AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

Bigg Boss Elimination | Aishwarya Pissay: ನೋಡನೋಡುತ್ತಿದ್ದಂತೆಯೇ ಬಿಗ್​ ಬಾಸ್​ ಮನೆಯಲ್ಲಿ ಒಂದು ವಾರ ಕಳೆದು ಹೋಗಿದೆ. ಎರಡನೇ ವಾರಕ್ಕೆ ಪೈಪೋಟಿಯ ಕಾವು ಹೆಚ್ಚಾಗಲಿದೆ.

BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ
ಐಶ್ವರ್ಯಾ ಪಿಸ್ಸೆ
Follow us
TV9 Web
| Updated By: ಮದನ್​ ಕುಮಾರ್​

Updated on:Oct 02, 2022 | 10:49 PM

ಕಿಚ್ಚ ಸುದೀಪ್​ ನಡೆಸಿಕೊಡುತ್ತಿರುವ ‘ಬಿಗ್​ ಬಾಸ್ ಕನ್ನಡ ಸೀಸನ್​ 9’​ ಶೋನಲ್ಲಿ (Bigg Boss Kannada Season 9) ಮೊದಲ ವಾರದ ಎಲಿಮಿನೇಷನ್​ ನಡೆದಿದೆ. ಒಂದೇ ವಾರಕ್ಕೆ ಯಾರು ಔಟ್​ ಆಗುತ್ತಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಬೈಕ್​ ರೇಸರ್​ ಐಶ್ವರ್ಯಾ ಪಿಸ್ಸೆ (Aishwarya Pissay) ಅವರು ಎಲಿಮಿನೇಟ್​ ಆಗಿದ್ದಾರೆ. ಮೊದಲ ವಾರ 12 ಜನರು ನಾಮಿನೇಟ್​ ಆಗಿದ್ದರು. ಆರ್ಯವರ್ಧನ್​, ದರ್ಶ್​, ದಿವ್ಯಾ ಉರುಡುಗ, ಐಶ್ವರ್ಯಾ ಪಿಸೆ, ಪ್ರಶಾಂತ್​ ಸಂಬರ್ಗಿ, ವಿನೋದ್​, ಅರುಣ್​ ಸಾಗರ್​, ​ನವಾಜ್​, ಸಾನ್ಯಾ ಅಯ್ಯರ್​, ಮಯೂರಿ, ರೂಪೇಶ್​ ಶೆಟ್ಟಿ, ಕ್ಯಾವ್ಯಶ್ರೀ ಮೇಲೆ ಎಲಿಮಿನೇಷನ್​ ತೂಗುಗತ್ತಿ ಇತ್ತು. ಶನಿವಾರದ ಎಪಿಸೋಡ್​ನಲ್ಲಿ ದಿವ್ಯಾ, ಅರುಣ್​, ವಿನೋದ್​ ಸೇಫ್​ ಆದರು. ಭಾನುವಾರದ ಸಂಚಿಕೆಯಲ್ಲಿ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​ ಎಂಬ ವಿಷಯವನ್ನು ಕಿಚ್ಚ ಸುದೀಪ್​ (Kichcha Sudeep) ತಿಳಿಸಿದರು.

ಕಲರ್ಸ್​ ಕನ್ನಡ ವಾಹಿನಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ಪ್ರಸಾರ ಆಗುತ್ತಿದೆ. ಈ ಬಾರಿಯ ಕಾರ್ಯಕ್ರಮ ಕೊಂಚ ಡಿಫರೆಂಟ್​ ಆಗಿದೆ. ಈ ಹಿಂದಿನ ಸೀಸನ್​ಗಳಲ್ಲಿ ಸ್ಪರ್ಧಿಸಿದ ಕೆಲವರ ಜೊತೆಗೆ 9 ಮಂದಿ ಹೊಸ ಸ್ಪರ್ಧಿಗಳು ಭಾಗವಹಿಸಿದ್ದಾರೆ. ಎರಡನೇ ವಾರದ ವೇಳೆಗೆ ಪೈಪೋಟಿ ಇನ್ನಷ್ಟು ಹೆಚ್ಚಲಿದೆ.

ಐಶ್ವರ್ಯಾ ಪಿಸ್ಸೆ ಅವರು ಸಿನಿಮಾ ಅಥವಾ ಕಿರುತೆರೆ ಕ್ಷೇತ್ರದಿಂದ ಬಂದವರಲ್ಲ. ಹಾಗಾಗಿ ಅವರು ಬಿಗ್​ ಬಾಸ್​ ಮನೆಯ ಎಂಟರ್​ಟೇನ್ಮೆಂಟ್​ ವಿಚಾರದಲ್ಲಿ ಹಿಂದೆ ಉಳಿದುಕೊಂಡಿದ್ದರು. ‘ನೀವು ಬೈಕ್​ ರೇಸರ್​. ಆದರೆ ನಿಮ್ಮ ಬೈಕ್​ ಯಾಕೆ ಇನ್ನೂ ನ್ಯೂಟ್ರಲ್​ನಲ್ಲೇ ಇದೆ’ ಎಂದು ಸುದೀಪ್​ ಅವರು ವೀಕೆಂಡ್​ ಎಪಿಸೋಡ್​ನಲ್ಲಿ ಪ್ರಶ್ನೆ ಮಾಡಿದ್ದರು. ವೀಕ್ಷಕರಿಂದ ಕಡಿಮೆ ವೋಟ್​ ಪಡೆದ ಐಶ್ವರ್ಯಾ ಪಿಸ್ಸೆ ಅವರು ಒಂದೇ ವಾರಕ್ಕೆ ಬಿಗ್​ ಬಾಸ್​ ಮನೆಯಿಂದ ಹೊರಬೀಳುವಂತೆ ಆಗಿದೆ.

ಇದನ್ನೂ ಓದಿ
Image
‘ಬಿಗ್ ಬಾಸ್ ಕನ್ನಡ ಸೀಸನ್ 9’ ಸೇರಿದ 18 ಸ್ಪರ್ಧಿಗಳು ಇವರೇ ನೋಡಿ; ಇಲ್ಲಿದೆ ಫೋಟೋ ಹಾಗೂ ವಿವರ
Image
ಬಿಗ್ ಬಾಸ್​ ಮನೆಗೆ ಎಂಟ್ರಿ ಕೊಟ್ಟ ಬೈಕ್ ರೇಸರ್ ಐಶ್ವರ್ಯಾ, ‘ಮಂಗಳಗೌರಿ ಮದುವೆ’ ಖ್ಯಾತಿಯ ಕಾವ್ಯಶ್ರೀ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ಟ ನೇಹಾ ಗೌಡ ಹಾಗೂ ವಿನೋದ್​; ಇವರ ವಿಶೇಷತೆಗಳೇನು?
Image
ಬಿಗ್ ಬಾಸ್ ಮನೆ ಸೇರಿದ ಒಟಿಟಿ ಸ್ಪರ್ಧಿಗಳು; ಇವರಿಗಿರುವ ಸವಾಲುಗಳು ಒಂದೆರಡಲ್ಲ

ಸುಮಾರು 100 ದಿನಗಳ ಕಾಲ ಬಿಗ್​ ಬಾಸ್​ ಶೋ ನಡೆಯಲಿದೆ. ಫಿನಾಲೆ ತಲುಪಬೇಕು ಎಂಬುದು ಪ್ರತಿಯೊಬ್ಬ ಸ್ಪರ್ಧಿಯ ಆಶಯ ಆಗಿರುತ್ತದೆ. ಪ್ರತಿ ವಾರದ ಎಲಿಮಿನೇಷನ್​ನಿಂದ ಬಜಾವ್​ ಆಗುವುದು ಅಷ್ಟು ಸುಲಭ ಅಲ್ಲ. ಮೊದಲ ವಾರ ಸೇಫ್​ ಆದ ಎಲ್ಲ ಸ್ಪರ್ಧಿಗಳು ನಿಟ್ಟುಸಿರು ಬಿಟ್ಟಿದ್ದಾರೆ. 17 ಜನರ ನಡುವೆ ಈಗ ಹಣಾಹಣಿ ಮುಂದುವರಿದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:26 pm, Sun, 2 October 22

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ