‘ಮೋದಿ ಮೀಟ್ ಮಾಡೋಕೆ ಎಷ್ಟು ಹಣ ಪಡೆದ್ರಿ’ ಎಂದವರಿಗೆ ಅಯ್ಯೋ ಶ್ರದ್ಧಾ ಕೊಟ್ಟ ಖಡಕ್ ಉತ್ತರ ಇದು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಅನುಭವವನ್ನು ಕಾಮಿಡಿಯನ್ ಅಯ್ಯೋ ಶ್ರದ್ಧಾ ಅವರು ಹಂಚಿಕೊಂಡಿದ್ದಾರೆ. ಯಶ್ ಮತ್ತು ರಿಷಬ್ ಶೆಟ್ಟಿ ಅವರೊಂದಿಗೆ ನಡೆದ ಈ ಭೇಟಿಯ ನಂತರ, ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಬಂದ ಕೆಲವು ಪ್ರತಿಕ್ರಿಯೆಗಳು ಅವರನ್ನು ಆಶ್ಚರ್ಯಗೊಳಿಸಿವೆ. ಈ ಬಗ್ಗೆ ಅವರು ವಿವರಿಸಿದ್ದರು.

‘ಮೋದಿ ಮೀಟ್ ಮಾಡೋಕೆ ಎಷ್ಟು ಹಣ ಪಡೆದ್ರಿ’ ಎಂದವರಿಗೆ ಅಯ್ಯೋ ಶ್ರದ್ಧಾ ಕೊಟ್ಟ ಖಡಕ್ ಉತ್ತರ ಇದು
ಶ್ರದ್ಧಾ-ಮೋದಿ

Updated on: Sep 17, 2025 | 12:41 PM

ಪ್ರಧಾನಿ ನರೇಂದ್ರ ಮೊದಿ (Narendra Modi) ಅವರಿಗೆ ಇಂದು (ಸೆಪ್ಟೆಂಬರ್ 17) ಜನ್ಮದಿನ. ಈ ವಿಶೇಷ ದಿನದಂದು ಅನೇಕ ಸೆಲೆಬ್ರಿಟಿಗಳು ಅವರಿಗೆ ಬರ್ತ್​ಡೇ ವಿಶ್ ತಿಳಿಸುತ್ತಿದ್ದಾರೆ. ಅಲ್ಲದೆ, ಮೋದಿ ಜೊತೆ ನಡೆದ ಹಲವು ಘಟನೆಗಳನ್ನು ವಿವರಿಸುತ್ತಿದ್ದಾರೆ. ಈ ವೇಳೆ ಕಾಮಿಡಿಯನ್ ಅಯ್ಯೋ ಶ್ರದ್ಧಾ ಅವರು ವಿವರಿಸಿದ ಒಂದು ಘಟನೆಯನ್ನು ನೆನಪಿಸಿಕೊಳ್ಳಲೇಬೇಕು. ಆ ಘಟನೆಯ ಬಗ್ಗೆ ಒಂದು ನೆನಪು.

ಅಯ್ಯೋ ಶ್ರದ್ಧಾ ಅವರು ಈ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಆಗಿದ್ದರು. ಈ ಭೇಟಿ ವೇಳೆ ಯಶ್ ಹಾಗೂ ರಿಷಬ್ ಶೆಟ್ಟಿ ಕೂಡ ಇದ್ದರು. ಇದು ಶ್ರದ್ಧಾಗೆ ಸಾಕಷ್ಟು ಎಗ್ಸೈಟಿಂಗ್ ಅನಿಸಿತ್ತು. ಭೇಟಿ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಶ್ರದ್ಧಾ ಅವರು ಫೋಟೋ ಹಂಚಿಕೊಂಡಿದ್ದರು. ಈ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬಂದವು. ಅದರಲ್ಲಿ ಕೆಲವು ಕಮೆಂಟ್​ಗಳು ಶ್ರದ್ಧಾ ಅವರಿಗೆ ಅಚ್ಚರಿ ತಂದಿತ್ತು.

ಶ್ರದ್ಧಾ ಸ್ಟ್ಯಾಂಡಪ್ ಕಾಮಿಡಿ ವಿಡಿಯೋ

ಇದನ್ನೂ ಓದಿ
ಊಟದ ವಿಚಾರದಲ್ಲಿ ಸಖತ್ ಮೂಡಿ ಆಗಿದ್ದ ವಿಷ್ಣುವರ್ಧನ್
‘ಪ್ರಿಯಾಂಕಾ ಗಂಭೀರ ಅಫೇರ್ ಹೊಂದಿದ್ದು ನಿಜ’; ನಿರ್ದೇಶಕನ ದೊಡ್ಡ ಹೇಳಿಕೆ
ಒಟಿಟಿಗೆ ಬಂದರೂ ಥಿಯೇಟರ್​​ನಲ್ಲಿ ಪ್ರದರ್ಶನ ಕಾಣುತ್ತಿದೆ ‘ಸು ಫ್ರಮ್ ಸೋ’
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

‘ಮೋದಿ ಭೇಟಿ ಮಾಡಿದ್ದಕ್ಕೆ ಎಷ್ಟು ಹಣ ಕೊಟ್ಟರು’ ಎಂದು ಯಾವುದೋ ವ್ಯಕ್ತಿ ಕೇಳಿದ್ದನಂತೆ. ಈ ವಿಚಾರ ಶ್ರದ್ಧಾಗೆ ಶಾಕ್ ಹಾಗೂ ಅಚ್ಚರಿ ಎರಡನ್ನೂ ತಂದಿತ್ತು. ಹೀಗಾಗಿ, ಅವರು ಈ ಬಗ್ಗೆ ಮಾತನಾಡಿದ್ದರು. ‘ಆ ವ್ಯಕ್ತಿಯ ಕಮೆಂಟ್ ನೋಡಿ ನನಗೆ ಶಾಕ್ ಆಯ್ತು. ಹಣ ಎಷ್ಟು ಕೊಟ್ಟರು ಎಂದು ಕೇಳಿದ್ದ. ನಾನು ಯಶ್ ಹಾಗೂ ರಿಷಬ್​ಗೆ ಕರೆ ಮಾಡಿ ಹಣ ಕೊಡ್ತಾ ಇದ್ರ ಎಂದು ಕೇಳೋಣ ಎಂದುಕೊಂಡಿದ್ದೆ. ಚೆಕ್​ನಲ್ಲಿ ಕೊಟ್ರಾ ಅಥವಾ ಕ್ಯಾಶ್ ಅಲ್ಲಿ ಕೊಟ್ರ ಎಂದು ಕೇಳಬೇಕಿತ್ತು’ ಎಂದು ನಗೆ ಚಟಾಕಿ ಹಾರಿಸಿದ್ದಾರೆ.

ಇದನ್ನೂ ಓದಿ: ಮೋದಿ ವಿಶೇಷ ವ್ಯಕ್ತಿ ಏಕೆ ಎಂಬುದನ್ನು ಸ್ವ ಅನುಭವದಲ್ಲಿ ವಿವರಿಸಿದ ಮಾಧವನ್

‘ಮೀಟಿಂಗ್ ದಿ ಪ್ರೈಮ್ ಮಿನಿಸ್ಟರ್’ ಹೆಸರಿನ ಸ್ಟ್ಯಾಂಡಪ್​ ಕಾಮಿಡಿಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ‘ರಾಜ್ ಭವನದಲ್ಲಿ ಅನಿಲ್ ಕುಂಬ್ಳೆ, ಜಾವಾಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್​ನ ಒಟ್ಟಿಗೆ ಭೇಟಿ ಮಾಡಿದ್ದೆ’ ಎಂದು ಅಯ್ಯೋ ಶ್ರದ್ಧಾ ಹೇಳಿದರು. ರಾಜಭವನದಲ್ಲಿ ಈ ಭೇಟಿ ನಡೆದಿತ್ತು. ಅದು ಸಾಕಷ್ಟು ಅದ್ಭುತವಾಗಿತ್ತು ಎಂದು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:14 pm, Wed, 17 September 25

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us