‘ಬಿಗ್ ಬಾಸ್​’ ಫಿನಾಲೆಯಲ್ಲಿ ಅಕ್ಕಿನೇನಿ ನಾಗಾರ್ಜುನ ಆಡಿದ ಮಾತಿನಿಂದ ಫ್ಯಾನ್ಸ್​ಗೆ ಬೇಸರ

ತೆಲುಗಿನಲ್ಲಿ ಮೊದಲು ‘ಬಿಗ್​ ಬಾಸ್ ಒಟಿಟಿ​’ ಆರಂಭ ಆಯಿತು. ಆ ಬಳಿಕ ಟಿವಿ ಸೀಸನ್ ಶುರುವಾಯಿತು. 21 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರಿದ್ದರು. ಇದರಲ್ಲಿ ಸಾಕಷ್ಟು ಜನಪ್ರಿಯತೆ ಪಡೆದ ಸ್ಪರ್ಧಿಗಳು ಇರಲಿಲ್ಲ. ಈ ಕಾರಣಕ್ಕೆ ಶೋಗೆ ಹೇಳಿಕೊಳ್ಳುವಂತಹ ಟಿಆರ್​ಪಿ ಸಿಕ್ಕಿಲ್ಲ.

‘ಬಿಗ್ ಬಾಸ್​’ ಫಿನಾಲೆಯಲ್ಲಿ ಅಕ್ಕಿನೇನಿ ನಾಗಾರ್ಜುನ ಆಡಿದ ಮಾತಿನಿಂದ ಫ್ಯಾನ್ಸ್​ಗೆ ಬೇಸರ
ನಾಗಾರ್ಜುನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Dec 20, 2022 | 7:04 AM

‘ತೆಲುಗು ಬಿಗ್ ಬಾಸ್ ಸೀಸನ್ 6’ ಪೂರ್ಣಗೊಂಡಿದೆ. ಗಾಯಕ ಎಲ್.​ವಿ. ರೇವಂತ್ (LV Revanth) ಅವರು ಟ್ರೋಫಿ ಗೆದ್ದಿದ್ದಾರೆ. ಕನ್ನಡದ ಕೀರ್ತಿ ಭಟ್ ಅವರು ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ಶೋನ ನಡೆಸಿಕೊಟ್ಟಿದ್ದು ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರು. ಈಗ ಅವರು ಆಡಿದ ಮಾತಿನಿಂದ ಫ್ಯಾನ್ಸ್​ಗೆ ಬೇಸರ ಶುರುವಾಗಿದೆ. ಅವರು ಬಿಗ್ ಬಾಸ್ ತೊರೆಯೋದು ಖಚಿತ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ಆಗುತ್ತಿವೆ.

ತೆಲುಗಿನಲ್ಲಿ ಮೊದಲು ‘ಬಿಗ್​ ಬಾಸ್ ಒಟಿಟಿ​’ ಆರಂಭ ಆಯಿತು. ಆ ಬಳಿಕ ಟಿವಿ ಸೀಸನ್ ಶುರುವಾಯಿತು. 21 ಸ್ಪರ್ಧಿಗಳು ಬಿಗ್ ಬಾಸ್ ಮನೆ ಸೇರಿದ್ದರು. ಇದರಲ್ಲಿ ಸಾಕಷ್ಟು ಜನಪ್ರಿಯತೆ ಪಡೆದ ಸ್ಪರ್ಧಿಗಳು ಇರಲಿಲ್ಲ. ಈ ಕಾರಣಕ್ಕೆ ಶೋಗೆ ಹೇಳಿಕೊಳ್ಳುವಂತಹ ಟಿಆರ್​ಪಿ ಸಿಕ್ಕಿಲ್ಲ. ಇನ್ನು, ತೆಲುಗು ಮಂದಿಗೆ ಅಕ್ಕಿನೇನಿ ನಾಗಾರ್ಜುನ ಅವರ ನಿರೂಪಣೆ ದಿನಕಳೆದಂತೆ ಸಪ್ಪೆ ಎನಿಸತೊಡಗಿದೆ. ಈ ಕಾರಣಕ್ಕೆ ಮುಂದಿನ ವರ್ಷದಿಂದ ನಿರೂಪಕರು ಬದಲಾಗಲಿದ್ದಾರೆ ಎಂದು ವರದಿ ಆಗಿತ್ತು. ಈಗ ಬಿಗ್ ಬಾಸ್ ಫಿನಾಲೆ ವೇಳೆ ಅಕ್ಕಿನೇನಿ ನಾಗಾರ್ಜುನ ಆಡಿದ ಮಾತುಗಳನ್ನು ಇದಕ್ಕೆ ಲಿಂಕ್ ಮಾಡಲಾಗುತ್ತಿದೆ.

ಈ ಮೊದಲು ನಾಗಾರ್ಜುನ ಅವರು ಸಖತ್ ಜೋಶ್​​ನಲ್ಲಿ ಶೋ ಪೂರ್ಣಗೊಳಿಸುತ್ತಿದ್ದರು. ‘ಈ 100 ದಿನಗಳ ಪಯಣ ಅದ್ಭುತವಾಗಿತ್ತು. ಇದು ಸೈನ್ ಆಫ್ ಮಾಡುವ ಸಮಯ. ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇವೆ. ನಾನು ನಾಗಾರ್ಜುನ’ ಎಂದು ಶೋ ಮುಗಿಸುತ್ತಿದ್ದರು. ಆದರೆ, ಈ ಬಾರಿ ಆ ರೀತಿ ಹೇಳಿಲ್ಲ. ‘ದಾಟ್ಸ್​ ಆಲ್, ಗುಡ್ ನೈಟ್​’ ಎಂದು ಶೋನ ಅಂತ್ಯ ಮಾಡಿದ್ದಾರೆ. ನಾಗಾರ್ಜುನ ಅವರ ಈ ಮಾತು ಫ್ಯಾನ್ಸ್ ಬೇಸರಕ್ಕೆ ಕಾರಣ ಆಗಿದೆ.

ರೇವಂತ್ ವಿನ್ನರ್

ಭಾನುವಾರ (ಡಿಸೆಂಬರ್ 18) ಬಿಗ್ ಬಾಸ್ ಫಿನಾಲೆ ನಡೆದಿದೆ. ಎಲ್​.ವಿ. ರೇವಂತ್, ಶ್ರೀಹಾನ್, ಆದಿ ರೆಡ್ಡಿ, ಕೀರ್ತಿ ಭಟ್ ಹಾಗೂ ರೋಹಿತ್ ಸಾಹ್ನಿ ಫಿನಾಲೆ ತಲುಪಿದ್ದರು. ಹೆಚ್ಚು ವೋಟ್ ಪಡೆದು ರೇವಂತ್ ಗೆದ್ದಿದ್ದಾರೆ. ಅವರಿಗೆ ಟ್ರೋಫಿ ಜತೆ 10 ಲಕ್ಷ ರೂಪಾಯಿ ನಗದು, 25 ಲಕ್ಷ ರೂಪಾಯಿ ಮೌಲ್ಯದ ಪ್ರಾಪರ್ಟಿ ಹಾಗೂ ಕಾರು ಬಹುಮಾನವಾಗಿ ಸಿಕ್ಕಿದೆ.

ರೇವಂತ್ ಅವರು ವೃತ್ತಿಯಲ್ಲಿ ಗಾಯಕ. ಅವರು ಕನ್ನಡ ಹಾಗೂ ತಮಿಳು ಹಾಡುಗಳನ್ನು ಹಾಡಿದ್ದಾರೆ. ‘ಇಂಡಿಯನ್ ಐಡಲ್ 9’ರ ವಿನ್ನರ್ ಕೂಡ ಹೌದು. ‘ಬಾಹುಬಲಿ 1’ ಚಿತ್ರದ ‘ಮನೋಹರಿ..’ ಹಾಡನ್ನು ಇವರೇ ಹಾಡಿದ್ದರು. ‘ಕಾಫಿ ವಿಥ್ ಮೈ ವೈಫ್’ ಸೇರಿ ಕೆಲವು ಕನ್ನಡದ ಸಿನಿಮಾದ ಹಾಡುಗಳಿಗೆ ಅವರು ಧ್ವನಿಯಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ