AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ದಾರಿ ಬಿಟ್ಟಕೊಟ್ಟ ಸೀರಿಯಲ್ಸ್​; ಕಲರ್ಸ್​​ನ ಈ ಧಾರಾವಾಹಿಗಳು ಕೊನೆ

ಬಿಗ್ ಬಾಸ್ ಕನ್ನಡ ಸೀಸನ್ 12 ರ ಆರಂಭಕ್ಕಾಗಿ ಕಲರ್ಸ್ ಕನ್ನಡದ ಕೆಲವು ಕನ್ನಡ ಧಾರಾವಾಹಿಗಳು ತಮ್ಮ ಪ್ರಸಾರವನ್ನು ಅಂತ್ಯಗೊಳಿಸಿವೆ. ಈಗಾಗಲೇ ‘ದೃಷ್ಟಿ ಬೊಟ್ಟು’ ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇವುಗಳ ಜೊತೆ ಇನ್ನೂ ಒಂದು ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಲಿದೆ.

ಬಿಗ್ ಬಾಸ್​ಗೆ  ದಾರಿ ಬಿಟ್ಟಕೊಟ್ಟ ಸೀರಿಯಲ್ಸ್​; ಕಲರ್ಸ್​​ನ ಈ ಧಾರಾವಾಹಿಗಳು ಕೊನೆ
ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: Sep 25, 2025 | 3:09 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ಹಲವು ಸೆಲೆಬ್ರಿಟಿಗಳು, ಸೋಶಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್ ಶೋಗೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ಕಳೆದ ಬಾರಿಯಂತೆ ಈ ಬಾರಿಯೂ ‘ಬಿಗ್ ಬಾಸ್ ಕನ್ನಡ’ ರಾತ್ರಿ 9.30ಕ್ಕೆ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಹೀಗಿರುವಾಗಲೇ ಯಾವೆಲ್ಲ ಧಾರಾವಾಹಿಗಳು ಕೊನೆ ಆಗುತ್ತವೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಈಗಾಗಲೇ ‘ದೃಷ್ಟಿ ಬೊಟ್ಟು’ ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇವುಗಳ ಜೊತೆ ಇನ್ನೂ ಒಂದು ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಲಿದೆ. ಇದು ಎಲ್ಲರ ಜನ ಮೆಚ್ಚಿನ ಧಾರಾವಾಹಿ ಎನಿಸಿಕೊಂಡಿತ್ತು. ಅದುವೇ ‘ನಿನಗಾಗಿ’.

ದಿವ್ಯಾ ಉರುಡುಗ ಹಾಗೂ ರಿತ್ವಿಕ್ ನಟಿಸುತ್ತಿರುವ ‘ನಿನಗಾಗಿ’ ಧಾರಾವಾಹಿ ಈಗಾಗಲೇ ಹಲವು ಎಪಿಸೋಡ್ ಪ್ರಸಾರ ಕಂಡಿದೆ. ಈ ಧಾರಾವಾಹಿ ಪ್ರತಿ ನಿತ್ಯ ರಾತ್ರಿ 8 ಗಂಟೆಗೆ ಪ್ರಸಾರ ಕಾಣುತ್ತಿತ್ತು. ಈಗ ಈ ಧಾರಾವಾಹಿಯ ಕೊನೆಯ ಹಂತದ ಶೂಟ್ ಪೂರ್ಣಗೊಂಡಿದೆಯಂತೆ. ಈ ಜಾಗದಲ್ಲಿ ‘ಗಂಧದಗುಡಿ’ ಧಾರಾವಾಹಿ ಪ್ರಸಾರ ಕಾಣಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ
Image
ಮುತ್ತುರಾಜ್ ಹೆಸರು ಬದಲಾಗಿದ್ದು ಅಣ್ಣಾವ್ರಿಗೇ ಗೊತ್ತಿರಲಿಲ್ಲ
Image
ರಿಂಗ್ ಕೊಡಿಸಲು ರಮ್ಯಾ ಜೊತೆ ಜ್ಯುವೆಲರಿ ಶಾಪ್​ಗೆ ಹೋದ ವಿನಯ್;ಇದೆ ಟ್ವಿಸ್ಟ್
Image
‘ಬಿಗ್ ಬಾಸ್ 12’ರ ನಾಲ್ಕು ಸ್ಪರ್ಧಿಗಳ ಹೆಸರು ಶನಿವಾರವೇ ರಿವೀಲ್?

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ

ಪ್ರತಿ ದಿನ ಸಂಜೆ 6 ಗಂಟೆಗೆ ‘ದೃಷ್ಟಿ ಬೊಟ್ಟು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಧಾರಾವಾಹಿ ಮುಕ್ತಾಯಗೊಂಡಿದೆ. ಈ ಕಾರಣಕ್ಕೆ ಆ ಸಮಯದಲ್ಲಿ ‘ಯಜಮಾನ’ ಹಾಗೂ ‘ರಾಮಾಚಾರಿ’ ಧಾರಾವಾಹಿಗಳ ಮಹಾ ಸಂಗಮ ಪ್ರಸಾರ ಕಾಣುತ್ತಿದೆ. ಈ ಮಹಾಸಂಗಮ ಈ ಮೊದಲು ರಾತ್ರಿ 9.30ರಿಂದ 10.30ರವರೆಗೆ ಪ್ರಸಾರ ಕಾಣುತ್ತಿತ್ತು. ಈಗ ಈ ಮಹಾಸಂಗಮದ ಟೈಮಿಂಗ್ 6 ಗಂಟೆಗೆ ಶಿಫ್ಟ್ ಆಗಿರುವುದರಿಂದ ಬಿಗ್ ಬಾಸ್ ಹಾದಿ ಸುಗಮವಾಗಿದೆ. ಈ ಎರಡು ಧಾರಾವಾಹಿಗಳ ಪೈಕಿ ಒಂದು ಕೊನೆ ಆಗಬಹುದು ಅಥವಾ ಇದೇ ಮಹಾ ಸಂಗಮ ಹೀಗೆಯೇ ಮುಂದುವರಿಯಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ