ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 03, 2021 | 9:09 PM

‘ಬಿಗ್​ ಬಾಸ್​ ಮಿನಿ ಸೀಸನ್​’ ಇದೇ ಮೊದಲ ಬಾರಿಗೆ ಪ್ರಸಾರಗೊಂಡು ಉತ್ತಮ ಪ್ರತಿಕ್ರಿಯೆ ಗಳಿಸಿಕೊಳ್ಳುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರು ಒಂದೆಡೆ ಸೇರಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಮನೆಯಲ್ಲಿ ನಾನಾ ರೀತಿಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಮಧ್ಯೆ ಅಕುಲ್​ ಬಾಲಾಜಿ ಆ್ಯಕ್ಷನ್​ ಮೂಲಕ ತೋರಿಸಿದ ಜನಪ್ರಿಯ ಹಾಡನ್ನು ಗೆಸ್​ ಮಾಡೋಕೆ ಮನೆಯ ಅನೇಕರು ಸೋತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸೆಲೆಬ್ರಿಟಿಗಳು ಆರು ದಿನ ಇದ್ದು ಬಂದಿದ್ದಾರೆ. ಅದನ್ನು ಟಿವಿಯಲ್ಲಿ ಕಳೆದ ಕೆಲ ವಾರಗಳಿಂದ ಪ್ರಸಾರ ಮಾಡಲಾಗುತ್ತಿದೆ. ಸುದೀಪ್​ ಜತೆ ಸ್ಪರ್ಧಿಗಳು ಸಂವಾದ ನಡೆಸಿದ ಕಾರ್ಯಕ್ರಮ ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಮನೆ ಮಂದಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಹಾಡುಗಳ ಹೆಸರನ್ನು ಆ್ಯಕ್ಟಿಂಗ್​ ಮಾಡಿ ತೋರಿಸಬೇಕಿತ್ತು. ಈ ವೇಳೆ ಅಕುಲ್​ ಹಾಡೊಂದನ್ನು ಆ್ಯಕ್ಟ್​ ಮಾಡಿ ತೋರಿಸಿದ್ದರು. ಮನೆಯ ಅನೇಕರಿಗೆ ಇದು ಯಾವ ಹಾಡು ಎಂದು ಪತ್ತೆ ಹಚ್ಚೋಕೆ ಸಾಧ್ಯವಾಗಿಲ್ಲ. ಕೆಲವರು ಈ ಹಾಡು ಯಾವುದು ಎಂದು ಪತ್ತೆ ಹಚ್ಚೋಕೆ ಒದ್ದಾಡಿದರು.

ಆಗ ವೈಷ್ಣವಿ ಅವರು ಈ ಹಾಡು ಯಾವುದು ಎಂಬುದನ್ನು ಕಂಡು ಹಿಡಿದರು. ‘ಯಮ್ಮೋ ಯಮ್ಮೋ ನೋಡ್ದೆ..’ ಹಾಡು ಇದು ಎಂದರು. ಅಕುಲ್​ ಹೌದು ಎಂದು ಒಪ್ಪಿಕೊಂಡರು.

ಕಿಚ್ಚ ಸುದೀಪ್​ ನಿರೂಪಣೆ ಮಾಡಲಿರುವ ಎಪಿಸೋಡ್​ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸೀರಿಯಲ್​ ಕಲಾವಿದರ ಜತೆ ಅವರ ಸಂವಾದ ಮಜವಾಗಿತ್ತು ಎಂಬುದು ಈಗಾಗಲೇ ಪ್ರೋಮೋಗಳ ಮೂಲಕ ಸಾಬೀತಾಗಿದೆ. ಶನಿವಾರ (ಸೆಪ್ಟೆಂಬರ್​ 4) ಹಾಗೂ ಭಾನುವಾರ (ಸೆಪ್ಟೆಂಬರ್​ 5) ಮಧ್ಯಾಹ್ನ 3 ಗಂಟೆಗೆ ಈ ಶೋ ಪ್ರಸಾರವಾಗಲಿದೆ.

ಇದನ್ನೂ ಓದಿ: ನಿದ್ರೆಯಲ್ಲಿ ಹುಡುಗಿ ಹೆಸರು ಹೇಳಿ ಹೆಂಡತಿ ಬಳಿ ಸಿಕ್ಕಿ ಬಿದ್ದಿದ್ದ ಅಕುಲ್​ ಬಾಲಾಜಿ; ನಂತರ ಉಳಿಸಿದ್ದು ಯಾರು?

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ