AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​

ನಿರ್ದೇಶಕ ಆನಂದ್​ ಎಲ್​. ರಾಯ್​ ಬಾಲಿವುಡ್​ನಲ್ಲಿ ತುಂಬಾನೇ ಫೇಮಸ್​. ಅವರು ‘ತನು ವೆಡ್ಸ್​ ಮನು’ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ತಾಯಿ ಕೂಡ ಇಂದು (ಸೆಪ್ಟೆಂಬರ್​ 9) ಮೃತಪಟ್ಟಿದ್ದಾರೆ.

ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​
ತಾಯಿಯ ನಿಧನದ ಬಳಿಕ ಬೇರೊಬ್ಬರ ಅಂತ್ಯಕ್ರಿಯೆಯಲ್ಲೂ ಪಾಲ್ಗೊಂಡ ಅಕ್ಷಯ್​ ಕುಮಾರ್; ಭಾವುಕರಾದ ಫ್ಯಾನ್ಸ್​​
TV9 Web
| Edited By: |

Updated on:Sep 08, 2021 | 9:59 PM

Share

ಬಾಲಿವುಡ್​​ನ ಖ್ಯಾತ ನಟ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ ಇಂದು (ಸೆಪ್ಟೆಂಬರ್​ 9) ನಿಧನ ಹೊಂದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಅಂತ್ಯಕ್ರಿಯೆಯನ್ನು ಅಕ್ಷಯ್​ ಕುಮಾರ್​ ನೆರವೇರಿಸಿದ್ದಾರೆ. ಈ ನೋವಿನಲ್ಲೂ ಅವರು ಮತ್ತೊಂದು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದು ಈಗ ಸಾಕಷ್ಟು ಸುದ್ದಿಯಾಗುತ್ತಿದೆ.

ನಿರ್ದೇಶಕ ಆನಂದ್​ ಎಲ್​. ರಾಯ್​ ಬಾಲಿವುಡ್​ನಲ್ಲಿ ತುಂಬಾನೇ ಫೇಮಸ್​. ಅವರು ‘ತನು ವೆಡ್ಸ್​ ಮನು’ ಮೊದಲಾದ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಅವರ ತಾಯಿ ಕೂಡ ಇಂದು (ಸೆಪ್ಟೆಂಬರ್​ 9) ಮೃತಪಟ್ಟಿದ್ದಾರೆ. ಆನಂದ್​ ಹಾಗೂ ಅಕ್ಷಯ್​ ಉತ್ತಮ ಗೆಳೆಯರು. ಈ ಕಾರಣಕ್ಕೆ ಆನಂದ್​ ತಾಯಿಗೆ ಕೊನೆಯ ನಮನ ಸಲ್ಲಿಸಲು ಅಕ್ಷಯ್​ ತೆರಳಿದ್ದರು. ಈ ಫೋಟೋ ವೈರಲ್​ ಆಗುತ್ತಿದ್ದು, ಅಕ್ಷಯ್​ ಬಗ್ಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಮಧ್ಯಾಹ್ನ ಅಕ್ಷಯ್​ ಕುಮಾರ್​ ತಮ್ಮ ತಾಯಿಯ ಅಂತ್ಯಕ್ರಿಯೆ ನಡೆಸಿದ್ದಾರೆ. ಸಂಜೆ ವೇಳೆಗೆ ಅವರು ಆನಂದ್​ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ತಮ್ಮ ನೋವಿನ ನಡುವೆಯೂ ಅವರು ಆನಂದ್​ ಅವರನ್ನು ಭೇಟಿ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಅಕ್ಷಯ್ ಕುಮಾರ್ ಅವರೇ ಖಚಿತಪಡಿಸಿದ್ದರು. ಈ ಬಗ್ಗೆ ತಮ್ಮ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿದ್ದ ಅವರು, ‘ನನ್ನ ತಾಯಿಯೇ ನನ್ನ ಸರ್ವಸ್ವ. ಇಂದು ಅವರನ್ನು ಕಳೆದುಕೊಂಡು ನಾನು ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬದವರು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದಿದ್ದರು.

ಇದನ್ನೂ ಓದಿ: Akshay Kumar: ಅಕ್ಷಯ್​ ಕುಮಾರ್​ಗೆ ಮಾತೃ ವಿಯೋಗ; ಅಗಲಿದ ಅಮ್ಮನಿಗೆ ಅಕ್ಷರ ನಮನ ಸಲ್ಲಿಸಿದ ನಟ

Published On - 9:52 pm, Wed, 8 September 21

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!