AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 03, 2021 | 9:09 PM

Share

‘ಬಿಗ್​ ಬಾಸ್​ ಮಿನಿ ಸೀಸನ್​’ ಇದೇ ಮೊದಲ ಬಾರಿಗೆ ಪ್ರಸಾರಗೊಂಡು ಉತ್ತಮ ಪ್ರತಿಕ್ರಿಯೆ ಗಳಿಸಿಕೊಳ್ಳುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರು ಒಂದೆಡೆ ಸೇರಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಮನೆಯಲ್ಲಿ ನಾನಾ ರೀತಿಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಮಧ್ಯೆ ಅಕುಲ್​ ಬಾಲಾಜಿ ಆ್ಯಕ್ಷನ್​ ಮೂಲಕ ತೋರಿಸಿದ ಜನಪ್ರಿಯ ಹಾಡನ್ನು ಗೆಸ್​ ಮಾಡೋಕೆ ಮನೆಯ ಅನೇಕರು ಸೋತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸೆಲೆಬ್ರಿಟಿಗಳು ಆರು ದಿನ ಇದ್ದು ಬಂದಿದ್ದಾರೆ. ಅದನ್ನು ಟಿವಿಯಲ್ಲಿ ಕಳೆದ ಕೆಲ ವಾರಗಳಿಂದ ಪ್ರಸಾರ ಮಾಡಲಾಗುತ್ತಿದೆ. ಸುದೀಪ್​ ಜತೆ ಸ್ಪರ್ಧಿಗಳು ಸಂವಾದ ನಡೆಸಿದ ಕಾರ್ಯಕ್ರಮ ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಮನೆ ಮಂದಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಹಾಡುಗಳ ಹೆಸರನ್ನು ಆ್ಯಕ್ಟಿಂಗ್​ ಮಾಡಿ ತೋರಿಸಬೇಕಿತ್ತು. ಈ ವೇಳೆ ಅಕುಲ್​ ಹಾಡೊಂದನ್ನು ಆ್ಯಕ್ಟ್​ ಮಾಡಿ ತೋರಿಸಿದ್ದರು. ಮನೆಯ ಅನೇಕರಿಗೆ ಇದು ಯಾವ ಹಾಡು ಎಂದು ಪತ್ತೆ ಹಚ್ಚೋಕೆ ಸಾಧ್ಯವಾಗಿಲ್ಲ. ಕೆಲವರು ಈ ಹಾಡು ಯಾವುದು ಎಂದು ಪತ್ತೆ ಹಚ್ಚೋಕೆ ಒದ್ದಾಡಿದರು.

ಆಗ ವೈಷ್ಣವಿ ಅವರು ಈ ಹಾಡು ಯಾವುದು ಎಂಬುದನ್ನು ಕಂಡು ಹಿಡಿದರು. ‘ಯಮ್ಮೋ ಯಮ್ಮೋ ನೋಡ್ದೆ..’ ಹಾಡು ಇದು ಎಂದರು. ಅಕುಲ್​ ಹೌದು ಎಂದು ಒಪ್ಪಿಕೊಂಡರು.

ಕಿಚ್ಚ ಸುದೀಪ್​ ನಿರೂಪಣೆ ಮಾಡಲಿರುವ ಎಪಿಸೋಡ್​ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸೀರಿಯಲ್​ ಕಲಾವಿದರ ಜತೆ ಅವರ ಸಂವಾದ ಮಜವಾಗಿತ್ತು ಎಂಬುದು ಈಗಾಗಲೇ ಪ್ರೋಮೋಗಳ ಮೂಲಕ ಸಾಬೀತಾಗಿದೆ. ಶನಿವಾರ (ಸೆಪ್ಟೆಂಬರ್​ 4) ಹಾಗೂ ಭಾನುವಾರ (ಸೆಪ್ಟೆಂಬರ್​ 5) ಮಧ್ಯಾಹ್ನ 3 ಗಂಟೆಗೆ ಈ ಶೋ ಪ್ರಸಾರವಾಗಲಿದೆ.

ಇದನ್ನೂ ಓದಿ: ನಿದ್ರೆಯಲ್ಲಿ ಹುಡುಗಿ ಹೆಸರು ಹೇಳಿ ಹೆಂಡತಿ ಬಳಿ ಸಿಕ್ಕಿ ಬಿದ್ದಿದ್ದ ಅಕುಲ್​ ಬಾಲಾಜಿ; ನಂತರ ಉಳಿಸಿದ್ದು ಯಾರು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ