AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ಗೆ ದಾರಿ ಬಿಟ್ಟಕೊಟ್ಟ ಸೀರಿಯಲ್ಸ್​; ಕಲರ್ಸ್​​ನ ಈ ಧಾರಾವಾಹಿಗಳು ಕೊನೆ

ಬಿಗ್ ಬಾಸ್ ಕನ್ನಡ ಸೀಸನ್ 12 ರ ಆರಂಭಕ್ಕಾಗಿ ಕಲರ್ಸ್ ಕನ್ನಡದ ಕೆಲವು ಕನ್ನಡ ಧಾರಾವಾಹಿಗಳು ತಮ್ಮ ಪ್ರಸಾರವನ್ನು ಅಂತ್ಯಗೊಳಿಸಿವೆ. ಈಗಾಗಲೇ ‘ದೃಷ್ಟಿ ಬೊಟ್ಟು’ ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇವುಗಳ ಜೊತೆ ಇನ್ನೂ ಒಂದು ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಲಿದೆ.

ಬಿಗ್ ಬಾಸ್​ಗೆ  ದಾರಿ ಬಿಟ್ಟಕೊಟ್ಟ ಸೀರಿಯಲ್ಸ್​; ಕಲರ್ಸ್​​ನ ಈ ಧಾರಾವಾಹಿಗಳು ಕೊನೆ
ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: Sep 25, 2025 | 3:09 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ಇನ್ನು ಬಾಕಿ ಉಳಿದಿರೋದು ಕೆಲವೇ ದಿನಗಳು ಮಾತ್ರ. ಹಲವು ಸೆಲೆಬ್ರಿಟಿಗಳು, ಸೋಶಿಯಲ್ ಮೀಡಿಯಾ ಇನ್​ಫ್ಲುಯೆನ್ಸರ್ ಶೋಗೆ ಬರುತ್ತಾರೆ ಎಂದು ಹೇಳಲಾಗುತ್ತಿದೆ. ಕಳೆದ ಬಾರಿಯಂತೆ ಈ ಬಾರಿಯೂ ‘ಬಿಗ್ ಬಾಸ್ ಕನ್ನಡ’ ರಾತ್ರಿ 9.30ಕ್ಕೆ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಹೀಗಿರುವಾಗಲೇ ಯಾವೆಲ್ಲ ಧಾರಾವಾಹಿಗಳು ಕೊನೆ ಆಗುತ್ತವೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಈಗಾಗಲೇ ‘ದೃಷ್ಟಿ ಬೊಟ್ಟು’ ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇವುಗಳ ಜೊತೆ ಇನ್ನೂ ಒಂದು ಧಾರಾವಾಹಿ ತನ್ನ ಪ್ರಸಾರವನ್ನು ಅಂತ್ಯಗೊಳಿಸಲಿದೆ. ಇದು ಎಲ್ಲರ ಜನ ಮೆಚ್ಚಿನ ಧಾರಾವಾಹಿ ಎನಿಸಿಕೊಂಡಿತ್ತು. ಅದುವೇ ‘ನಿನಗಾಗಿ’.

ದಿವ್ಯಾ ಉರುಡುಗ ಹಾಗೂ ರಿತ್ವಿಕ್ ನಟಿಸುತ್ತಿರುವ ‘ನಿನಗಾಗಿ’ ಧಾರಾವಾಹಿ ಈಗಾಗಲೇ ಹಲವು ಎಪಿಸೋಡ್ ಪ್ರಸಾರ ಕಂಡಿದೆ. ಈ ಧಾರಾವಾಹಿ ಪ್ರತಿ ನಿತ್ಯ ರಾತ್ರಿ 8 ಗಂಟೆಗೆ ಪ್ರಸಾರ ಕಾಣುತ್ತಿತ್ತು. ಈಗ ಈ ಧಾರಾವಾಹಿಯ ಕೊನೆಯ ಹಂತದ ಶೂಟ್ ಪೂರ್ಣಗೊಂಡಿದೆಯಂತೆ. ಈ ಜಾಗದಲ್ಲಿ ‘ಗಂಧದಗುಡಿ’ ಧಾರಾವಾಹಿ ಪ್ರಸಾರ ಕಾಣಲಿದೆಯೇ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ
Image
ಮುತ್ತುರಾಜ್ ಹೆಸರು ಬದಲಾಗಿದ್ದು ಅಣ್ಣಾವ್ರಿಗೇ ಗೊತ್ತಿರಲಿಲ್ಲ
Image
ರಿಂಗ್ ಕೊಡಿಸಲು ರಮ್ಯಾ ಜೊತೆ ಜ್ಯುವೆಲರಿ ಶಾಪ್​ಗೆ ಹೋದ ವಿನಯ್;ಇದೆ ಟ್ವಿಸ್ಟ್
Image
‘ಬಿಗ್ ಬಾಸ್ 12’ರ ನಾಲ್ಕು ಸ್ಪರ್ಧಿಗಳ ಹೆಸರು ಶನಿವಾರವೇ ರಿವೀಲ್?

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ ಸ್ಪರ್ಧಿಗಳು ಇವರೇ ನೋಡಿ

ಪ್ರತಿ ದಿನ ಸಂಜೆ 6 ಗಂಟೆಗೆ ‘ದೃಷ್ಟಿ ಬೊಟ್ಟು’ ಧಾರಾವಾಹಿ ಪ್ರಸಾರ ಕಾಣುತ್ತಿತ್ತು. ಈ ಧಾರಾವಾಹಿ ಮುಕ್ತಾಯಗೊಂಡಿದೆ. ಈ ಕಾರಣಕ್ಕೆ ಆ ಸಮಯದಲ್ಲಿ ‘ಯಜಮಾನ’ ಹಾಗೂ ‘ರಾಮಾಚಾರಿ’ ಧಾರಾವಾಹಿಗಳ ಮಹಾ ಸಂಗಮ ಪ್ರಸಾರ ಕಾಣುತ್ತಿದೆ. ಈ ಮಹಾಸಂಗಮ ಈ ಮೊದಲು ರಾತ್ರಿ 9.30ರಿಂದ 10.30ರವರೆಗೆ ಪ್ರಸಾರ ಕಾಣುತ್ತಿತ್ತು. ಈಗ ಈ ಮಹಾಸಂಗಮದ ಟೈಮಿಂಗ್ 6 ಗಂಟೆಗೆ ಶಿಫ್ಟ್ ಆಗಿರುವುದರಿಂದ ಬಿಗ್ ಬಾಸ್ ಹಾದಿ ಸುಗಮವಾಗಿದೆ. ಈ ಎರಡು ಧಾರಾವಾಹಿಗಳ ಪೈಕಿ ಒಂದು ಕೊನೆ ಆಗಬಹುದು ಅಥವಾ ಇದೇ ಮಹಾ ಸಂಗಮ ಹೀಗೆಯೇ ಮುಂದುವರಿಯಬಹುದು ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ