AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ಆ್ಯಕ್ಷನ್ ಮೂಲಕ ತೋರಿಸಿದ ಈ ಹಾಡು ಯಾವುದು ಎಂದು ಊಹಿಸ್ತೀರಾ?
TV9 Web
| Edited By: |

Updated on: Sep 03, 2021 | 9:09 PM

Share

‘ಬಿಗ್​ ಬಾಸ್​ ಮಿನಿ ಸೀಸನ್​’ ಇದೇ ಮೊದಲ ಬಾರಿಗೆ ಪ್ರಸಾರಗೊಂಡು ಉತ್ತಮ ಪ್ರತಿಕ್ರಿಯೆ ಗಳಿಸಿಕೊಳ್ಳುತ್ತಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರು ಒಂದೆಡೆ ಸೇರಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಮನೆಯಲ್ಲಿ ನಾನಾ ರೀತಿಯ ಟಾಸ್ಕ್​ಗಳನ್ನು ನೀಡಲಾಗುತ್ತಿದೆ. ಈ ಮಧ್ಯೆ ಅಕುಲ್​ ಬಾಲಾಜಿ ಆ್ಯಕ್ಷನ್​ ಮೂಲಕ ತೋರಿಸಿದ ಜನಪ್ರಿಯ ಹಾಡನ್ನು ಗೆಸ್​ ಮಾಡೋಕೆ ಮನೆಯ ಅನೇಕರು ಸೋತಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಸೆಲೆಬ್ರಿಟಿಗಳು ಆರು ದಿನ ಇದ್ದು ಬಂದಿದ್ದಾರೆ. ಅದನ್ನು ಟಿವಿಯಲ್ಲಿ ಕಳೆದ ಕೆಲ ವಾರಗಳಿಂದ ಪ್ರಸಾರ ಮಾಡಲಾಗುತ್ತಿದೆ. ಸುದೀಪ್​ ಜತೆ ಸ್ಪರ್ಧಿಗಳು ಸಂವಾದ ನಡೆಸಿದ ಕಾರ್ಯಕ್ರಮ ಈ ವಾರಾಂತ್ಯದಲ್ಲಿ ಪ್ರಸಾರವಾಗಲಿದೆ. ಇದಕ್ಕಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. ಈ ಮಧ್ಯೆ ಮನೆ ಮಂದಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ.

ಅಕುಲ್​ ಬಾಲಾಜಿ ನಿರೂಪಣೆ ಮೂಲಕ ಎಲ್ಲರ ಗಮನ ಸೆಳೆದವರು. ಅವರು ಬಿಗ್​ ಬಾಸ್​ ಮನೆಯಲ್ಲಿ ಸಾಕಷ್ಟು ಮನರಂಜನೆ ನೀಡುತ್ತಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಹಾಡುಗಳ ಹೆಸರನ್ನು ಆ್ಯಕ್ಟಿಂಗ್​ ಮಾಡಿ ತೋರಿಸಬೇಕಿತ್ತು. ಈ ವೇಳೆ ಅಕುಲ್​ ಹಾಡೊಂದನ್ನು ಆ್ಯಕ್ಟ್​ ಮಾಡಿ ತೋರಿಸಿದ್ದರು. ಮನೆಯ ಅನೇಕರಿಗೆ ಇದು ಯಾವ ಹಾಡು ಎಂದು ಪತ್ತೆ ಹಚ್ಚೋಕೆ ಸಾಧ್ಯವಾಗಿಲ್ಲ. ಕೆಲವರು ಈ ಹಾಡು ಯಾವುದು ಎಂದು ಪತ್ತೆ ಹಚ್ಚೋಕೆ ಒದ್ದಾಡಿದರು.

ಆಗ ವೈಷ್ಣವಿ ಅವರು ಈ ಹಾಡು ಯಾವುದು ಎಂಬುದನ್ನು ಕಂಡು ಹಿಡಿದರು. ‘ಯಮ್ಮೋ ಯಮ್ಮೋ ನೋಡ್ದೆ..’ ಹಾಡು ಇದು ಎಂದರು. ಅಕುಲ್​ ಹೌದು ಎಂದು ಒಪ್ಪಿಕೊಂಡರು.

ಕಿಚ್ಚ ಸುದೀಪ್​ ನಿರೂಪಣೆ ಮಾಡಲಿರುವ ಎಪಿಸೋಡ್​ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದಾರೆ. ಸೀರಿಯಲ್​ ಕಲಾವಿದರ ಜತೆ ಅವರ ಸಂವಾದ ಮಜವಾಗಿತ್ತು ಎಂಬುದು ಈಗಾಗಲೇ ಪ್ರೋಮೋಗಳ ಮೂಲಕ ಸಾಬೀತಾಗಿದೆ. ಶನಿವಾರ (ಸೆಪ್ಟೆಂಬರ್​ 4) ಹಾಗೂ ಭಾನುವಾರ (ಸೆಪ್ಟೆಂಬರ್​ 5) ಮಧ್ಯಾಹ್ನ 3 ಗಂಟೆಗೆ ಈ ಶೋ ಪ್ರಸಾರವಾಗಲಿದೆ.

ಇದನ್ನೂ ಓದಿ: ನಿದ್ರೆಯಲ್ಲಿ ಹುಡುಗಿ ಹೆಸರು ಹೇಳಿ ಹೆಂಡತಿ ಬಳಿ ಸಿಕ್ಕಿ ಬಿದ್ದಿದ್ದ ಅಕುಲ್​ ಬಾಲಾಜಿ; ನಂತರ ಉಳಿಸಿದ್ದು ಯಾರು?

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು