AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​

ನಿರ್ದೇಶಕ ಆನಂದ್​ ಎಲ್​. ರಾಯ್​ ಬಾಲಿವುಡ್​ನಲ್ಲಿ ತುಂಬಾನೇ ಫೇಮಸ್​. ಅವರು ‘ತನು ವೆಡ್ಸ್​ ಮನು’ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ತಾಯಿ ಕೂಡ ಇಂದು (ಸೆಪ್ಟೆಂಬರ್​ 9) ಮೃತಪಟ್ಟಿದ್ದಾರೆ.

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​
ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​
TV9 Web
| Edited By: |

Updated on:Sep 08, 2021 | 9:59 PM

Share

ಬಾಲಿವುಡ್​​ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು (ಸೆಪ್ಟೆಂಬರ್​ 9) ನಿಧನ ಹೊಂದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಅಂತ್ಯಕ್ರಿಯೆಯನ್ನು ಅಕ್ಷಯ್​ ಕುಮಾರ್​ ನೆರವೇರಿಸಿದ್ದಾರೆ. ಈ ನೋವಿನಲ್ಲೂ ಅವರು ಮತ್ತೊಂದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು ಈಗ ಸಾಕಷ್ಟು ಸುದ್ದಿಯಾಗುತ್ತಿದೆ.

ನಿರ್ದೇಶಕ ಆನಂದ್​ ಎಲ್​. ರಾಯ್​ ಬಾಲಿವುಡ್​ನಲ್ಲಿ ತುಂಬಾನೇ ಫೇಮಸ್​. ಅವರು ‘ತನು ವೆಡ್ಸ್​ ಮನು’ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ತಾಯಿ ಕೂಡ ಇಂದು (ಸೆಪ್ಟೆಂಬರ್​ 9) ಮೃತಪಟ್ಟಿದ್ದಾರೆ. ಆನಂದ್​ ಹಾಗೂ ಅಕ್ಷಯ್​ ಉತ್ತಮ ಗೆಳೆಯರು. ಈ ಕಾರಣಕ್ಕೆ ಆನಂದ್​ ತಾಯಿಗೆ ಕೊನೆಯ ನಮನ ಸಲ್ಲಿಸಲು ಅಕ್ಷಯ್​ ತೆರಳಿದ್ದರು. ಈ ಫೋಟೋ ವೈರಲ್​ ಆಗುತ್ತಿದ್ದು, ಅಕ್ಷಯ್​ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಮಧ್ಯಾಹ್ನ ಅಕ್ಷಯ್​ ಕುಮಾರ್​ ತಮ್ಮ ತಾಯಿಯ ಅಂತ್ಯಕ್ರಿಯೆ ನಡೆಸಿದ್ದಾರೆ. ಸಂಜೆ ವೇಳೆಗೆ ಅವರು ಆನಂದ್​ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ತಮ್ಮ ನೋವಿನ ನಡುವೆಯೂ ಅವರು ಆನಂದ್​ ಅವರನ್ನು ಭೇಟಿ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದರು. ಈ ಬಗ್ಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದ ಅವರು, ‘ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬದವರು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದಿದ್ದರು.

ಇದನ್ನೂ ಓದಿ: Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ

Published On - 9:52 pm, Wed, 8 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ