿಷಬ್-ವಿರಾಟ್
ರಾಜೇಶ್ ದುಗ್ಗುಮನೆ
|

Updated on: Oct 20, 2023 | 7:12 AM

Share

ಭಾರತ ಹಾಗೂ ಬಾಂಗ್ಲಾದೇಶ್ ನಡುವಿನ ವಿಶ್ವಕಪ್ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಅವರು ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 100 ರನ್ ಗಳಿಸಲು ಅವರು ಮಾಡಿದ ಸರ್ಕಸ್ ಒಂದೆರಡಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಹಲವರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅನೇಕರು ಕೊಹ್ಲಿಯನ್ನು ಹಾಡಿ ಹೊಗಳುತ್ತಿದ್ದಾರೆ. ಅವರ ಅಭಿಮಾನಿಗಳಿಗಂತೂ ಈ ಶತಕ ಸಾಕಷ್ಟು ಖುಷಿ ನೀಡಿದೆ. ನಿರ್ದೇಶಕ ರಿಷಬ್ ಶೆಟ್ಟಿಗೂ ಕೊಹ್ಲಿ ಶತಕ ಖುಷಿ ನೀಡಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

ವಿರಾಟ್ ಅವರ ಹಿಂಬಾಲಕರ ಸಂಖ್ಯೆ ದೊಡ್ಡದಿದೆ. ಅವರ ಆಟವನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ರಿಷಬ್ ಕೂಡ ವಿರಾಟ್ ಅವರ ಅಭಿಮಾನಿ. ವಿರಾಟ್ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಫೋಟೋ ಅನ್ನು ಅವರು ಪೋಸ್ಟ್ ಮಾಡಿದ್ದಾರೆ. ‘ಐ ಲವ್ ದಿಸ್ ಮ್ಯಾನ್. ಅಭಿನಂದನೆಗಳು ವಿರಾಟ್ ಕೊಹ್ಲಿ’ ಎಂದು ಟ್ವೀಟ್ ಮಾಡಿದ್ದಾರೆ ರಿಷಬ್. ರಿಷಬ್ ಟ್ವೀಟ್​ನ ಅನೇಕರು ರೀಟ್ವೀಟ್ ಮಾಡಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಕೂಡ ಪತಿಯ ಫೋಟೋನ ಪೋಸ್ಟ್ ಮಾಡಿ ಹಾರ್ಟ್ ಎಮೋಜಿ ಹಾಕಿದ್ದಾರೆ. ಇನ್ನೂ ಅನೇಕ ಸೆಲೆಬ್ರಿಟಿಗಳು ಕೊಹ್ಲಿಗೆ ವಿಶ್ ಮಾಡುತ್ತಿದ್ದಾರೆ. ಕೊಹ್ಲಿ ಶತಕಕ್ಕೆ ಕಾರಣರಾದ ಕೆಎಲ್​ ರಾಹುಲ್ ಅವರನ್ನು ಎಲ್ಲರೂ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿಯ ಸಿನಿಮಾ, ಕಾಂತಾರ ಅಲ್ಲ

ಸಿನಿಮಾ ವಿಚಾರಕ್ಕೆ ಬರೋದಾದರೆ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭ ಆಗಬೇಕಿದೆ. ‘ಕಾಂತಾರ’ ರಿಲೀಸ್ ಆಗಿ ವರ್ಷ ಕಳೆದಿದೆ. ಈ ಚಿತ್ರ ಸೃಷ್ಟಿ ಮಾಡಿರುವ ಹೈಪ್ ತುಂಬಾನೇ ದೊಡ್ಡದು. ಈ ಕಾರಣದಿಂದ ಎಲ್ಲರೂ ಪಾರ್ಟ್​ 2ಗಾಗಿ ಕಾದಿದ್ದಾರೆ. ಇದು ಪ್ರೀಕ್ವೆಲ್ ಎಂದು ರಿಷಬ್ ಶೆಟ್ಟಿ ಮೊದಲೇ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ