AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಹೊಸ ಸೀಸನ್​ ಸೆ.5ರಿಂದ ಆರಂಭ; ಗನ್​ ಹಿಡಿದು ಬಂದ ನಿರೂಪಕ

‘ಬಿಗ್​ ಬಾಸ್​ ತೆಲುಗು ಸೀಸನ್​ 5’ರ ಪ್ರೋಮೋದಲ್ಲಿ ಗನ್​ ಹೆಚ್ಚು ಹೈಲೈಟ್​ ಆಗಿದೆ. ಪ್ರೋಮೋ ಮತ್ತು ಫೋಟೋಶೂಟ್​ ನೋಡಿದ ಜನರು, ‘ಎಲ್ಲ ಸರಿ, ಈ ಗನ್​ ಯಾಕೆ’ ಎಂದು ಕಮೆಂಟ್​ ಮಾಡುತ್ತಿದ್ದಾರೆ.

ಬಿಗ್​ ಬಾಸ್​ ಹೊಸ ಸೀಸನ್​ ಸೆ.5ರಿಂದ ಆರಂಭ; ಗನ್​ ಹಿಡಿದು ಬಂದ ನಿರೂಪಕ
ಬಿಗ್​ ಬಾಸ್​ ಹೊಸ ಸೀಸನ್​ ಸೆ.5ರಿಂದ ಆರಂಭ
TV9 Web
| Edited By: |

Updated on: Aug 28, 2021 | 9:21 AM

Share

ಕಿರುತೆರೆ ಪ್ರೇಕ್ಷಕರಿಗೆ ಬಿಗ್​ ಬಾಸ್​ ಎಂದರೆ ಭಾರಿ ಆಸಕ್ತಿ. ಹಾಗಾಗಿ ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಮುಂತಾದ ಭಾಷೆಗಳಲ್ಲಿ ಈ ರಿಯಾಲಿಟಿ ಶೋ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 8’ ಇತ್ತೀಚೆಗಷ್ಟೇ ಕೊನೆಗೊಂಡಿತು. ತೆಲುಗಿನಲ್ಲಿ 5ನೇ ಸೀಸನ್​ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಬಿಡುಗಡೆ ಆಗಿರುವ ಪ್ರೋಮೋಗಳು ಅಭಿಮಾನಿಗಳಲ್ಲಿ ಕಾತರ ಹೆಚ್ಚಿಸಿವೆ. ಸ್ಟಾರ್​ ಮಾ ವಾಹಿನಿಯಲ್ಲಿ ಸೆ.5ರಂದು ಅದ್ದೂರಿಯಾಗಿ ‘ತೆಲುಗು ಬಿಗ್​ ಬಾಸ್​ ಸೀಸನ್​ 5’ ಆರಂಭ ಆಗಲಿದೆ. ಈ ಬಾರಿಯೂ ಅಕ್ಕಿನೇನಿ ನಾಗಾರ್ಜುನ ಅವರು ನಿರೂಪಣೆ ಮಾಡಲಿದ್ದಾರೆ.

ಲಾಕ್​ಡೌನ್​ನಿಂದಾಗಿ ಎಲ್ಲರಿಗೂ ಬೋರ್​ ಆಗಿದೆ. ಆ ಬೋರ್​ಡಮ್​ ಸಾಯಿಸಲು ನಿರೂಪಕ ನಾಗಾರ್ಜುನ ಅವರು ಗನ್​ ಹಿಡಿದು ಬಂದಿದ್ದಾರೆ. ಆ ರೀತಿಯ ಕಾನ್ಸೆಪ್ಟ್​ನಲ್ಲಿ ಪ್ರೋಮೋ ತಯಾರಿಸಲಾಗಿದೆ. ಅಲ್ಲದೇ ಫೋಟೋಶೂಟ್​ನಲ್ಲಿಯೂ ನಾಗಾರ್ಜುನ ಅವರು ಗನ್​ ಹಿಡಿದು ನಿಂತಿದ್ದಾರೆ. ‘ಎಲ್ಲ ಸರಿ, ಈ ಗನ್​ ಯಾಕೆ’ ಎಂದು ಅನೇಕರು ಕಮೆಂಟ್​ ಮಾಡುತ್ತಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷ ಕೂಡ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲಿ ಅನೇಕ ಸೆಲೆಬ್ರಿಟಿಗಳ ಹೆಸರು ಓಡಾಡುತ್ತಿದೆ. ಕೆಲವು ಕಾಂಟ್ರವರ್ಸಿ ವ್ಯಕ್ತಿತ್ವದವರೂ ಈ ಪಟ್ಟಿಯಲ್ಲಿ ಇದ್ದಾರೆ. ನಿಜಕ್ಕೂ ಯಾರೆಲ್ಲ ಬಿಗ್​ ಬಾಸ್​ ಮನೆ ಪ್ರವೇಶಿಸಲಿದ್ದಾರೆ ಎಂಬುದು ಸೆ.5ರ ಸಂಜೆ ಗೊತ್ತಾಗಲಿದೆ. ನಾಗಾರ್ಜುನ ಅವರು ಶೋ ಹೋಸ್ಟ್​ ಮಾಡುತ್ತಿರುವುದು ಕೆಲವರಿಗೆ ಇಷ್ಟ ಇಲ್ಲ. ಮೊದಲ ಪ್ರೋಮೋ ಬಿಡುಗಡೆ ಆದಾಗಲೇ ನೆಟ್ಟಿಗರು ಆ ಬಗ್ಗೆ ಕಮೆಂಟ್​ ಮಾಡಿದ್ದರು. ದಯವಿಟ್ಟು ನಟ ನಾನಿ ಅವರನ್ನು ನಿರೂಪಕರನ್ನಾಗಿ ಕರೆತನ್ನಿ ಎಂದು ಅನೇಕರು ಬೇಡಿಕೆ ಇಟ್ಟಿದ್ದಾರೆ.

ಬಿಗ್​ ಬಾಸ್​ ಹೊಸ ಸೀಸನ್​ನಲ್ಲಿ ಒಂದಷ್ಟು ಹೊಸ ಅಂಶಗಳನ್ನು ಪರಿಚಯಿಸಲಾಗುತ್ತಿದೆ. ಈಗಾಗಲೇ ಹಿಂದಿಯಲ್ಲಿ ‘ಬಿಗ್​ ಬಾಸ್​ ಓಟಿಟಿ’ ಹೆಚ್ಚು ಫೇಮಸ್​ ಆಗಿದೆ. ಅದರಲ್ಲಿ ತುಂಬ ಆಕ್ರಮಣಕಾರಿ ಆದಂತಹ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ತೆಲುಗು ಬಿಗ್​ ಬಾಸ್​ ಆಯೋಜಕರು ಕೂಡ ಅಂಥ ಟಾಸ್ಕ್​ಗಳನ್ನು ಪ್ಲ್ಯಾನ್​ ಮಾಡಿದ್ದಾರೆ ಎನ್ನಲಾಗಿದೆ. ಆದರೆ ವಾಹಿನಿಯ ಮುಖ್ಯಸ್ಥರು ಮತ್ತು ನಿರೂಪಕ ನಾಗಾರ್ಜುನ ಕಡೆಯಿಂದ ಅನುಮತಿ ಸಿಕ್ಕರೆ ಮಾತ್ರ ಅಂಥ ಟಾಸ್ಕ್​ಗಳನ್ನು ಪರಿಚಯಿಸಲಾಗುತ್ತದೆ.

ಇದನ್ನೂ ಓದಿ:

ಬಿಗ್​ ಬಾಸ್​ ಶೋನಲ್ಲೇ ಮಾರಾಮಾರಿ; ಸ್ಪರ್ಧಿಯನ್ನು ತಕ್ಷಣ ಮನೆಯಿಂದ ಹೊರ ಹಾಕಿ ಆದೇಶ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಗೆ ಮುತ್ತಿನ ಮಳೆ; ‘ಬಿಗ್​ ಬಾಸ್​ ಮನೆಗೆ ಬಂದು ಮೂರ್ಖಳಾದೆ’ ಎಂದ ನಟಿ

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್