AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀನು ಏನು ಅನ್ನೋದು ಇಲ್ಲಿ ಯಾರಿಗೂ ಗೊತ್ತಿಲ್ಲ, ನಿನ್ನದು ಮಗು ಮನಸ್ಸು’; ವಿನಯ್​ಗೆ​ ಪತ್ನಿಯ ಧೈರ್ಯ

ಮುಂಜಾನೆಯೇ ದೊಡ್ಮನೆಗೆ ಅಕ್ಷತಾ ಅವರ ಆಗಮನ ಆಗಿದೆ. ವಿನಯ್ ಇನ್ನೂ ಮಲಗಿದ್ದಾಗಲೇ ಅವರು ಆಗಮಿಸಿದರು. ವಿನಯ್​ನ ಎಬ್ಬಿಸಿ ಸರ್​ಪ್ರೈಸ್ ಕೊಟ್ಟರು. ಪತ್ನಿಯನ್ನು ನೋಡಿ ವಿನಯ್ ಖುಷಿಪಟ್ಟರು.

‘ನೀನು ಏನು ಅನ್ನೋದು ಇಲ್ಲಿ ಯಾರಿಗೂ ಗೊತ್ತಿಲ್ಲ, ನಿನ್ನದು ಮಗು ಮನಸ್ಸು’; ವಿನಯ್​ಗೆ​ ಪತ್ನಿಯ ಧೈರ್ಯ
ಅಕ್ಷತಾ-ವಿನಯ್
ರಾಜೇಶ್ ದುಗ್ಗುಮನೆ
|

Updated on: Dec 29, 2023 | 7:59 AM

Share

ವಿನಯ್ ಗೌಡ (Vinay Gowda) ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಶ್ರಮ ಹಾಕಿ ಆಟ ಆಡುತ್ತಿದ್ದಾರೆ. ಅವರು ಈ ಮೊದಲು ಸಖತ್ ವೈಲೆಂಟ್ ಆಗಿ ನಡೆದುಕೊಂಡಿದ್ದರು. ಅವರ ಆಟ ನೋಡಿ ಎಲ್ಲರಿಗೂ ಶಾಕ್ ಆಗಿತ್ತು. ಅವರು ನಡೆದುಕೊಂಡ ರೀತಿಯನ್ನು ಅನೇಕರು ಟೀಕೆ ಮಾಡಿದ್ದರು. ಮನೆಯವರಿಗೆ ಬೆದರಿಕೆ ಬಂದಿದೆ ಎಂಬ ವಿಚಾರವನ್ನು ಪವಿ ಪೂವಪ್ಪ ಅವರು ವಿನಯ್ ಬಳಿ ಹಂಚಿಕೊಂಡಿದ್ದರು. ಈ ವಿಚಾರ ಕೇಳಿ ವಿನಯ್ ಶಾಕ್ ಆಗಿದ್ದರು. ಬಾತ್​ರೂಂಗೆ ಹೋಗಿ ಕಣ್ಣೀರು ಹಾಕಿದ್ದರು. ಈಗ ವಿನಯ್ ಅವರ ಪತ್ನಿ ದೊಡ್ಮನೆಗೆ ಬಂದು ಪತಿಗೆ ಬೆಂಬಲ ಸೂಚಿಸಿದ್ದಾರೆ.

ಮುಂಜಾನೆಯೇ ದೊಡ್ಮನೆಗೆ ಅಕ್ಷತಾ ಅವರ ಆಗಮನ ಆಗಿದೆ. ವಿನಯ್ ಇನ್ನೂ ಮಲಗಿದ್ದಾಗಲೇ ಅವರು ಆಗಮಿಸಿದರು. ವಿನಯ್​ನ ಎಬ್ಬಿಸಿ ಸರ್​ಪ್ರೈಸ್ ಕೊಟ್ಟರು. ಪತ್ನಿಯನ್ನು ನೋಡಿ ವಿನಯ್ ಖುಷಿಪಟ್ಟರು. ಆ ಬಳಿಕ ಗಾರ್ಡನ್ ಏರಿಯಾದಲ್ಲಿ ಕುಳಿತು ಕಷ್ಟ ಸುಖ ಮಾತನಾಡಿದರು ಅಕ್ಷತಾ ಹಾಗೂ ವಿನಯ್.

ಹೊರಗೆ ತುಂಬಾ ಕೆಟ್ಟದಾಗಿ ಕಾಣುತ್ತಿದೆಯೇ ಎಂದು ವಿನಯ್ ಪ್ರಶ್ನೆ ಮಾಡಿದರು. ‘ನೀನು ತುಂಬಾ ಚೆನ್ನಾಗಿ ಆಡ್ತಾ ಇದೀಯಾ. ನೀನು ಏನು ಅನ್ನೋದು ಇಲ್ಲಿಯವರಿಗೆ ತಿಳಿದಿಲ್ಲ. ನೀನು ಮಗು ಅನ್ನೋದು ಇಲ್ಲಿಯವರಿಗೆ ಗೊತ್ತಿಲ್ಲ. ನೀನು ಹೇಗೆ ಇದ್ದರೂ ಚೆನ್ನಾಗಿ ಕಾಣಸ್ತೀಯಾ. ಹೀಗೆಯೇ ಆಡು’ ಎಂದರು ಅಕ್ಷತಾ.

ಇದನ್ನೂ ಓದಿ: ‘ಪ್ಲೀಸ್ ಶಟ್​ಅಪ್​’; ಸಂಗೀತಾ ಹಾಗೂ ವಿನಯ್ ಗೌಡ ಮಧ್ಯೆ ಮತ್ತೆ ದ್ವೇಷದ ಕಿಡಿ

ವಿನಯ್ ಗೌಡ ಅವರಿಗೋಸ್ಕರ ಮಟನ್ ಬಿರ್ಯಾನಿ ತಂದಿದ್ದಾರೆ ಅವರ ಪತ್ನಿ. ಇದನ್ನು ಖುಷಿ ಖುಷಿಯಿಂದ ತಿಂದರು. ಆ ಬಳಿಕ ಎಲ್ಲರ ಜೊತೆಯೂ ವೈಯಕ್ತಿಕವಾಗಿ ಮಾತನಾಡಿದರು. ವಿನಯ್ ಅವರ ಮಗ ಕೂಡ ಬಂದರು. ಖುಷಿ ಖುಷಿಯಿಂದ ಅವರು ಸಮಯ ಕಳೆದು ಹೋದರು. ಕಲರ್ಸ್ ಕನ್ನಡದಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ಕೂಡ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ