AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿಗೆ ಕಪಿಲ್​ ಶರ್ಮಾ ನಂಬಿಕೆ ದ್ರೋಹ​; ‘ದಿ ಕಪಿಲ್​ ಶರ್ಮಾ ಶೋ’ ಬೈಕಾಟ್​ ಮಾಡಿದ ಅಕ್ಷಯ್​ ಕುಮಾರ್

‘ಬಚ್ಚನ್​ ಪಾಂಡೆ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಡಿಫರೆಂಟ್​ ಗೆಟಪ್​ ಇದೆ. ಮಾ.18ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅಕ್ಷಯ್​ ಬ್ಯುಸಿ ಇದ್ದಾರೆ. ಆದರೆ, ಅವರು ‘ಕಪಿಲ್​ ಶರ್ಮಾ ಶೋ’ಗೆ ಬರುತ್ತಿಲ್ಲ ಎಂದು ಹಿಂದುಸ್ತಾನ್​ ಟೈಮ್ಸ್​ ವರದಿ ಮಾಡಿದೆ.

ಅಕ್ಕಿಗೆ ಕಪಿಲ್​ ಶರ್ಮಾ ನಂಬಿಕೆ ದ್ರೋಹ​; ‘ದಿ ಕಪಿಲ್​ ಶರ್ಮಾ ಶೋ’ ಬೈಕಾಟ್​ ಮಾಡಿದ ಅಕ್ಷಯ್​ ಕುಮಾರ್
ಅಕ್ಷಯ್​-ಕಪಿಲ್​ ಶರ್ಮಾ
TV9 Web
| Edited By: |

Updated on: Feb 07, 2022 | 9:32 PM

Share

ಅಕ್ಷಯ್​ ಕುಮಾರ್ (Akshay Kumar)​ ಅವರು ವೇಗವಾಗಿ ಸಿನಿಮಾ ಮಾಡುವುದರಲ್ಲಿ ಎತ್ತಿದ ಕೈ. ವರ್ಷಕ್ಕೆ ಅವರ ನಟನೆಯ ಮೂರರಿಂದ ನಾಲ್ಕು ಸಿನಿಮಾಗಳು ತೆರೆಗೆ ಬರುತ್ತವೆ. ಪ್ರತಿ ಚಿತ್ರಕ್ಕೂ ಅವರು ದೊಡ್ಡ ಮಟ್ಟದಲ್ಲಿ ಪ್ರಚಾರ ಕೊಡುತ್ತಾರೆ. ಪ್ರತಿ ಚಿತ್ರದ ಪ್ರಚಾರಕ್ಕೆ ಅಕ್ಷಯ್​ ಅವರು ‘ದಿ ಕಪಿಲ್​ ಶರ್ಮಾ ಶೋ’ಗೆ (The Kapil Sharma Show) ಆಗಮಿಸುತ್ತಾರೆ. ಕಪಿಲ್ ಶರ್ಮಾ ಹಾಗೂ ಅಕ್ಷಯ್​ ನಡುವೆ ಒಳ್ಳೆಯ ಗೆಳೆತನವಿದೆ. ಇದು ಅನೇಕ ಬಾರಿ ಸಾಬೀತಾಗಿದೆ. ಆದರೆ, ಅವರ ಮುಂದಿನ ಚಿತ್ರ ‘ಬಚ್ಚನ್​ ಪಾಂಡೆ’ (Bachchan Pandey) ಸಿನಿಮಾದ ಪ್ರಚಾರಕ್ಕಾಗಿ ಅಕ್ಷಯ್​ ಅವರು ‘ದಿ ಕಪಿಲ್​ ಶರ್ಮಾ ಶೋ’ಗೆ ಬರದಿರಲು ನಿರ್ಧರಿಸಿದ್ದಾರೆ. ಇದಕ್ಕೆ ಅವರು ಕಾರಣವನ್ನೂ ನೀಡಿದ್ದಾರೆ ಎನ್ನಲಾಗಿದೆ.

‘ಬಚ್ಚನ್​ ಪಾಂಡೆ’ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ ಅವರಿಗೆ ಡಿಫರೆಂಟ್​ ಗೆಟಪ್​ ಇದೆ. ಅವರ ಜೊತೆ ಕೃತಿ ಸನೋನ್​, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಫರ್ಹಾದ್​ ಸಮ್ಜಿ ನಿರ್ದೇಶನ ಮಾಡಿದ್ದು, ಸಾಜಿದ್​ ನಾಡಿಯದ್ವಾಲಾ ನಿರ್ಮಾಣ ಮಾಡಿದ್ದಾರೆ. ಮಾ.18ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಅಕ್ಷಯ್​ ಬ್ಯುಸಿ ಇದ್ದಾರೆ. ಆದರೆ, ಅವರು ‘ಕಪಿಲ್​ ಶರ್ಮಾ ಶೋ’ಗೆ ಬರುತ್ತಿಲ್ಲ ಎಂದು ಹಿಂದುಸ್ತಾನ್​ ಟೈಮ್ಸ್​ ವರದಿ ಮಾಡಿದೆ.

ಕೊರೊನಾ ಕಾರಣಗಳಿಂದ ಅಕ್ಷಯ್​ ಕುಮಾರ್​ ವೇಗಕ್ಕೆ ಕೊಂಚ ಪೆಟ್ಟು ಬಿದ್ದಿದೆ. ಆದರೂ ಸಹ, ಅಕ್ಷಯ್​ ಕುಮಾರ್​ ಅವರ ಸಿನಿಮಾಗಳು ಬ್ಯಾಕ್​ ಟು ಬ್ಯಾಕ್​ ರಿಲೀಸ್​ ಆಗುತ್ತಿವೆ. ಕಳೆದ ವರ್ಷಾಂತ್ಯದಲ್ಲಿ ಅವರ ‘ಅತರಂಗಿ ರೇ’ ಸಿನಿಮಾ ಒಟಿಟಿ ಮೂಲಕ ಬಿಡುಗಡೆ ಆಯಿತು. ಈ ಚಿತ್ರದ ಪ್ರಚಾರಕ್ಕೆ ಅಕ್ಷಯ್​ ಕುಮಾರ್​ ಅವರು ‘ದಿ ಕಪಿಲ್​ ಶರ್ಮಾ ಶೋ’ಗೆ ಬಂದಿದ್ದರು. ಈ ವೇಳೆ ಒಂದು ವಿಚಾರ ಪ್ರಸ್ತಾಪ ಆಗಿತ್ತು.

ಈ ಹಿಂದೆ ಅಕ್ಷಯ್​ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂದರ್ಶನ ಮಾಡಿದ್ದರು. ಆಗ ಮೋದಿಗೆ ಮಾವಿನ ಹಣ್ಣಿನ ಬಗ್ಗೆ  ಅಕ್ಷಯ್​ ಕುಮಾರ್ ಪ್ರಶ್ನೆ ಮಾಡಿದ್ದರು. ಕಪಿಲ್ ಶರ್ಮಾ ತಮ್ಮ ಶೋನಲ್ಲಿ ಈ ವಿಚಾರದ ಬಗ್ಗೆ ಕುಹಕವಾಡಿದ್ದರು. ‘ನೀವು ಓರ್ವ ದೊಡ್ಡ ರಾಜಕಾರಣಿಯನ್ನು ಸಂದರ್ಶನ ಮಾಡಿದ್ದಿರಿ. ಈ ಸಂದರ್ಶನದಲ್ಲಿ ಮಾವಿನ ಹಣ್ಣಿನ ಬಗ್ಗೆ ಪ್ರಶ್ನೆಯನ್ನೂ ಕೇಳಿದ್ದಿರಿ’ ಎಂದು ನಗುತ್ತಲೇ ಮಾತನಾಡಿದ್ದರು ಕಪಿಲ್​. ಅಕ್ಷಯ್​ ಕುಮಾರ್ ‘ಧೈರ್ಯ ಇದ್ದರೆ ಅವರ ಹೆಸರನ್ನು ಹೇಳಿ’ ಎಂದು ಸವಾಲು ಹಾಕಿದ್ದರು. ಅವರ ಮಾತುಕತೆ ಹಾಸ್ಯ ರೀತಿಯಲ್ಲಿ ನಡೆದೇ ಇತ್ತು.

ಇದನ್ನು ಪ್ರಸಾರ ಮಾಡದಂತೆ ಅಕ್ಷಯ್​ ಕುಮಾರ್​ ಅವರು ಸವಿನಯದಿಂದ ಕಪಿಲ್​ ಶರ್ಮಾಗೆ ಮನವಿ ಮಾಡಿಕೊಂಡಿದ್ದರು. ಈ ಮನವಿಯನ್ನು ಕಪಿಲ್​ ಶರ್ಮಾ ವಾಹಿನಿಯವರಿಗೂ ತಲುಪಿಸಿದ್ದರು. ಆದರೆ, ಈ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಲೀಕ್​ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡುವವರೆಗೆ ಕಪಿಲ್​ ಶರ್ಮಾ ಶೋಗೆ ಬರದಿರಲು ಅವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇದನ್ನು ಅಕ್ಷಯ್​ ಕುಮಾರ್ ನಂಬಿಕೆ ದ್ರೋಹ ಎಂದು ಕರೆದಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ: ನೀರಜ್​ ಚೋಪ್ರಾಗೆ ಸಿನಿಮಾ ಆಫರ್​; ಅಕ್ಷಯ್​ ಕುಮಾರ್ ಬಯೋಪಿಕ್​ ಬಗ್ಗೆ ಏನಿದು ಅಪ್​ಡೇಟ್​?

ಅಕ್ಷಯ್​ ಕುಮಾರ್ ಸಿನಿಮಾ ಬ್ಯಾನ್​ ಮಾಡಿದ ಮೂರು ಪ್ರಮುಖ ರಾಷ್ಟ್ರಗಳು; ಬಾಕ್ಸ್​ ಆಫೀಸ್​ ಕಲೆಕ್ಷನ್​ಗೆ ಹೊಡೆತ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!